ಭಾರತ್‌ ಬಂದ್‌ಗಿಲ್ಲ ಜನ ಬೆಂ”ಬಲ’

ಎಲ್ಲೆಡೆ ಜನಜೀವನ ಸಾಮಾನ್ಯರಸ್ತೆ ಮೇಲೆ ಜನ ವಿರಳಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ

Team Udayavani, Jan 9, 2020, 11:28 AM IST

9-January-3

ಹರಿಹರ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ, ಜನವಿರೋಧಿ ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ ಬುಧವಾರ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಕೆನರಾ ಬ್ಯಾಂಕ್‌ ಹೊರತುಪಡಿಸಿದರೆ ಉಳಿದೆಲ್ಲಾ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಹಳೆ ಪಿ.ಬಿ. ರಸ್ತೆಯಲ್ಲಿನ ಜಯಶ್ರೀ ಟಾಕೀಸ್‌ ಪಕ್ಕದ ಹಾಗೂ ಮಹಾರಾಷ್ಟ್ರ ಬ್ಯಾಂಕ್‌ ಸಮೀಪದ ಕೆನರಾ ಬ್ಯಾಂಕ್‌ನ ಶಾಖೆಗಳು ಬುಧವಾರ ಬೆಳಿಗ್ಗೆಯಿಂದಲೂ ಬಂದ್‌ ಆಗಿದ್ದವು.

ಬಹುತೇಕ ರಾಷ್ಟ್ರೀಕೃತ ಬ್ಯಾಂಕುಗಳ ಸಿಬ್ಬಂದಿ ಮುಷ್ಕರಕ್ಕೆ ನೈತಿಕ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದ ಪರಿಣಾಮ ಸಿಬ್ಬಂದಿ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಉಳಿದಂತೆ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು, ಸರ್ಕಾರಿ-ಖಾಸಗಿ ಕಚೇರಿಗಳು, ಚಿತ್ರಮಂದಿರಗಳು, ಪೆಟ್ರೋಲ್‌ ಬಂಕ್‌ ನಿತ್ಯದಂತೆ ಕಾರ್ಯ ನಿರ್ವಹಿಸಿದವು.

ರಾಜ್ಯ ಸಾರಿಗೆ ಸಂಸ್ಥೆಯ ಹಾಗೂ ಖಾಸಗೀ ವಾಹನಗಳ ಸಂಚಾರಕ್ಕೆ ಯಾವುದೇ ಅಡೆತಡೆ ಇರಲಿಲ್ಲ. ಎಲ್ಲಾ ಲೋಕಲ್‌ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳು ನಿಗದಿತ ಸಮಯಕ್ಕೆ ಸಂಚರಿಸಿದವು. ಆದರೆ ಬಂದ್‌ ನಿಮಿತ್ತ ಬಸ್‌ ಸಂಚಾರ, ಬ್ಯಾಂಕ್‌ ಸೇವೆಗಳಲ್ಲಿ ವ್ಯತ್ಯಯವಾಗಬಹುದೆಂಬ ನಿರೀಕ್ಷೆಯಲ್ಲಿ ಗ್ರಾಮಸ್ಥರು ನಗರಕ್ಕೆ ಬರಲು ಹಿಂದೇಟು ಹಾಕಿದ್ದರಿಂದ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು.

ನಗರದ ಅಂಗಡಿ-ಮುಂಗಟ್ಟುಗಳಲ್ಲಿ ವ್ಯಾಪಾರ ಕ್ಷೀಣವಾಗಿತ್ತು. ಬ್ಯಾಂಕ್‌, ಸರ್ಕಾರಿ ಕಚೇರಿಗಳಲ್ಲೂ ಎಂದಿನಂತೆ ಜನಸಂದಣಿ ಇರಲಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಮುಷ್ಕರ ನಡೆದರೂ ಪ್ರತಿಪಕ್ಷ ಕಾಂಗ್ರೆಸ್‌ ಸೇರಿದಂತೆ ಯಾವುದೇ ರಾಜಕೀಯ ಪಕ್ಷ, ವ್ಯಾಪಾರಿ ಸಂಘಟನೆ, ರೈತ ಸಂಘಟನೆಗಳಗಾಲಿ, ಅಂಗನವಾಡಿ ನೌಕರರಾಗಲಿ ಮುಷ್ಕರ ಬೆಂಬಲಿಸಿ ಪ್ರತಿಭಟನೆ ನಡೆಸಲಿಲ್ಲ.

ಕಾರ್ಮಿಕ ಸಂಘಟನೆಗಳೇ ಕಾಣಲಿಲ್ಲ: ಎಐಟಿಯುಸಿ ಸೇರಿದಂತೆ ಎಡಪಕ್ಷ ಬೆಂಬಲಿತ ಬಹುತೇಕ ಕಾರ್ಮಿಕ ಸಂಘಟನೆಗಳು ನಗರದಲ್ಲಿ ಹಿಂದಿನಿಂದಲೂ ಅಸ್ತಿತ್ವದಲ್ಲಿವೆ. ಆದರೆ ಕೇಂದ್ರ ಮಂಡಳಿಯ ಸೂಚನೆಯಿದ್ದರೂ ಬುಧವಾರ ಮಾತ್ರ ಯಾವುದೇ ಕಾರ್ಮಿಕ ಸಂಘಟನೆ ಬೀದಿಗಿಳಿದು ಹೋರಾಟ ನಡೆಸಲಿಲ್ಲ.

ಸಮೀಪದ ಕುಮಾರಪಟ್ಟಣಂನಲ್ಲಿರುವ ಹರಿಹರ ಪಾಲಿಫೈಬರ್ ಕಾರ್ಖಾನೆ ಕಾರ್ಮಿಕರು ಮಾತ್ರ ಕಾರ್ಖಾನೆ ಮುಂಭಾಗದಿಂದ ಮೆರವಣಿಗೆ ಮೂಲಕ ಪೊಲೀಸ್‌ ಠಾಣೆ ಪಕ್ಕದ ಕಚೇರಿ ತಲುಪಿ, ಅಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ಖಂಡಿಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.