ಕೊಳಚೆ ಪ್ರದೇಶ ನಿವಾಸಿಗಳ ಗಂಟಲು ದ್ರವ ಸಂಗ್ರಹ
Team Udayavani, Jul 1, 2020, 1:44 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹರಿಹರ: ನಗರದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರಾದ್ಯಂತ ಇರುವ ವಿವಿಧ ಕೊಳಚೆ ಪ್ರದೇಶಗಳ ನಿವಾಸಿಗಳ ಗಂಟಲು ದ್ರಾವಣ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಇಲ್ಲಿನ ಬೆಂಕಿ ನಗರ, ಇಂದಿರಾನಗರಗಳಲ್ಲಿರುವ ಕೊಳಚೆ ಪ್ರದೇಶದ ಮಂಗಳವಾರ 55 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಮಕ್ಕಳು ಹಾಗೂ ಕಾಯಿಲೆ ಪೀಡಿತರ ಗಂಟಲು ದ್ರವವನ್ನು ಸಂಗ್ರಹಿಸಲಾಯಿತು.
ಬೆಳಿಗ್ಗೆ ಎರಡೂ ಬಡಾವಣೆಗಳ ಬೀದಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ ಮಾಡಿ, ನಂತರ ದ್ರವ ಸಂಗ್ರಹಣೆ ಕಾರ್ಯ ನಡೆಸಲಾಯಿತು. ಮಂಗಳವಾರ ಸುಮಾರು ನೂರಕ್ಕೂ ಹೆಚ್ಚು ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, ಬುಧವಾರವೂ ಕಾರ್ಯ ಮುಂದುವರಿಯಲಿದೆ ಎಂದು ಕಿರಿಯ ಪ್ರಯೋಗಾಲಯ ತಜ್ಞ ವಿ.ಆರ್. ಸಂತೋಷ್ಕುಮಾರ್ ಮಾಹಿತಿ ನೀಡಿದ್ದಾರೆ.
ನಗರಸಭೆ ಸದಸ್ಯೆ ಶಾಹಿನಾ ದಾದಾ ಪೀರ್, ಮುಖಂಡರಾದ ಶಫಿವುಲ್ಲಾ, ದಾದಾಪೀರ್ ಭಾನುವಳ್ಳಿ, ನಗರಸಭೆಯ ಆರೋಗ್ಯ ನಿರೀಕ್ಷಕ ಸಂತೋಷ್ ನಾಯಕ್, ಸಿಬ್ಬಂದಿ ಪರಸಪ್ಪ, ಬಿ.ಎನ್. ಮಂಜುನಾಥ್, ಹಳೇ ಕಚೇರಿ ಬಸವರಾಜ್, ಮಲ್ಲಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ