ಹರಿಹರ: ಆಸ್ತಿ ವಿಚಾರದ ಗಲಾಟೆ; ಅಣ್ಣನನ್ನು ಇರಿದು ಕೊಂದ ತಮ್ಮ
Team Udayavani, May 15, 2023, 12:42 PM IST
ದಾವಣಗೆರೆ: ಆಸ್ತಿ ವಿಚಾರವಾಗಿ ಅಣ್ಣನನ್ನು ತಮ್ಮ ಚಾಕುನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಹರಿಹರದಲ್ಲಿ ಭಾನುವಾರ ರಾತ್ರಿ ನಡೆದಿದೆ
ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (31) ಕೊಲೆಯಾದ ವ್ಯಕ್ತಿ. ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು ನಗರದ ಭರಂಪುರ ನಿವಾಸಿ ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮ ಕೊನೆಯ ಮಗನಾದ ಕುಮಾರ್ ನಡುವೆ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿತ್ತು.
ಇವರಿಬ್ಬರ ಮಧ್ಯೆ ಮನಸ್ತಾಪವಿದ್ದು ಪದೇ ಪದೇ ಸಣ್ಣಪುಟ್ಟ ಜಗಳ ನಡೆಯುತ್ತಿದ್ದು ಭಾನುವಾರ ರಾತ್ರಿ ದಾವಣಗೆರೆಯಿಂದ ಹರಿಹರಕ್ಕೆ ವಾಪಸ್ ಬರುತ್ತಿರುವ ಮಾರ್ಗ ಮಧ್ಯೆ ಕುಮಾರ್ ಮೇಲೆ ತಮ್ಮ ರಾಜು ಮತ್ತು ಮಾರುತಿ ಎಂಬುವವರು ಹಲ್ಲೆ ಮಾಡಿದ್ದಾರೆ. ಕೂಡಲೇ ಕುಮಾರ್ ನನ್ನು ಹರಿಹರ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿಯೇ ಕುಮಾರ್ ಮೇಲೆ ರಾಜು ಹಲ್ಲೆ ನಡೆಸಿ ಚಾಕುವಿನಿಂದ ತಿವಿದಿದ್ದಾರೆ. ತೀವ್ರವಾಗಿ ರಕ್ತಸಾವ್ರಗೊಂಡ ಕುಮಾರ್ ಅವರನ್ನು ದಾವಣಗೆರೆಗೆ ಕರೆತರುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:Soft Signal ನಿಯಮವನ್ನೇ ತೆಗೆದು ಹಾಕಿದ ICC: ಏನಿದು ಸಾಫ್ಟ್ ಸಿಗ್ನಲ್? ಇಲ್ಲಿದೆ ಡಿಟೈಲ್ಸ್
ಕುಮಾರ್ ಪತ್ನಿ ರೇಖಾ ಹರಿಹರ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಜು ಹಾಗೂ ಮಾರುತಿಯನ್ನು ಪೋಲೀಸರು ಬಂಧಿಸಿದ್ದಾರೆ.
ಘಟನಾ ಸ್ಥಳಕ್ಕೆ ದಾವಣಗೆರೆ ಉಪವಿಭಾಗ ಅಧೀಕ್ಷಕರಾದ ಕನ್ನಿಕಾ ಸಕ್ರಿವಾಲ್, ನಗರ ಠಾಣೆ ಇನ್ಸ್ಪೆಕ್ಟರ್ ದೇವಾನಂದ್ ಟಿ, ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ