ಹರಿಹರೇಶ್ವರ ಬ್ರಹ್ಮ ರಥೋತ ರಥೋತ್ಸವ


Team Udayavani, Feb 28, 2021, 3:53 PM IST

Harihareswar Swami Fair

ಹರಿಹರ: “ದಕ್ಷಿಣ ಕಾಶಿ’ ಖ್ಯಾತಿಯ ಶ್ರೀ ಹರಿಹರೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ನಗರದಲ್ಲಿ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ-ಸಂಭ್ರಮದಿಂದ ನೆರವೇರಿತು.  ಬೆಳಗ್ಗೆ 11:15ಕ್ಕೆ ಮೇಘ ಲಗ್ನದ ಶುಭ ಮಹೂರ್ತದಲ್ಲಿ ಶಾಸಕ ಎಸ್‌. ರಾಮಪ್ಪ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಿಂದ. ಶಿವಮೊಗ್ಗ ವೃತ್ತದವರೆಗೆ ಭಕ್ತ ಜನರು ಹರ ಹರ ಮಹಾದೇವ್‌, ಗೋವಿಂದಾ.. ಗೋವಿಂದಾ… ಎಂದು ನಾಮಸ್ಮರಣೆ ಮಾಡುತ್ತಾ ರಥ ಎಳೆದರು.

ಕೆಲವರು ತೇರಿನ ಮುಕುಟಕ್ಕೆ ಬಾಳೆಹಣ್ಣು, ಹೂವು, ಉತ್ತತ್ತಿ ಎಸೆದರು. ತೇರಿನ ಗಾಲಿಗಳಿಗೆ ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು. ರಥ ಶಿವಮೊಗ್ಗ ವೃತ್ತಕ್ಕೆ ಆಗಮಿಸುತ್ತಿದ್ದಂತೆ ನಗರದ ಶಿವಮೊಗ್ಗ,  ಹರಪನಹಳ್ಳಿ ಹಾಗೂ ದಾವಣಗೆರೆ ಮಾರ್ಗ ಬಂದ್‌ ಆಗಿದ್ದರಿಂದ ಒಂದು ಕಿಮೀಗೂ ಹೆಚ್ಚು ದೂರ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ಮಾಜಿ ಶಾಸಕ ಬಿ.ಪಿ. ಹರೀಶ್‌, ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ಎಂ. ವೀರೇಶ್‌ ಹನಗವಾಡಿ, ನಗರಸಭೆ ಸದಸ್ಯರು, ದೇವಸ್ಥಾನ ಸಮಿತಿ ಸದಸ್ಯರು, ಜನಪ್ರತಿನಿಧಿ ಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವಕ್ಕೂ ಮುನ್ನ ಶ್ರೀ ಹರಿಹರೇಶ್ವರ ಸ್ವಾಮಿ ಹಾಗೂ ಲಕ್ಷ್ಮೀದೇವಿಗೆ ಗಣಪತಿ ಪೂಜೆ, ರುದ್ರಾಭಿಷೇಕ, ಅಲಂಕಾರ, ನವಗ್ರಹ ಪೂಜೆ, ಜಪ, ಹೋಮ ಹವನಾದಿಗಳನ್ನು ನಡೆಸಲಾಯಿತು. ಗ್ರಾಮದ ಶಾನಭೋಗರು, ಪಟೇಲರು ಹಾಗೂ ಮುಜರಾಯಿ ಇಲಾಖಾಧಿ ಕಾರಿಗಳು ಉಪಸ್ಥಿತರಿದ್ದರು. ನಂತರ ಪುರಾಣ ಪ್ರಸಿದ್ಧ ಹರಿಹರೇಶ್ವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ರಥದೊಳಗೆ ಪ್ರತಿಷ್ಠಾಪಿಸಲಾಯಿತು.

ಪ್ರತಿ ವರ್ಷ ನಡೆಯುವ ರಥೋತ್ಸವಕ್ಕೆ ಬೆಂಗಳೂರು, ಹಾಸನ, ಅರಸೀಕೆರೆ, ಕಡೂರು, ಬೀರೂರು ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಮೈಲಾರ ಜಾತ್ರೆಗೆ ಹೋಗುವ ಮತ್ತು ಅಲ್ಲಿಂದ ಬರುವ ಭಕ್ತರು ಹರಿಹರೇಶ್ವರನ ದರ್ಶನ ಪಡೆಯುವುದು ವಾಡಿಕೆ. ಆದರೆ ಮೈಲಾರ ಜಾತ್ರೆ ರದ್ದಾದ ಪರಿಣಾಮ ಭಕ್ತರ ಸಂಖ್ಯೆ ವಿರಳವಾಗಿತ್ತು. ಫೆ. 28 ರಂದು ಭಾನುವಾರ ಸ್ಥಾಪಿತ ದೇವತಾ ಪೂಜೆ, ನಾಂದಿ ಕಂಕಣ ವಿಸರ್ಜನೆ, ಧ್ವಜ ವಿಸರ್ಜನೆ, ಅವಭೃತ ಸ್ನಾನಗಳೊಂದಿಗೆ ರಥೋತ್ಸವ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.