ಮನೆಗೆ ನುಗ್ಗಿದ ಮಳೆ ನೀರು
Team Udayavani, Jun 2, 2020, 12:09 PM IST
ದಾವಣಗೆರೆ: ತಾಲೂಕಿನ ಹೆಮ್ಮನಬೇತೂರು ಗ್ರಾಮದಲ್ಲಿ ಮಳೆಯ ಆರ್ಭಟ.
ದಾವಣಗೆರೆ: ಸೋಮವಾರ ಸಂಜೆ ಸುರಿದ ಭಾರೀ ಮಳೆಯಿಂದ ದಾವಣಗೆರೆ ತಾಲೂಕಿನ ಹೆಮ್ಮನಬೇತೂರು ಗ್ರಾಮದ ನೂರಾರು ಮನೆಗಳಿಗೆ ನೀರು ನುಗ್ಗಿದ
ಪರಿಣಾಮ ಜನರು ತೀವ್ರ ತೊಂದರೆ ಅನುಭವಿಸುವಂತಾಯಿತು. ಇದ್ದಕ್ಕಿದ್ದಂತೆ ಸುರಿದ ಭಾರೀ ಮಳೆಯಿಂದ ರಸ್ತೆಯಲ್ಲಿನ ನೀರು ಮನೆಗಳಿಗೆ ನುಗ್ಗತೊಡಗಿತು. ಜನರು ಎಷ್ಟೇ ಹರಸಾಹಸಪಟ್ಟರು ಮಳೆಯ ನೀರು ನುಗ್ಗಿದ್ದರಿಂದ ಅಸಹಾಯಕರಾದರು. ಎರಡು ಗಂಟೆಗೂ ಅಧಿಕ ಹೊತ್ತು ಸುರಿದ ಮಳೆಯ ಪರಿಣಾಮವಾಗಿ ಬೈಕ್ ಕೊಚ್ಚಿಕೊಂಡು ಹೋದವು. ಮನೆಯಲ್ಲಿದ್ದ ಕೋಳಿ, ಸಾಮಾನು, ಸರಂಜಾಮು ನೀರಿನಲ್ಲಿ ತೇಲಿಹೊದವು. ಕುಂಭದ್ರೋಣ ಮಳೆಯ ಪರಿಣಾಮ ಗ್ರಾಮದ ಪ್ರತಿ ಮನೆಗೆ ನೀರು ನುಗ್ಗಿದ್ದರಿಂದ ಜನರು ರಾತ್ರಿಯಿಡೀ ನೀರು ಹೊರ ಹಾಕಬೇಕಾಯಿತು.
ಹಿಂದೆಂದು ಕಂಡು ಕೇಳರಿಯದ ಮಳೆಗೆ ಜನರು ಅಕ್ಷರಶಃ ತತ್ತರಿಸಿ ಹೋಗುವಂತಾಗಿತ್ತು. ಮಳೆಯಿಂದ ಭಾರೀ ಪ್ರಮಾಣದ ಹಾನಿ, ತೊಂದರೆ ಆಗಿದೆ. ಕೂಡಲೇ
ಕಂದಾಯ ಸಂಬಂಧಿತ ಇಲಾಖೆ ಅಧಿಕಾರಿಗಳು ಭೇಟಿ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?