ಜಿಲ್ಲಾದ್ಯಂತ ಭಾರೀ ಮಳೆ; ಅಪಾರ ಹಾನಿ

9.10 ಲಕ್ಷ ರೂ. ಮೌಲ್ಯದ ಬೆಳೆ, ಆಸ್ತಿ ನಷ್ಟ

Team Udayavani, Apr 21, 2022, 2:43 PM IST

banana

ದಾವಣಗೆರೆ: ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಒಟ್ಟು 9.10 ಲಕ್ಷ ರೂಪಾಯಿ ಮೌಲ್ಯದ ಬೆಳೆ, ಆಸ್ತಿಗೆ ಹಾನಿಯಾಗಿದೆ.

ಜಿಲ್ಲಾ ಕೇಂದ್ರ ದಾವಣಗೆರೆಯಲ್ಲಿ ಮಂಗಳವಾರ ರಾತ್ರಿ 11 ಗಂಟೆಯವರೆಗೆ ಮಳೆಯ ಸೂಚನೆಯೇ ಇರಲಿಲ್ಲ. ಮಿಂಚು, ಗುಡುಗಿನೊಂದಿಗೆ ಏಕಾಏಕಿ ಮಳೆ ಪ್ರಾರಂಭವಾಯಿತು. ಸಿಡಿಲಿನ ಅಬ್ಬರಕ್ಕೆ ಜನರು ಬೆಚ್ಚಿ ಬಿದ್ದರು. ಒಂದೂವರೆ ಗಂಟೆಗೂ ಹೆಚ್ಚು ಕಾಲ ಧೋ ಎಂದು ಮಳೆ ಸುರಿಯಿತು. ಮಳೆಯ ಆರ್ಭಟ ಜೋರಾಗಿತ್ತು. ಕೆಲವು ಕಡೆ ಜನರು ಮಳೆ ನೀರು ನುಗ್ಗಿದ್ದರಿಂದ ತೊಂದರೆ ಅನುಭವಿಸಿದರು. ಕೆಲವಡೆ ಮರ-ಗಿಡಗಳು ಬಿದ್ದಿವೆ. ವಿದ್ಯುತ್‌ ಪೂರೈಕೆಯಲ್ಲಿನ ವ್ಯತ್ಯಯದಿಂದ ಕೆಲವೆಡೆ ತೀವ್ರ ಸಮಸ್ಯೆ ಉಂಟಾಗಿತ್ತು. ತಗ್ಗು ಪ್ರದೇಶಗಳ ಜನರು ರಾತ್ರಿಯಿಡೀ ಜಾಗರಣೆ ಮಾಡುವಂತಾಯಿತು. ಡಿಸಿಎಂ ಟೌನ್‌ಶಿಪ್‌ ಸೇರಿದಂತೆ ವಿವಿಧೆಡೆ ಟಿವಿ, ಫ್ರಿಜ್‌ ಸೇರಿದಂತೆ ವಿದ್ಯುತ್‌ ಉಪಕರಣಗಳಿಗೆ ಹಾನಿಯಾಗಿದೆ.

ಬೇಸಿಗೆ ಕಾಲದಲ್ಲೇ ಪ್ರತಿ ದಿನ ಮಳೆ ಸುರಿಯುತ್ತಿದೆ. ಬೆಳಗಿನ ವೇಳೆ ಜನರು ಬಿಸಿಲ ಧಗೆಯಿಂದ ತತ್ತರಿಸಿ ಹೋಗುತ್ತಿದ್ದಾರೆ. ಮಳೆಗಾಲದ ಪ್ರಾರಂಭಕ್ಕೂ ಮುನ್ನವೇ ಅಶ್ವಿ‌ನಿ ಮಳೆ ಆಗುತ್ತಿರುವುದು ಜನರ ಅದರಲ್ಲೂ ಮುಖ್ಯವಾಗಿ ರೈತಾಪಿ ವರ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಅಶ್ವಿ‌ನಿ ಮಳೆ ಬಂದರೆ ಮುಂದೆ ಮಳೆ ಹೆಚ್ಚಾಗಿ ಆಗುವುದಿಲ್ಲ ಎಂಬ ನಂಬಿಕೆ ಈಗಲೂ ಇರುವುದರಿಂದ ಕೃಷಿಕರು ಚಿಂತಿತರಾಗಿದ್ದಾರೆ. ಭಾರೀ ಮಳೆಯಿಂದ ಭತ್ತದ ಬೆಳೆಗಾರರು ಕಂಗಾಲಾಗಿದ್ದಾರೆ. ಮಳೆ, ಗಾಳಿಗೆ ಭತ್ತ ನೆಲ ಕಚ್ಚುತ್ತಿದೆ. ದಾವಣಗೆರೆ ತಾಲೂಕಿನಲ್ಲಿ 153 ಎಕರೆಯಲ್ಲಿನ ಭತ್ತ ಹಾಳಾಗಿದೆ. ದಾವಣಗೆರೆ ತಾಲೂಕಿನ ವ್ಯಾಪ್ತಿಯಲ್ಲಿ 1 ಕಚ್ಚಾ ಮನೆ ಭಾಗಶಃ ಹಾನಿಯಾಗಿದೆ. 153 ಎಕರೆ ಪ್ರದೇಶ ಭತ್ತದ ಬೆಳೆ ಹಾನಿಯಾಗಿದ್ದು ಒಟ್ಟು 5.30 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ನ್ಯಾಮತಿ ತಾಲೂಕಿನಲ್ಲಿ 2 ಎಕರೆ ಬಾಳೆ ಮತ್ತು 1 ಎಕರೆ ಮೆಕ್ಕೆಜೋಳ ಬೆಳೆಗೆ ಹಾನಿಯಾಗಿ ಒಟ್ಟು 2 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲೂಕಿನಲ್ಲಿ 2 ಕಚ್ಚಾ ಮನೆಗೆ ಹಾನಿಯಾಗಿದೆ. 2 ಎಕರೆ ಬಾಳೆ ಬೆಳೆಗೆ ಹಾನಿಯಾಗಿ ಒಟ್ಟು 1.80 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 9.10 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಚನ್ನಗಿರಿ ತಾಲೂಕಿನಲ್ಲಿ 3 ಮಿಮೀ ವಾಡಿಕೆ ಮಳೆಗೆ 10 ಮಿಮೀ ಮಳೆಯಾಗಿದೆ. ದಾವಣಗೆರೆ ತಾಲೂಕಿನಲ್ಲಿ 1 ಮಿಮೀ ವಾಡಿಕೆ ಮಳೆಗೆ 20 ಮಿಮೀ, ಹರಿಹರದಲ್ಲಿ 13 ಮಿಮೀ ಮಳೆಯಾಗಿದೆ. ಹೊನ್ನಾಳಿಯಲ್ಲಿ 1 ಮಿಮೀ ವಾಡಿಕೆ ಮಳೆಗೆ 10 ಮಿಮೀ ಮಳೆಯಾಗಿದೆ. ಜಗಳೂರಿನಲ್ಲಿ 10 ಮಿಮೀ ಮಳೆಯಾಗಿದೆ. ನ್ಯಾಮತಿಯಲ್ಲಿ ವಾಡಿಕೆ ಮಳೆ 1 ಮಿ.ಮೀ ಇದ್ದು 11.00 ಮಿ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸರಾಸರಿ 1 ಮಿಲಿ ಮೀಟರ್‌ ವಾಡಿಕೆ ಮಳೆಗೆ 12ಮಿಲಿ ಮೀಟರ್‌ ಮಳೆಯಾಗಿದೆ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.