ಇನ್ನೊಬ್ಬರಿಗೆ ನೆರವಾದರೆ ಜೀವನದಲ್ಲಿ ನೆಮ್ಮದಿ


Team Udayavani, Mar 22, 2019, 6:38 AM IST

dvg-4.jpg

ದಾವಣಗೆರೆ: ಜೀವನದಲ್ಲಿ ನೆಮ್ಮದಿಯ ಬದುಕು ನಮ್ಮದಾಗಬೇಕಾದರೆ ಇನ್ನೊಬ್ಬರಿಗೆ ನೆರವಾಗಬೇಕು ಮತ್ತು ಪರರ ಕಷ್ಟಗಳಿಗೆ ಸ್ಪಂದಿಸಿ, ನಿವಾರಣೆಗೆ ಶ್ರಮಿಸಬೇಕು ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ಗುರುವಾರ ಮೌಲಾನ್‌ ಆಜಾದ್‌ ಸಂಸ್ಥೆ ವತಿಯಿಂದ ಅರಳಿ ಮರದ ವೃತ್ತದ ಬಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ದಾವಣಗೆರೆ ತಾಲೂಕಿನ 51 ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ 5 ಸಾವಿರ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರಗಳ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ನಿಸ್ವಾರ್ಥ ಸಮಾಜ ಸೇವೆಯಿಂದ ಜೀವನವೇ ಆನಂದದ ನಂದನವನವಾಗುತ್ತದೆ ಎಂದರು.
 
ಕೆಲವರು ಜೀವನದಲ್ಲಿ ಸಂತೋಷ ಅನುಭವಿಸಬೇಕು ಎಂದು ಕುಡಿತದೊಂದಿಗೆ ಮೋಜು, ಮಸ್ತಿ ಮಾಡುತ್ತಾರೆ. ಆದರೆ, ಆ ಸುಖ ಕ್ಷಣಿಕವಾದದ್ದು. ಕುಡಿತದಿಂದ ಹಣ, ಆರೋಗ್ಯ ಎರಡೂ ಹಾಳಾಗುತ್ತದೆ. ಜೊತೆಗೆ ನೆಮ್ಮದಿಯೂ ಸಿಗುವುದಿಲ್ಲ. ನಮ್ಮಲ್ಲಿರುವುದರಲ್ಲೇ ಇನ್ನೊಬ್ಬರಿಗೆ ನೆರವು ನೀಡಬೇಕು ಎಂದು ತಿಳಿಸಿದರು.

ಬಸವಣ್ಣ, ಗೌತಮ ಬುದ್ಧ, ಅಂಬೇಡ್ಕರ್‌ ಸೇರಿದಂತೆ ಮೊದಲಾದವರು ಸಮಾಜ ಸೇವೆಯಿಂದ ಬದುಕಿನ ಸುಖ ಕಂಡುಕೊಂಡಿದ್ದಾರೆ. ಸ್ವಾರ್ಥವನ್ನು ಬಿಟ್ಟು ನಿಸ್ವಾರ್ಥತೆಯಿಂದ ಸೇವೆ ಸಲ್ಲಿಸಿ ತ್ಯಾಗಮೂರ್ತಿಯಾಗಿ ಇಂದಿಗೂ ಲೋಕಪೂಜಿತರಾಗಿದ್ದಾರೆ ಎಂದು ಸ್ಮರಿಸಿದರು. 

ನಿಸ್ವಾರ್ಥ ಸೇವೆ ನಮ್ಮದಾಗಬೇಕು. ಅನಾಥ, ಬಡವ, ಶೋಷಿತರ ಸೇವೆ ಮಾಡುವುದು ಪರಮಾನಂದ ತಂದು ಕೊಡುತ್ತದೆ. ಇಂತಹ ಕಾರ್ಯ ಮಾಡುತ್ತಿರುವ ನಸೀರ್‌ ಅಹ್ಮದ್‌ ಅವರ ಕಾರ್ಯ ಶ್ಲಾಘನೀಯವಾದದು ಎಂದರು.

ಮೌಲಾನಾ ಇಬ್ರಾಹಿಂ ಸಖಾಫಿ ಮಾತನಾಡಿ, ಶಾಲೆಯಲ್ಲಿನ ಮುಖ್ಯೋಪಾಧ್ಯಾಯರ ಕರ್ತವ್ಯ ದೊಡ್ಡದು. ಉತ್ತಮ ಸಂಸ್ಕಾರ ಇದ್ದರೆ, ಮಕ್ಕಳು ಉತ್ತಮವಾಗಿ ಕಲಿಯುತ್ತಾರೆ ಎಂಬುದನ್ನು ಅರಿತುಕೊಂಡು ನಡೆಯಬೇಕು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ, ಅವರಲ್ಲಿ ಬಸವತತ್ವ, ಭಾವೈಕ್ಯತೆ ತತ್ವ, ನಾವೆಲ್ಲರೂ ಭಾರತೀಯರು ಎಂಬ ಭಾವನೆ ಬೆಳೆಸಬೇಕು ಎಂದು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷ ಡಾ| ಸಿ.ಆರ್‌. ನಸೀರ್‌ ಅಹ್ಮದ್‌ ಅಧ್ಯಕ್ಷತೆ ವಹಿಸಿದ್ದರು. ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಅಸದ್‌ ಷರೀಫ್‌ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರಗಳನ್ನು ವಿತರಿಸಿದರು. ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ, ಮುಸ್ಲಿಂ ಹಾಸ್ಟೆಲ್‌ ಕಾರ್ಯದರ್ಶಿ ಶಮೀರ್‌, ಶಫಿ ಅಹಮ್ಮದ್‌ ಇತರರು ಇದ್ದರು. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.