ಹೈಕಮಾಂಡ್ ಹೇಳಿದ್ರೆ ಸ್ಪರ್ಧಿಸುವೆ: ಎಸ್ಸೆಸ್ಸೆಂ
Team Udayavani, Mar 30, 2019, 4:55 PM IST
ದಾವಣಗೆರೆ: ನಾಮಪತ್ರ ಸಲ್ಲಿಕೆ ಆರಂಭವಾಗಿ 2 ದಿನ ಕಳೆದರೂ ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಗೊಂದಲ ಇನ್ನೂ ಬಗೆಹರಿದಂತಿಲ್ಲ. ಶುಕ್ರವಾರ ಕೆಪಿಸಿಸಿಯಿಂದ ದಿಢೀರ್ ಬುಲಾವ್ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಸ್. ಎಸ್.ಮಲ್ಲಿಕಾರ್ಜುನ್ ಬೆಂಗಳೂರಿಗೆ ತೆರಳಿದ್ದಾರೆ.
ಬೆಂಗಳೂರಿಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನೀವು ಈ ಚುನಾವಣೆಯಲ್ಲಿ ಸ್ಪರ್ಧಿಸಲೇಬೇಕು ಎಂಬುದಾಗಿ ಸೂಚಿಸಿದರೆ ಸ್ಪರ್ಧಿಸುವೆ ಎಂದರು. ಪಕ್ಷದ ವರಿಷ್ಠರು ಗುರುವಾರ ನನ್ನ ಜತೆ ಮಾತನಾಡಿದರು. ಅದೇ ಮೊದಲ ಮಾತುಕತೆ. ನೀವು ಮೂರು ಸಲ ನಿಂತಿದ್ದೀರಾ, ನಿಮ್ಮ ತಂದೆಯವರಿಗೆ ಟಿಕೆಟ್ ಕೊಡಬೇಕು ಅಂತ ಹೇಳಿದ್ದರು. ನಿಮ್ಮ ತಂದೆಯವರೊಂದಿಗೆ ಮಾತನಾಡಿದಾಗ ಫ್ಯಾಮಿಲಿ ಹಾಗೂ ಆರೋಗ್ಯದ ಸಮಸ್ಯೆ ಪ್ರಸ್ತಾಪವಾಯಿತು.
ನಾವ್ಯಾರೂ ಟಿಕೆಟ್ ಬೇಡ ಅಂತಾ ಹೇಳಿಲ್ಲ. ಹೈಕಮಾಂಡ್ ನೀನೇ ನಿಲ್ಲಬೇಕು ಅಂತ ಹೇಳಿದ್ರೆ ಸ್ಪರ್ಧಿಸಲೇಬೇಕು. ರಾಹುಲ್ ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ನನಗೂ ಕರೆ ಬಂದಿದೆ. ಹಾಗಾಗಿ ಅಲ್ಲಿಗೆ ಹೋಗುವೆ. ವರಿಷ್ಠರ ಸಮ್ಮುಖದಲ್ಲಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಎಲ್ಲಾ ತೀರ್ಮಾನ ಆಗಲಿದೆ. ಏಪ್ರಿಲ್ 4ರ ವರೆಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ಇದೆ. ಅಲ್ಲಿಯ ತನಕ ಕಾದು ನೋಡಿ ಎಂದು ಅವರು ಹೇಳಿದರು.
ತೇಜಸ್ವಿ ಪಟೇಲರನ್ನು ಕೆಪಿಸಿಸಿ ಅಧ್ಯಕ್ಷರು ಬೆಂಗಳೂರಿಗೆ ಕರೆಯಿಸಿಕೊಂಡು ಮಾತನಾಡಿದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತೇಜಸ್ವಿ ಪಟೇಲ್ ಸಹ ನನ್ನೊಂದಿಗೆ ಮಾತನಾಡಿದ್ದಾರೆ. ಅವರು ನಿಂತರೆ ನಾವು ಕೆಲಸ ಮಾಡಬೇಕು. ನಾವು ನಿಂತಲ್ಲಿ ಅವರು ಕೆಲಸ ಮಾಡಬೇಕು.
ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಅವರ ಗೆಲುವಿಗೆ ಕೆಲಸ ಮಾಡಲೇಬೇಕು. ಅದರಲ್ಲಿ ಯಾವುದೇ ಅನುಮಾನ ಇಲ್ಲ. ಕಾಂಗ್ರೆಸ್ ಟಿಕೆಟ್ ಹೇಗೆಂದು ಎಲ್ಲರಿಗೂ ಗೊತ್ತಿರುವ ವಿಚಾರ. ಕೊನೇ ಘಳಿಗೆಯಲ್ಲೂ ಏನಾಗುತ್ತೆ ಅಂತಾ ಹೇಳಾಕ್ಕಾಗಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
ಬೇಸರಕ್ಕೆ ಟಿಕೆಟ್ ಬೇಡವೆಂದೆ
ದಾವಣಗೆರೆ: ಸಚಿವ ಸ್ಥಾನ ಕೇಳಿದರೆ ವಯಸ್ಸಾಗಿದೆ ಅಂತ ಹೇಳಿ ಈಗ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡುತ್ತಾರೆ. ಇದೇ ಕಾರಣಕ್ಕೆ ನಾನು ಟಿಕೆಟ್ ಬೇಡವೆಂದು ಹೇಳಿದ್ದೇನೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಶುಕ್ರವಾರ ಮಾಧ್ಯಮದವರೊಂದಿಗೆ ತಾವು ಟಿಕೆಟ್ ನಿರಾಕರಿಸಿರುವ ಸಂಬಂಧ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನನ್ನ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ತಿಳಿಸಿರುವೆ. ಬೇರೆ ಯಾರಾದರೂ ಸ್ಪರ್ಧಿಸಿದರೆ ಅವರನ್ನು ಬೆಂಬಲಿಸುವೆ. ನಾನು ಹೈಕಮಾಂಡ್ ಬಳಿ ಯಾರ ಹೆಸರನ್ನೂ ಹೇಳಿಲ್ಲ. ತಮ್ಮ ಪುತ್ರ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಸ್ಪರ್ಧಿಸಿದರೂ ಸಹ ಸಂತೋಷ ಎಂದು ಹೇಳಿದರು. ಸಚಿವ ಸ್ಥಾನ ನೀಡದಿರುವುದಕ್ಕೆ ತಮಗೆ ಬೇಸರವೂ ಆಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಕಾಂಗ್ರೆಸ್ನಿಂದ ನಾನ್ ರೆಡಿ
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರದಿಂದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಿಂದೆ ಸರಿದಿದ್ದು, ನನಗೇ ಟಿಕೆಟ್ ಕೊಡುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದ್ದಾರೆ.
ಶುಕ್ರವಾರ, ಶಾಮನೂರು ಶಿವಶಂಕರಪ್ಪನವರ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸಹ ಚುನಾವಣೆಯಲ್ಲಿ ಸ್ಪರ್ಧಿಸಲು ಆಲೋಚಿಸಿಲ್ಲ. ಇಬ್ಬರೂ ಸಹ ನನ್ನ ಹೆಸರು ಪರಿಗಣಿಸುವಂತೆ ಹೈಕಮಾಂಡ್ಗೆ ತಿಳಿಸಿದ್ದಾರೆ ಎಂದರು.
ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರದಲ್ಲಿ ತೇಜಸ್ವಿ ಪಟೇಲ್ ಹೆಸರು ಹೇಗೆ ಬಂತೋ ಗೊತ್ತಿಲ್ಲ. ಆದರೆ, ಶಾಮನೂರು ಕುಟುಂಬದವರು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದಲ್ಲಿ ಕಾಂಗ್ರೆಸ್ ಪಕ್ಷದವರಿಗೇ ಟಿಕೆಟ್ ನೀಡಬೇಕು. ಅನ್ಯರಿಗೆ ಕೊಟ್ಟಲ್ಲಿ ಆ ಬಗ್ಗೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ