ಶಿಕ್ಷಣ ಗುಣಮಟ್ಟ ಹೆಚ್ಚದೆ ವಿಶ್ವಮಾನ್ಯತೆ ಅಸಾಧ್ಯ
Team Udayavani, Apr 23, 2017, 1:20 PM IST
ದಾವಣಗೆರೆ: ನಮ್ಮ ವಿಶ್ವವಿದ್ಯಾಲಯಗಳಲ್ಲಿ ಕೈಗೊಳ್ಳುವ ಸಂಶೋಧನೆ ಮತ್ತು ಶಿಕ್ಷಣ ಮಟ್ಟದ ಸುಧಾರಣೆ ಆಗದೇ ವಿಶ್ವದರ್ಜೆಗೆ ಏರುವುದು ಕನಸಿನ ಮಾತು ಎಂದು ವಿಶ್ವೇಶರಾಯ ತಾಂತ್ರಿಕ ವಿವಿ ವಿಶ್ರಾಂತ ಕುಲಪತಿ ಪ್ರೊ|ಎಚ್.ಪಿ. ಖೀಂಚಾ ಅಭಿಪ್ರಾಯಪಟ್ಟರು.
ತಾಲ್ಲೂಕಿನ ತೋಳಹುಣಸೆ ಗ್ರಾಮದ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರೂಸ ಅನುದಾನಿತ ವಿವಿಗಳ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಾವು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುವ ಹವಣಿಕೆ ಹೊಂದಿದ್ದೇವೆ.
ಆದರೆ, ನಮ್ಮ ಸಂಶೋಧನೆ, ಶೈಕ್ಷಣಿಕ ಗುಣಮಟ್ಟ ಇಂದಿಗೂ ಆ ಮಟ್ಟಕ್ಕೆ ಏರಿಲ್ಲ ಎಂದರು. ಸಮಾಜದಲ್ಲಿ ಇಂದು ವ್ಯಕ್ತಿ ಗಳಿಸಿದ ಅಂಕಕ್ಕಿಂತ ಪ್ರತಿಭೆ ಗುರುತಿಸಲಾಗುತ್ತಿದೆ. ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಕೌಶಲ್ಯಭಿವೃದ್ಧಿ ಮತ್ತು ಜ್ಞಾನಮಟ್ಟದ ವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ.
ಆದರೆ, ಇಂದು ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣಗೊಂಡಿರುವುದರಿಂದ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಇಸ್ರೋದ ವೈಜ್ಞಾನಿಕ ಸಲಹೆಗಾರ ಡಾ| ಟಿ.ಜಿ.ಕೆ. ಮೂರ್ತಿ ಮಾತನಾಡಿ, ದೇಶದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಅತ್ಯಂತ ಅವಶ್ಯಕವೆಂದು ಪರಿಗಣಿಸಲ್ಪಟ್ಟಿದೆ.
ಮಾನವ ಅಭಿವೃದ್ಧಿಗೊಂಡರೆ ಅದೇ ಸಂಪನ್ಮೂಲವಾಗಿ ಮಾರ್ಪಾಡಾಗುತ್ತದೆ. ಆದ್ದರಿಂದ ವಿಶ್ವವಿದ್ಯಾನಿಲಯಗಳು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವರಲ್ಲಿರುವ ಸೃಜನಶೀಲತೆ ಹೊರತರಲು ವೇದಿಕೆ ಕಲ್ಪಿಸಿಕೊಡಬೇಕು. ಆ ಮೂಲಕ ದೇಶದ ಅಭಿವೃದ್ಧಿಗೆ ಅಗತ್ಯವಿರುವ ಯುವ ಜನಾಂಗವನ್ನು ಕೊಡುಗೆಯಾಗಿ ನೀಡಬೇಕು ಎಂದರು.
ಭಾರತದ ಬಾಹ್ಯಾಕಾಶ ಸಂಶೋಧನೆಯ ಬಗ್ಗೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಅಸಡ್ಡೆ ಮಾತುಗಳನ್ನಾಡುತ್ತಿದ್ದರು. ಆದರೆ ಇಂದು ಇಸ್ರೋ ಚಂದ್ರಯಾನ ಮತ್ತು ಮಂಗಳಯಾನ ಯಶಸ್ವಿಗೊಳಿಸಿದೆ. ಒಂದೇ ಬಾರಿ ನೂರನಾಲ್ಕು ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಮೂಲಕ ಅಭಿವೃದ್ಧಿ ಹೊಂದಿದ ದೇಶಗಳು ಹುಬ್ಬೇರಿಸುವಂತೆ ಮಾಡಿದೆ.
ಇತರೆ ರಾಷ್ಟ್ರಗಳು ಇಂದು ತಮ್ಮ ಉಪಗ್ರಹಗಳ ಉಡಾವಣೆಗೆ ಭಾರತದ ಸಹಕಾರ ಕೋರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಬಿ.ಬಿ ಕಲಿವಾಳ ಮಾತನಾಡಿ, ಭಾರತದಲ್ಲಿಯೇ ರೂಸಾದಿಂದ ಅನುದಾನ ಪಡೆದ ಕಿರಿಯ ವಿಶ್ವವಿದ್ಯಾನಿಲಯ ನಮ್ಮದಾಗಿದೆ.
ಈ ಅನುದಾನ ಬಳಕೆ ಮಾಡಿಕೊಂಡು ಅನೇಕ ಮೂಲಭೂತ ಸೌಕರ್ಯ ಕಲ್ಪಿಸಿಕೊಳ್ಳಲು ಅನುಕೂಲವಾಗಲಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಇಂದು ಮಾನವ ಸಂಪನ್ಮೂಲದ ಕೊರತೆ ಕಾಡುತ್ತಿದೆ. ಅದನ್ನು ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ರಾಜ್ಯ ಉನ್ನತ ಶಿಕ್ಷಣ ಮಂಡಳಿ ಕಾರ್ಯಕಾರಿ ನಿರ್ದೇಶಕ ಡಾ| ಎಸ್.ಎ. ಕೋರಿ, ತುಮಕೂರು ವಿವಿ ಕುಲಪತಿ ಪ್ರೊ| ಎ.ಎಚ್. ರಾಜಾಸಾಬ್, ಮಂಗಳೂರು ವಿವಿ ಕುಲಪತಿ ಪ್ರೊ| ಕೆ. ಭೈರಪ್ಪ, ದಾವಿವಿ ಕುಲಸಚಿವ ಪ್ರೊ| ಎಸ್.ವಿ ಹಲಸೆ, ಪರೀûಾಂಗ ಕುಲಸಚಿವ ಪ್ರೊ| ಗಂಗಾನಾಯ್ಕ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
MUST WATCH
ಹೊಸ ಸೇರ್ಪಡೆ
Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು
ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ