ಹೊಳೆಯಲ್ಲಿ ನಿರ್ಮಿಸಿದ್ದ ಹೊಂಡ ನಾಪತ್ತೆ!


Team Udayavani, Apr 10, 2017, 1:04 PM IST

dvg6.jpg

ಹರಿಹರ: ತುಂಗಭದ್ರಾ ನದಿ ನೀರಿನ ಹರಿವು ಭಾನುವಾರ ಮತ್ತಷ್ಟು ಕ್ಷೀಣಿಸಿದ್ದು, ನಗರಕ್ಕೆ ನೀರು ಪೂರೈಸುವ ಕವಲೆತ್ತು ಜಾಕ್‌ವೆಲ್‌ಗೆ ಸರಿಯಾಗಿ ನೀರು ಸಿಗದ ಕಾರಣ ಸೋಮವಾರದಿಂದ ನೀರು ಸರಬರಾಜು ಸ್ಥಗಿತೊಳ್ಳುವ ಅಪಾಯ ಎದುರಾಗಿದೆ. ನದಿ ಪಾತ್ರದ ಜನವಸತಿ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕೆಂದು ಕಳೆದ ಮಾ.20ರಂದು ಭದ್ರಾ ಡ್ಯಾಮ್‌ನಿಂದ 3 ಸಾವಿರ ಕ್ಯೂಸೆಕ್ಸ್‌ ನೀರನ್ನು ನದಿಗೆ ಹರಿಸಲಾಗುತ್ತಿತ್ತು.

ಆದರೆ ಈಗಾಗಲೇ ಜಲಾಶಯದಿಂದ ಬರುವ ನೀರು ಬಂದ್‌ ಮಾಡಲಾಗಿದ್ದು, ತಾಲೂಕಿನಲ್ಲಿ ಮುಂದಿನ 2-3 ದಿನಗಳಲ್ಲಿ ನದಿ ನೀರಿನ ಹರಿವು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಬರದ ನಿಮಿತ್ತ ಪ್ರಸಕ್ತ ವರ್ಷ ಜಲಾಶಯದಲ್ಲಿ ಕನಿಷ್ಟ ಪ್ರಮಾಣದ ನೀರು ಮಾತ್ರ ಸಂಗ್ರಹವಾಗಿದ್ದು, ಜನವರಿ ಕೊನೆಯಲ್ಲಾಗಲೇ ನದಿ ನೀರು ಸ್ಥಗಿತಗೊಂಡಿತ್ತು.

ಮೈಲಾರ ಜಾತ್ರೆ ನಿಮಿತ್ತ ಫೆಬ್ರವರಿಯಲ್ಲಿ 10-12 ದಿನಗಳ ಕಾಲ ನೀರು ಹರಿಸಿದ್ದರೆ, ಈ ಸಲ ಏ.5ರವರೆಗೆ ಅಂದರೆ 15-16 ದಿನಗಳ ಕಾಲ ನೀರು ಹರಿಸಲಾಗಿದೆ. ನಾಳೆಯಿಂದ ಮತ್ತೆ ಕೊಳವೆ ಬಾವಿಯ ಸಪ್ಪೆ ಹಾಗೂ ಫ್ಲೋರೈಡ್‌ಯುಕ್ತ ನೀರನ್ನೆ ತಾಲೂಕಿನ ಜನರು ಆಶ್ರಯಿಸಬೇಕಿದೆ.

ಹೊಂಡ ನಾಪತ್ತೆ!: ಜಲಾಶಯದಿಂದ ನೀರು ಬಿಡುತ್ತಲೇ ತಾಲೂಕಿನ ಅಧಿಧಿಕಾರಿಗಳು ಹಾಗೂ ಜನಪ್ರತಿನಿಧಿಧಿಗಳಿಗೆ ಹೊಳೆಯಲ್ಲೇ ಹೊಂಡ ನಿರ್ಮಿಸಿ, ನೀರು ಸಂಗ್ರಹಿಸುವ ಅದ್ಭುತ ಉಪಾಯ (?) ಹೊಳೆಯಿತು. ಅದರಂತೆ ಜಾಕ್‌ವೆಲ್‌ ಸುತ್ತಲೂ 250-300 ಮೀಟರ್‌ ಉದ್ದ, 100 ಮೀಟರ್‌ ಅಗಲದ 2 ಮೀಟರ್‌ ಆಳದ ಹೊಂಡ ನಿರ್ಮಿಸಲಾಗಿತ್ತು.

12-13 ದಿನಗಳ ಕಾಲ ಹರಿದ ನೀರಿನಮಟ್ಟ ಈಗ ಕ್ಷೀಣಿಸಿದೆ. ಆದರೆ ಜಾಕ್‌ವೆಲ್‌ ಸುತ್ತ ನಿರ್ಮಿಸಲಾಗಿದ್ದ ಹೊಂಡ ನಾಪತ್ತೆಯಾಗಿದೆ. ಅಲ್ಲಿ ದೊಡ್ಡ ಹೊಂಡ ನಿರ್ಮಿಸಲಾಗಿತ್ತೆಂಬ ಸಣ್ಣ ಕುರುಹು ಸಹ ಕಾಣದಂತೆ ಮರಳು ಸಮತಟ್ಟಾಗಿದೆ. 

ಸಾರ್ವಜನಿಕ ಹಣ ಪೋಲು: 8 ಜೆಸಿಬಿ ವಾಹನಗಳು 3 ದಿನ ಹಗಲು ರಾತ್ರಿ ಶ್ರಮಿಸಿ ನದಿಯಲ್ಲಿ ಹೊಂಡ ನಿರ್ಮಿಸಿದ್ದವು. ಇದರಲ್ಲಿ 40-50 ಮಿಲಿಯನ್‌ ಲೀಟರ್‌ ನೀರು ಸಂಗ್ರಹವಾಗಲಿದ್ದು, ನದಿ ಹರಿವು ನಿಂತರೂ  ಸಂಗ್ರಹಿತ ನೀರನ್ನು ಒಂದು ವಾರ ನಗರಕ್ಕೆಪೂರೈಸಬಹುದು ಎಂದು ಪ್ರಚಾರ ಮಾಡಲಾಗಿತ್ತು. 

ಆದರೆ ತರಾತುರಿಯಲ್ಲಿ, ಅವೈಜ್ಞಾನಿಕವಾಗಿ ನಿರ್ಮಿಸಿದ್ದ ಹೊಂಡ ಮರಳಿನಿಂದ ಮುಚ್ಚಿಕೊಂಡು ನಾಮಾವಶೇಷವಾಗಿದೆ. ಅಧಿಧಿಕಾರಿಗಳು, ಜನಪ್ರತಿನಿಧಿಧಿಗಳ ದಡ್ಡತನಕ್ಕೆ ಲಕ್ಷಾಂತರ ರೂ. ಸಾರ್ವಜನಿಕ ಹಣ ಪೋಲಾದಂತಾಗಿದೆ. 

ನೀರಿದ್ದರೂ ಉಪಯೋವಿಲ್ಲ: ನದಿ ನೀರು ಇನ್ನೂ ಸಂಪೂರ್ಣ ಸ್ಥಗಿತಗೊಂಡಿಲ್ಲ, ಸಣ್ಣದಾಗಿ ಝರಿಯಂತೆ ನೀರು ಹರಿಯುತ್ತಿದ್ದರೂ ಅದು ನೀರೆತ್ತುವ ಜಾಕ್‌ವೆಲ್‌ಗೆ ಸಿಗದ ಕಾರಣ ಪಂಪ್‌ ಮಾಡಿ, ಸರಬರಾಜು ಮಾಡಲಾಗುತ್ತಿಲ್ಲ. ನದಿಪಾತ್ರದ ಉದ್ದಕ್ಕೂ ಅಲ್ಲಲ್ಲಿ ನದಿಗೆ ಅಡ್ಡಲಾಗಿ ತಾತ್ಕಾಲಿಕ ಅಥವಾ ಶಾಶ್ವತ ಒಡ್ಡು ಹಾಕಿ ಸಾಧ್ಯವಾದಷ್ಟು ನೀರು ಸಂಗ್ರಹಿಸಿಕೊಂಡು ಜಾಕ್‌ವೆಲ್‌ಗೆ ವ್ಯತ್ಯಯವಾಗದಂತೆ ನೋಡಿಕೊಳ್ಳಲಾಗುತ್ತದೆ.

ಇಲ್ಲೂ ಸಹ ಪ್ರತಿ ಬೇಸಿಗೆಯಲ್ಲಿ ಮರಳಿನ ಚೀಲದಿಂದ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿತ್ತು. ಆದರೆ ಹೊಂಡ ನಂಬಿಕೊಂಡು ಈ ಸಲ ಅದನ್ನು ಮಾಡಿಲ್ಲ. ಈಗಲೂ ಕಾಲ ಮಿಂಚಿಲ್ಲ, ನಗರಸಭೆ ಸೋಮವಾರವೇ ತಾತ್ಕಾಲಿಕ ಮರಳಿನ ಚೀಲದ ಗೋಡೆ ನಿರ್ಮಿಸಿದರೆ ಮತ್ತೆ 5-6 ದಿನಗಳ  ನಗರಕ್ಕೆ ನೀರು ಪೂರೈಸಬಹುದಾಗಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯ. 

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.