ಭತ್ತ ಖರೀದಿ ನೋಂದಣಿ ಸ್ಥಗಿತ: ರೈತರ ಪರದಾಟ

ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳು ಭತ್ತ ಮಾರಾಟವಾಗದ್ದರಿಂದ ಬೆಳೆಗಾರರಿಗೆ ಆತಂಕ

Team Udayavani, Jun 29, 2020, 6:37 PM IST

29-June-26

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊನ್ನಾಳಿ: ಭತ್ತ ಖರೀದಿ ನೋಂದಣಿಯನ್ನು ಎಪಿಎಂಸಿಯಲ್ಲಿ ಸ್ಥಗಿತಗೊಳಿಸಿರುವುದರಿಂದ ರೈತರು ಪರದಾಡುವ ಸ್ಥಿತಿ ಉಂಟಾಗಿದೆ.

2019-20ನೇ ಸಾಲಿನಲ್ಲಿ ರೈತರು ಬೆಳೆದ ಭತ್ತವನ್ನು ಖರೀದಿಗೆ ನೋಂದಣಿ ಮಾಡಿಕೊಳ್ಳುವುದಕ್ಕೆ ಸರ್ಕಾರ 2019ರ ಡಿಸೆಂಬರ್‌ 30 ರಂದು ಅನುಮತಿ ನೀಡಿತ್ತು. ಫೆಬ್ರವರಿವರೆಗೂ ರೈತರು ನೋಂದಣಿ ಮಾಡಿಸುವ ಕಾರ್ಯ ನಿಧಾನಗತಿಯಲ್ಲಿ ಸಾಗಿತು. ಮಾರ್ಚ್‌ನಲ್ಲಿ ಪ್ರಾರಂಭವಾದ ಲಾಕ್‌ಡೌನ್‌ ಸತತ ಎರಡೂವರೆ ತಿಂಗಳು ಮುಂದುವರಿದಿದ್ದರಿಂದ ರೈತರು ಭತ್ತ ಖರೀದಿಗೆ ನೋಂದಣಿ ಮಾಡಿಸಲು ಆಗಲೇ ಇಲ್ಲ. ಈಗ ಜೂನ್‌ 15 ರಿಂದ ನೋಂದಣಿ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈ ಮಧ್ಯೆ ಎಪಿಎಂಸಿ ಮುಂಭಾಗದಲ್ಲಿ ನೋಂದಣಿ ಕಾರ್ಯ ಹಮ್ಮಿಕೊಳ್ಳದೆ ಒಳಭಾಗದ ಗೋದಾಮಿನಲ್ಲಿ ನೋಂದಣಿ ಕಾರ್ಯ ನಡೆಸಲಾಗಿತ್ತು. ಸಂಬಂಧಿಸಿದ ಅಧಿಕಾರಿಗಳು ಕನಿಷ್ಠ ಪಕ್ಷ ಈ ಬಗ್ಗೆ ಸೂಚನಾ ಫಲಕವನ್ನೂ ಹಾಕಿರಲಿಲ್ಲ. ಇದರಿಂದಾಗಿ ಎಷ್ಟೋ ಭತ್ತ ಬೆಳೆಗಾರರು ಎಪಿಎಂಸಿವರೆಗೆ ಬಂದು ಹಾಗೆಯೇ ಹಿಂದಿರುಗಿದ್ದೂ ಇದೆ. ಎಲ್ಲಿ ನೋಂದಣಿ ಮಾಡಿಸಬೇಕೆಂಬುದು ಗೊತ್ತಾಗದೆ ಭತ್ತವನ್ನು ಮನೆಯಲಿಟ್ಟುಕೊಂಡು ಕುಳಿತಿದ್ದಾರೆ.

ಭತ್ತದ ಬೆಲೆ 1815 ರೂ. ಹಾಗೂ ಪ್ರೋತ್ಸಾಹಧನ 200 ಸೇರಿ ಒಟ್ಟು 2015 ರೂ. ಇದೆ. ಹೊರಗಡೆ ಕೇವಲ 1400 ರಿಂದ 1500 ರೂ. ವರೆಗೆ ಇದೆ. ಭತ್ತವನ್ನು ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡೋಣವೆಂದರೆ ಅದೂ ಸಾಧ್ಯವಾಗುತ್ತಿಲ್ಲ.

ಕಳೆದ ಮೂರು ತಿಂಗಳಲ್ಲಿ ಕೇವಲ 876 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಹೊನ್ನಾಳಿಯ ಮಂಜುನಾಥ ರೈಸ್‌ಮಿಲ್‌, ದಾವಣಗೆರೆಯ ಮುರುಘರಾಜೇಂದ್ರ ಇಂಡಸ್ಟ್ರೀಸ್‌, ಬಸವೇಶ್ವರ ಇಂಡಸ್ಟ್ರೀಸ್‌ ಹಾಗೂ ಎಚ್‌.ಬಿ. ಇಂಡಸ್ಟ್ರೀಸ್‌ನಲ್ಲಿ ಭತ್ತ ದಾಸ್ತಾನು ಮಾಡಲು ವ್ಯವಸ್ಥೆ ಮಾಡಲಾಗಿದೆ.

ಗೋದಾಮಿನ ವ್ಯವಸ್ಥಾಪಕರು ಎಲ್ಲಿ ಹೇಳುತ್ತಾರೋ ಅಂತಹ ಕಡೆ ರೈತರು ತಮ್ಮ ಭತ್ತವನ್ನು ದಾಸ್ತಾನು ಮಾಡಬೇಕಿದೆ. ಅವಳಿ ತಾಲೂಕಿನ ಅನೇಕ ರೈತರು ಭತ್ತ ಖರೀದಿ ನೋಂದಣಿ ಸಲುವಾಗಿ ಎಪಿಎಂಸಿಗೆ ಅಲೆಯುತ್ತಿದ್ದಾರೆ. ಆದರೆ ಅಧಿಕಾರಿಗಳು ನೋಂದಣಿ ದಿನಾಂಕ ಮುಗಿದಿರುವುದರಿಂದ ಈಗ ನೋಂದಣಿ ಮಾಡಿಸಿಕೊಳ್ಳುವುದಿಲ್ಲ ಎಂದು ಸಾಗ ಹಾಕುತ್ತಿದ್ದಾರೆ. ಇದರಿಂದ ರೈತರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದು, ಸರ್ಕಾರ ನೋಂದಣಿ ಅವಧಿಯನ್ನು ವಿಸ್ತರಿಸಿ ಭತ್ತ ಬೆಳೆಗಾರರಿಗೆ ಅನುಕೂಲ ಕಲ್ಪಿಸಬೇಕಿದೆ.

‌ಸಮಸ್ಯೆಗೆ ಅಧಿಕಾರಿಗಳೇ ಕಾರಣ
ಕಷ್ಟ ಪಟ್ಟು ಭತ್ತ ಬೆಳೆದರೂ ಅಧಿಕಾರಿಗಳು ಖರೀದಿಗೆ ಮೀನಾಮೇಷ ಎಣಿಸುತ್ತಿದ್ದಾರೆ. ಸರ್ಕಾರವೇ ಎರಡುವರೆ ತಿಂಗಳು ಲಾಕ್ ಡೌನ್‌ ಮಾಡಿದೆ. ಅಲ್ಲದೆ ಅಧಿಕಾರಿಗಳು ನೋಂದಣಿ ಸ್ಥಳವನ್ನು ತಮಗೆ ಇಷ್ಟ ಬಂದ ಕಡೆ ಮಾಡಿರುವುದರಿಂದ ಎಲ್ಲಿ ನೋಂದಣಿ ಮಾಡಿಸಬೇಕೆಂದು ಗೊತ್ತಾಗದೆ ಅಲೆದಾಡಿ ಕೊನೆಗೆ ಕೇಳಿಕೊಂಡು ಇಲ್ಲಿಗೆ ಬಂದರೆ ನೋಂದಣಿ ಸಮಯ ಮುಗಿದಿದೆ ಎಂದು ಹೇಳುತ್ತಿದ್ದಾರೆ. ಸಾಲ ಮಾಡಿ ಬೆಳೆದ ನಾವು ಎಲ್ಲಿಗೆ ಹೋಗಬೇಕು ಎಂದು ತಾಲೂಕಿನ ಬೀರಗೊಂಡನಹಳ್ಳಿ ಗ್ರಾಮದ ಭತ್ತ ಬೆಳೆಗಾರ ಬಸವನಗೌಡ ಬೇಸರ ವ್ಯಕ್ತಪಡಿಸಿದರು.

ಎಂ.ಪಿ.ಎಂ ವಿಜಯಾನಂದಸ್ವಾಮಿ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.