![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!
Team Udayavani, May 21, 2024, 8:59 PM IST
![women trafficking](https://www.udayavani.com/wp-content/uploads/2024/05/wo-620x342.jpg)
ಹೊನ್ನಾಳಿ: ಮಹಾರಾಷ್ಟ್ರದ ಸೊಲ್ಲಾಪುರದ ಮನೆಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರನ್ನು ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಹೊನ್ನಾಳಿ ತಾಲೂಕಿನ ಗ್ರಾಮದ 30 ವರ್ಷದ ಮಹಿಳೆಯ ಪತಿ ಮರಣ ಹೊಂದಿದ್ದರಿಂದ ಸಹೋದರನ ಮನೆಯಲ್ಲಿದ್ದರು. ಭದ್ರಾವತಿಯ ರೋಜಿಲೀನಾ ಎಂಬುವರು ಮೇ 12 ರಂದು ಆ ಮಹಿಳೆಯನ್ನು ಕಲ್ಯಾಣ ಮಂಟಪದಲ್ಲಿ ಕೆಲಸಕ್ಕೆ ಕರೆದೊಯ್ದಿದ್ದರು. ಮೇ 12 ರಂದು ರೋಜಿಲೀನಾ ಜೊತೆಗೆ ಬಂದಿದ್ದಂತಹ ಭದ್ರಾವತಿಯ ಮಲ್ಲಿಕಾರ್ಜುನ್, ಲೋಕೇಶ್ ಎಂಬುವರು ಮಹಿಳೆಯನ್ನು ಕಲ್ಯಾಣ ಮಂಪಟದಲ್ಲಿನ ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದರು. ಅಂದಿನಿಂದ ಮಹಿಳೆ ಮನೆಗೆ ವಾಪಾಸ್ ಆಗಿರಲಿಲ್ಲ.
ಎರಡು-ಮೂರು ದಿನಗಳ ನಂತರ ಮಹಿಳೆ ತನ್ನ ಸಹೋದರಿಗೆ ಫೋನ್ ಮಾಡಿ, ಸೊಲ್ಲಾಪುರದ ಮನೆಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದುಕೊಂಡು ಬಂದಿದ್ದಂತಹ ರೋಜಿಲೀನಾ, ಮಲ್ಲಿಕಾರ್ಜುನ್, ಲೋಕೇಶ್ ಒಂದು ಲಕ್ಷ ರೂಪಾಯಿಗೆ ನನ್ನನ್ನು ಮಾರಾಟ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ಸಹೋದರಿ ಆ ಮನೆಯವರನ್ನು ಫೋನ್ ಮೂಲಕ ಸಂಪರ್ಕಿಸಿದಾಗ ಒಂದು ಲಕ್ಷ ರೂಪಾಯಿ ಕೊಟ್ಟರೆ ನಿಮ್ಮ ಅಕ್ಕನನ್ನು ಬಿಟ್ಟು ಕಳಿಸುವುದಾಗಿ ತಿಳಿಸಿದ್ದಾರೆ. ಕೆಲಸ ಕೊಡಿಸುವುದಾಗಿ ನಂಬಿಸಿ ಒಂದು ಲಕ್ಷ ರೂಪಾಯಿಗೆ ಅಕ್ಕನನ್ನು ಮಾರಾಟ ಮಾಡಿರುವ ಭದ್ರಾವತಿಯ ರೋಜಿಲೀನಾ, ಮಲ್ಲಿಕಾರ್ಜುನ್, ಲೋಕೇಶ್ ವಿರುದ್ಧ ಸಹೋದರ ದುರ್ಗಪ್ಪ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.