ಸಂತ ಸೇವಾಲಾಲ್‌ ಜಯಂತಿ ಸಂಪನ್ನ


Team Udayavani, Feb 16, 2020, 11:21 AM IST

16-February-4

ಹೊನ್ನಾಳಿ: ಕಳೆದ ಮೂರು ದಿನಗಳಿಂದ ಅದ್ಧೂರಿಯಾಗಿ ನಡೆದ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದ ಭಾಯಗಡ್‌ ಪುಣ್ಯಕ್ಷೇತ್ರದ ಸಂತ ಸೇವಾಲಾಲ್‌ ಜಯಂತ್ಯುತ್ಸವ ಶನಿವಾರ ಸಂಪನ್ನಗೊಂಡಿತು.

ಶನಿವಾರ ಬೆಳಗ್ಗೆ 8ಕ್ಕೆ ಮಹಾಭೋಗ್‌ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ತಾಂಡಾ ನಿಗಮದ ಅಧ್ಯಕ್ಷ ಶಾಸಕ ಪಿ.ರಾಜೀವ್‌, ಸಂತ ಸೇವಾಲಾಲ್‌ ಜನ್ಮ ಸ್ಥಾನ ಮಹಾ ಸಮತಿ ಅಧ್ಯಕ್ಷ ಮಾಜಿ ಸಚಿವ ರುದ್ರಪ್ಪ ಎಂ.ಲಮಾಣಿ ಸೇರಿದಂತೆ ಇತರ ಪ್ರಮುಖ ಮುಖಂಡರು ಹಾಜರಿದ್ದರು.

ಮಹಾಭೋಗ್‌ ನಂತರ ಸಾಮೂಹಿಕ ಭೋಜನದ ವ್ಯವಸ್ಥೆ ನಡೆಯಿತು. ಪ್ರಸಾದದ ನಂತರ ಭಕ್ತರು ಪುನಃ ತಮ್ಮ ಊರುಗಳಿಗೆ ತೆರಳಿದರು. ರಾಜ್ಯ ಹಾಗೂ ದೇಶದ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು ಸೂರಗೊಂಡನಕೊಪ್ಪಕ್ಕೆ ಸಾಗರೋಪಾದಿಯಲ್ಲಿ ಆಗಮಿಸಿದ್ದರು. ಅದರಲ್ಲೂ ಸೇವಾಲಾಲ್‌ ಮಾಲಾಧಾರಿ ಪಾದಯಾತ್ರಿಗಳು ಫೆ.14ರ ಶುಕ್ರವಾರ ತಂಡೋಪ ತಂಡವಾಗಿ ಕ್ಷೇತ್ರಕ್ಕೆ ಆಗಮಿಸಿ ಸಾಕ್ಷಿಯಾದರು. ಪಾದಯಾತ್ರೆಯ ದಾರಿಯಲ್ಲಿ ಅಲ್ಲಲ್ಲಿ ಸಾರ್ವಜನಿಕರು ಸೇವಾಲಾಲ್‌ ಭಕ್ತರಿಗೆ ಮಜ್ಜಿಗೆ, ಜ್ಯೂಸ್‌, ಕಲ್ಲಂಗಡಿ ಹಣ್ಣು, ಲಘು
ಉಪಾಹಾರ ಹಾಗೂ ಭೋಜನದ ವ್ಯವಸ್ಥೆ ಮಾಡಿದ್ದರು.

ಒಟ್ಟಿನಲ್ಲಿ ಸೇವಾಲಾಲ್‌ ಮಾಲಾಧಾರಿ ಪಾದಯಾತ್ರಿಗಳು ತಮ್ಮ ಹರಕೆ-ಕಾಣಿಕೆ ಸಲ್ಲಿಸುವ ಮೂಲಕ ಭಕ್ತಿ ಮೆರೆದರು. ತಾವು ಧರಿಸಿದ ಮಾಲೆಗಳನ್ನು ಸೂರಗೊಂಡನಕೊಪ್ಪ ಸುಕ್ಷೇತ್ರದಲ್ಲಿ ವಿಸರ್ಜಿಸುವ ಮೂಲಕ ತಮ್ಮ ದುಶ್ಚಟಗಳನ್ನು ತ್ಯಜಿಸುವ ಇಚ್ಛಾಶಕ್ತಿ ಪ್ರದರ್ಶಿಸುತ್ತಿರುವುದು ಉತ್ತಮ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯಾಗಿರುವುದಂತೂ ಸತ್ಯ. ಸೂರೆಗೊಂಡನಕೊಪ್ಪಸುರಗೋಡನಕೊಪ್ಪ
ದ ಭಾಯಾಗಡ್‌ ಪ್ರಕೃತಿಯ ಮಡಿಲಲ್ಲಿ ಫೆ.13ರ ಗುರುವಾರ, 14ರ ಶುಕ್ರವಾರ ಹಾಗೂ 15ರ ಶನಿವಾರ ಮಧ್ಯಾಹ್ನ 12ರವರೆಗೆ ಸಂತ ಸೇವಾಲಾಲರ ಭಕ್ತ ಸಮುದಾಯ ಎಲ್ಲಿ ನೋಡಿದರಲ್ಲಿ ಕಣ್ಣಿಗೆ ಗೋಚರಿಸುತ್ತಿದ್ದರು.

ರಾಜ್ಯದ ಕಲಬುರಗಿ, ಬೆಳಗಾವಿ, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯದಿಂದಲೂ ಲಕ್ಷಾಂತರ ಭಕ್ತಾದಿಗಳು ಸಂತ ಸೇವಲಾಲ್‌ ಜನ್ಮ ಸ್ಥಳಕ್ಕೆ ಬಂದು ಸೇರಿದ್ದರು. ಸಂತ ಸೇವಾಲಾಲ್‌ ಕ್ಷೇತ್ರ ಸೂರಗೊಂಡನಕೊಪ್ಪಕ್ಕೆ ಬಂದು
ಸೇರಿದ ಲಕ್ಷಾಂತರ ಭಕ್ತರಿಗೆ ಮೂಲ ಸೌಲಭ್ಯಗಳನ್ನು ರಾಜ್ಯ ತಾಂಡಾ ನಿಗಮ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳು ಸಕಲ ಸಿದ್ಧತೆಗಳನ್ನು ಮಾಡಿದ್ದವು.

ಫೆ. 14ರಂದು ಪೂರ್ಣಕುಂಭ ಮೆರವಣಿಗೆ, ಸಂತ ಸೇವಾಲಾಲ್‌ ಅವರಿಗೆ ಅಭಿಷೇಕ, ಮಾಲಾಧಾರಿಗಳಿಗೆ ದರ್ಶನ, ಮಹಾ ಮಂಗಳಾರತಿ, ಇರುಮುಡಿ ಸಮರ್ಪಣಾ ಕಾರ್ಯಕ್ರಮಗಳು ಜರುಗಿದವು. ಜಯಂತ್ಯುತ್ಸವ ಅಂಗವಾಗಿ ವಿವಿಧ ಕ್ರೀಡೆಗಳು, ಸಾಂಸ್ಕೃತಿಕ
ಕಾರ್ಯಕ್ರಮಗಳು ಜರುಗಿದವು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.