ಮನೆ ನಿರ್ಮಾಣ ಆದೇಶ ಪತ್ರ ಕೊಡಿಸಿ
Team Udayavani, Jan 25, 2019, 5:59 AM IST
ಹರಿಹರ: ದೇವರಾಜ್ ಅರಸು ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಮನೆ ನಿರ್ಮಾಣಕ್ಕೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಶೀಘ್ರ ಆದೇಶ ಪತ್ರ ದೊರಕಿಸಿಕೊಡಬೇಕೆಂದು ಆಗ್ರಹಿಸಿ ನೇಕಾರ ಸಮಿತಿಯಿಂದ ಗುರುವಾರ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ನೇಕಾರ ಸಮಿತಿ ಗೌರವಾಧ್ಯಕ್ಷ ಎಚ್.ಕೆ. ಕೊಟ್ರಪ್ಪ ಮಾತನಾಡಿ, ದೇವರಾಜ್ ಅರಸು ವಸತಿ ಯೋಜನೆಯಡಿ ನಗರದ ನೇಕಾರ ಸಮಿತಿ ಹಾಗೂ ಮಹಜೇನಹಳ್ಳಿ ಗ್ರಾಮದೇವತೆ ಹಮಾಲರ ಸಂಘದ ನಿವೇಶನಗಳ ಫಲಾನುಭವಿಗಳನ್ನು ಮನೆ ನಿರ್ಮಿಸಿಕೊಳ್ಳಲು ಜಿಲ್ಲಾ ಸಮಿತಿ ಆಯ್ಕೆ ಮಾಡಿದೆ.
ಸಮಿತಿಯು ಫಲಾನುಭವಿಗಳ ನಿವೇಶನಕ್ಕೆ ತೆರಳಿ ಜೆಪಿಎಸ್ ಛಾಯಾಚಿತ್ರ ಸಹ ತೆಗೆದುಕೊಂಡು ಹೋಗಿದ್ದು, 1 ತಿಂಗಳಾದರೂ ಈವರೆಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಆದೇಶ ಪತ್ರ ಬಂದಿಲ್ಲ. ವಿಷಯವನ್ನು ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತಂದು, ಆದಷ್ಟು ಬೇಗ ರಾಜೀವ್ ಗಾಂಧಿ ವಸತಿ ನಿಗಮದಿಂದ ಆದೇಶ ಪತ್ರ ಕೊಡಿಸಬೇಕೆಂದು ಪೌರಾಯುಕ್ತರನ್ನು ಒತ್ತಾಯಿಸಿದರು.
ಇದಲ್ಲದೆ ನೇಕಾರ ಹಾಗೂ ಹಮಾಲರ ಬಡಾವಣೆಗಳಲ್ಲಿ ರಸ್ತೆ, ಚರಂಡಿ, ನೀರು, ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಆದಷ್ಟು ಬೇಗ ಚಾಲನೆ ನೀಡಬೇಕೆಂದು ಸಹ ಆಗ್ರಹಿಸಿದರು. ಮನವಿ ಸ್ವೀಕರಿಸಿದ ಪೌರಾಯುಕ್ತೆ ಎಸ್.ಲಕ್ಷ್ಮೀ ಮನವಿಯನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಮುಖಂಡರಾದ ಕುಬೇರಪ್ಪ, ನಾಗರಾಜ ಹೊಸಮನಿ, ಕರೀಂಸಾಬ್, ಚಂದ್ರಮ್ಮ ಕೊಟಗಿ, ಲಕ್ಷ್ಮಮ್ಮ ಮಾಂತಾ, ರಾಧಾ ರಮೇಶ್, ಗೋವಿಂದಪ್ಪ, ಮಂಜಣ್ಣ, ರೆಹಮಾನ್ ಸಾಬ್, ಪಾಲಾಕ್ಷಮ್ಮ, ಅಕ್ಬರ್ ಸಾಬ್, ಜಯಮ್ಮ ಅಗಡಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
MUST WATCH
ಹೊಸ ಸೇರ್ಪಡೆ
ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ