Shettar ಕಾಂಗ್ರೆಸ್ ಗೆ ಬಂದರೆ ಹುಬ್ಬಳ್ಳಿ ಸೆಂಟ್ರಲ್ ಟಿಕೆಟ್ ಫಿಕ್ಸ್: ಶಾಮನೂರು ಶಿವಶಂಕರಪ್ಪ
Team Udayavani, Apr 16, 2023, 2:11 PM IST
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದರೆ ಹುಬ್ಬಳಿ ಸೆಂಟ್ರಲ್ ಟಿಕೆಟ್ ಫಿಕ್ಸ್ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ನಮ್ಮ ಬೀಗರು. ಅವರನ್ನು ನಮ್ಮ ಮಗ ಪಕ್ಷಕ್ಕೆ ಕರೆಯುತ್ತಾನೆ. ಅವರು ಕಾಂಗ್ರೆಸ್ ಗೆ ಬಂದರೆ ಹುಬ್ಬಳಿ ಸೆಂಟ್ರಲ್ ಟಿಕೆಟ್ ಫಿಕ್ಸ್ ಎಂದರು.
ಜಗದೀಶ್ ಶೆಟ್ಟರ್ ನಮ್ಮ ಬೀಗರು. ನಾನು ಅವರು ಪಕ್ಷಕ್ಕೆ ಬರುವಂತೆ ಅವರ ಜೊತೆ ಮಾತನಾಡಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಅವರು ಕಾಂಗ್ರೆಸ್ ಗೆ ಬರಬಹುದು. ಬಿಜೆಪಿಯವರು ಇಂತಹ ಕೆಲಸ ಮಾಡಿಯೇ ಎಲ್ಲವನ್ನು ಕಳೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಬಿಜೆಪಿಗೆ 60 ಸೀಟ್ ಸಹ ಬರುವುದಿಲ್ಲ ಎಂದರು.
ಇದನ್ನೂ ಓದಿ:Karnataka Polls: ಸಂಸದ ಸಂಗಣ್ಣ ಕರಡಿ ಮನವೊಲಿಕೆಗೆ ಸಿಎಂ, ಬಿಎಸ್ವೈ, ಕಟೀಲ್ ಯತ್ನ
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದರೆ ಅವರಿಗೆ ಟಿಕೆಟ್ ಕೊಡಲೇಬೇಕಾಗುತ್ತದೆ, ಟಿಕೆಟ್ ಕೊಟ್ಟರೆ ಅವರು ಕಾಂಗ್ರೆಸ್ ಸೇರುವುದು ಪಕ್ಕ. ನಮ್ಮ ಮಗ ಅವರ ಬೀಗರು (ಜಗದೀಶ್ ಶೆಟ್ಟರ್) ಕಾಂಗ್ರೆಸ್ ಗೆ ಬರುವಂತೆ ಮಾತನಾಡುತ್ತಿದ್ದಾರೆ. ಕಾದು ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಗದೀಶ್ ಶೆಟ್ಟರ್ ಅವರೊಂದಿಗೆ ಕಾಂಗ್ರೆಸ್ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಲಿಂಗಾಯತ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಮುಂದೆ ಏನಾಗುತ್ತದೆಯೋ ಕಾದು ನೋಡೋಣ. ರಾಜ್ಯದಲ್ಲಿ ಕಾಂಗ್ರೆಸ್ ಬಂಪರ್ ಹೊಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ