Davanagere ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ: ಸಿದ್ದೇಶ್ವರ
Team Udayavani, Oct 25, 2023, 6:30 PM IST
ದಾವಣಗೆರೆ:ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಯಾರನ್ನೇ ನೇಮಕ ಮಾಡಿದರೂ ಸ್ವಾಗತಿಸುತ್ತೇನೆ. ನಾನಂತೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿ.ವೈ.ವಿಜಯೇಂದ್ರ, ಆರ್. ಅಶೋಕ್, ಸಿ.ಟಿ.ರವಿ ಹೆಸರು ಕೇಳಿ ಬರುತ್ತಿವೆ. ವರಿಷ್ಠರು ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಸ್ವಾಗತಿಸುತ್ತೇನೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ, ಹೋರಾಟ ಮಾಡಿದವರು ಬಿಜೆಪಿಯವರೇ. ಆದರೂ ನಾನು ಆ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಾವ. ಹಾಗಾಗಿ ನಮ್ಮ ಮತ್ತು ಅವರ ನಡುವೆ ಹೊಂದಾಣಿಕೆ ಇದೆ. ಆದರೆ ಅದು ರಾಜಕೀಯ ಹೊಂದಾಣಿಕೆ ಅಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿನ ಕಾರ್ಯಾಲಯ ಒಳಗೊಂಡಂತೆ ಇತರೆ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲ್ಲ. ವಿವಾದ ಮಾಡಲು ನನಗೆ ಇಷ್ಟವಿಲ್ಲ. ಅದಕ್ಕಾಗಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್