ಪ್ರಕೃತಿ ರಕ್ಷಿಸದಿದ್ದರೆ ಅಪಾಯ ಖಚಿತ: ಒಡೆಯರ್‌

ಪೂರ್ವಜರಂತೆ ಪರಿಸರ ಕಾಳಜಿ ಬೆಳೆಸಿಕೊಳ್ಳಿ

Team Udayavani, May 3, 2022, 4:59 PM IST

nature

ದಾವಣಗೆರೆ: ನಮ್ಮ ಪೂರ್ವಜರು ಯಾವ ರೀತಿ ಪರಿಸರ ಕಾಳಜಿಯನ್ನಿರಿಸಿಕೊಂಡು ಕೆಲಸ ಮಾಡುತ್ತಿದ್ದರೋ ಅದೇ ಪದ್ಧತಿ ಅನುಸರಿಸುತ್ತ ಮುನ್ನಡೆದರೆ ನಮಗೆ ಹಾಗೂ ಮುಂದಿನ ಪೀಳಿಗೆಗೆ ಒಳಿತಾಗುತ್ತದೆ ಎಂದು ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ಕೋಲ್ಕುಂಟೆ ಗ್ರಾಮಾಭ್ಯುದಯ ಸಂಘದಿಂದ ತಾಲೂಕಿನ ಕೋಲ್ಕುಂಟೆ ಗ್ರಾಮದಲ್ಲಿ ಸೋಮವಾರ ನಡೆದ ಕುಶಲೋಪರಿ ಸಭಾ ಹಾಗೂ ಗ್ರಾಮ ಶಿಲಾಶಾಸನ ಪ್ರತಿಕೃತಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾವು ಪ್ರಕೃತಿ ಸಂರಕ್ಷಣೆ ಮಾಡದೇ ಹೋದರೆ ಮುಂದಿನ ಪೀಳಿಗೆಗೆ ಬಹಳ ಕಷ್ಟ ಆಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಮುಂದಿನ ಪೀಳಿಗೆಗೆ ಒಳ್ಳೆಯದಾಗಬೇಕು ಎಂಬ ದೃಷ್ಟಿಯನ್ನಿಟ್ಟುಕೊಂಡು ಪರಿಸರ ಸಂರಕ್ಷಣೆ ಮಾಡಬೇಕು ಎಂದು ಕರೆ ನೀಡಿದರು.

ಪ್ರಕೃತಿ ಸಂರಕ್ಷಣೆ ಮಾದರಿ ಕಾರ್ಯ ಗ್ರಾಮಗಳಿಂದಲೇ ಆಗಬೇಕು. ನಗರಗಳಲ್ಲಿ ಇದು ಆಗುವುದಿಲ್ಲ. ನಗರಗಳಿಂದ ಆಚೆ ಬರುವವರೆಗೆ ನಮಗೆ ಉಸಿರಾಡಲು ಸಹ ಆಗುವುದಿಲ್ಲ. ಬರೀ ಕಾಂಕ್ರೀಟ್‌ ಕಾಡುಗಳಿಂದ ನಮಗೆ ಉಸಿರಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಪ್ಲಾಸ್ಟಿಕ್‌ನಂಥ ಹಾನಿಕಾರಕ ಉತ್ಪನ್ನ ಬೇರೆ ಯಾವುದೂ ಇಲ್ಲ. ಅದು ಸಣ್ಣ ಸಣ್ಣ ತುಂಡುಗಳಾಗಿ ವಾತಾವರಣಕ್ಕೆ ಬಹಳ ಹಾನಿಕಾರಕವಾಗಿದೆಯಲ್ಲದೆ ಆಹಾರದ ಮೂಲಕ ಸಂಪೂರ್ಣವಾಗಿ ನಮ್ಮ ಶರೀರದೊಳಗೆ ಬಂದಿದೆ. ಹೀಗಾಗಿ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಕಡಿಮೆ ಮಾಡಬೇಕು. ಇದಕ್ಕೆ ನಮ್ಮ ಗ್ರಾಮಗಳು ಹಾಗೂ ದೇವಾಲಯಗಳು ಮಾದರಿ ಆಗಬೇಕು ಎಂದು ಆಶಿಸಿದರು.

ನಗರೀಕರಣದಿಂದ ಇಂದು ಕೆಲವೇ ಶಾಸನಗಳು ಉಳಿದುಕೊಂಡಿವೆ. ನಮ್ಮ ನಿಮ್ಮೆಲ್ಲರ ಪೂರ್ವಜರ ಆಕಾಂಕ್ಷೆ ಶಿಲಾ ಶಾಸನದಲ್ಲಿದೆ. ಅದಕ್ಕಾಗಿ ಶಿಲಾ ಶಾಸನಗಳನ್ನು ಸಂರಕ್ಷಣೆ ಮಾಡಬೇಕು. ನಮ್ಮ ಗುರುತು ಇರುವುದೇ ಶಿಲಾಶಾಸನಗಳಲ್ಲಿ ಎಂದ ಒಡೆಯರ್‌, ಬಿ.ಎಲ್. ರೈಸ್‌ ಅವರು ಸಂಪೂರ್ಣ ಶಿಲಾ ಶಾಸನಗಳನ್ನು ದಾಖಲೆ ಮಾಡಿರುವುದು ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಕೋಲ್ಕುಂಟೆ ಗ್ರಾಮಾಭ್ಯುದಯ ಸಂಘದ ಸದಸ್ಯರು ಶಿಲಾ ಶಾಸನದ ಬೆಳ್ಳಿಯ ಪ್ರತಿಕೃತಿಯನ್ನು ಮಹಾರಾಜರಿಗೆ ನೀಡಿ ಗೌರವಿಸಿದರು. ಶಿಕ್ಷಕ ಬಿ.ಎಸ್. ವೀರೇಶ್‌ ಗ್ರಾಮದ ಇತಿಹಾಸ ತಿಳಿಸಿದರು. ಚಿತ್ರನಟ ಹಾಗು ಕೋಲ್ಕುಂಟೆ ಗ್ರಾಮಾಭ್ಯುದಯ ಸಂಘದ ಗೌರವಾಧ್ಯಕ್ಷ ಸುಚೇಂದ್ರಪ್ರಸಾದ್‌ ನಿರೂಪಿಸಿದರು. ಅಧ್ಯಕ್ಷ ಮಂಜುನಾಥ ಕೆ.ಜಿ., ಪ್ರಧಾನ ಕಾರ್ಯದರ್ಶಿ ಅಶೋಕ ಜಿ.ಎಚ್. ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.