ವೃತ್ತಿಯಲ್ಲಿ ಶ್ರದ್ಧೆ-ಆಸಕ್ತಿ-ಶ್ರಮ ಇದ್ದರೆ ಸೇವೆ ಸಾರ್ಥಕ


Team Udayavani, Feb 22, 2019, 7:35 AM IST

dvg-4.jpg

ದಾವಣಗೆರೆ: ತುಮಕೂರಿನ ಲಿಂ| ಶ್ರೀ ಸಿದ್ಧಗಂಗಾ ಸ್ವಾಮೀಜಿ ಅವರು ನಡೆದಾಡುವ ದೇವರಾದರೆ, ಡಾ| ಎಂ.ಎಸ್‌.ಎಲಿ ಅವರು ನಡೆದಾಡುವ ಡಾಕ್ಟರ್‌ ಎಂದು ಜೆಜೆಎಂ ಮೆಡಿಕಲ್‌ ಕಾಲೇಜು ವಿಶ್ರಾಂತ ಪ್ರಾಂಶುಪಾಲ ಡಾ| ಮಂಜುನಾಥ್‌ ಆಲೂರ್‌ ಅಭಿಪ್ರಾಯಪಟ್ಟರು.

ನಗರದ ಜೆಜೆಎಂ ಮೆಡಿಕಲ್‌ ಕಾಲೇಜು ಗ್ರಂಥಾಲಯ ಸಭಾಂಗಣದಲ್ಲಿ ಗುರುವಾರ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಈಚೆಗೆ ಗೌರವ ಡಾಕ್ಟರೇಟ್‌ ಪಡೆದ ಹಿರಿಯ ವೈದ್ಯ ಡಾ| ಎಸ್‌.ಎಂ. ಎಲಿ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಸದಾ ಶಾಂತಿ, ಸೌಮ್ಯವಾಗಿರುವ ಡಾ| ಎಂ.ಎಸ್‌. ಎಲಿ ಅವರಲ್ಲಿ ಒಬ್ಬ ವೈದ್ಯರಾದವರಿಗೆ ಇರಬೇಕಾದ ಎಲ್ಲಾ ರೀತಿ ಗುಣಗಳಿವೆ. ಈ ಇಳಿ ವಯಸ್ಸಿನಲ್ಲೂ ನಿಸ್ವಾರ್ಥದಿಂದ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ. ಹಾಗಾಗಿ ಅವರು ನಿಜಕ್ಕೂ ನಮ್ಮೆಲ್ಲರ ಕಣ್ಮುಂದಿರುವ ನಡೆದಾಡುವ
ದೇವರು ಎಂದು ಹೇಳಿದರು. 

ಡಾ| ಎಲಿ ಅವರು ಎಂದಿಗೂ ಹುದ್ದೆಗಳಿಗಾಗಿ ಬೆನ್ನತ್ತಿ ಹೋದವರಲ್ಲ. ಅವರ ಸೇವಾ ಕಾರ್ಯಕ್ಕೆ ಆ ಹುದ್ದೆಗಳೇ ಅವರನ್ನು ಹುಡುಕಿಕೊಂಡು ಬಂದಿವೆ. ಈ ಹಿನ್ನೆಲೆಯಲ್ಲಿ ಇಂತಹ ಶ್ರೇಷ್ಠ ವೈದ್ಯರಿಗೆ ಗೌರವ ಡಾಕ್ಟರೇಟ್‌ ನೀಡಿರುವುದು ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಗೌರವ ಬಂದಂತಾಗಿದೆ ಎಂದರು.

ಸನ್ಮಾನ ಸ್ವೀಕರಿಸಿ ಅಭಿಪ್ರಾಯ ಹಂಚಿಕೊಂಡ ಡಾ| ಎಂ. ಎಸ್‌. ಎಲಿ ಅವರು, ವೈದ್ಯರಾದವರು ಮೆಡಿಕಲ್‌ ಸೇರಿದಂತೆ ಯಾವುದೇ ಕ್ಷೇತ್ರವಿರಲಿ ನಿಸ್ವಾರ್ಥದಿಂದ ಸಮಾಜಕ್ಕೆ ಕೊಡುಗೆ ನೀಡುವ ಕೆಲಸ ಮಾಡಬೇಕು. ತಮ್ಮ ಬಳಿಗೆ ಬಂದ ಎಲ್ಲಾ ರೋಗಿಗಳನ್ನು ಗೌರವದಿಂದ ಕಾಣಬೇಕು. ಯಾರು ಕೂಡ ಪ್ರಶಸ್ತಿ, ಗೌರವಗಳ ಬೆನ್ನೇರಿ ಹೋಗಬೇಡಿ. ಅವುನಾವು ಮಾಡುವ ಸಮಾಜಮುಖೀ ಕಾರ್ಯಕ್ಕೆ ತಾನಾಗೆ ಹುಡುಕಿಕೊಂಡು ಬರುತ್ತವೆ ಎಂದು ಹೇಳಿದರು.

ಕಾಯಕವೇ ಕೈಲಾಸ ಎಂಬ ಮಾತನ್ನು ವೈದ್ಯರು ಮರೆಯಬಾರದು. ನಿತ್ಯ ಮಾಡುವ ವೃತ್ತಿಯಲ್ಲಿ ಶ್ರದ್ಧೆ, ಆಸಕ್ತಿ, ಶ್ರಮವಹಿಸಿ. ಜೊತೆಗೆ ತಮ್ಮ ವೃತ್ತಿಗನುಗುಣವಾಗಿ ಹೊಸ ಹೊಸ ಅನ್ವೇಷಣೆಗಳನ್ನು ಮಾಡಿ. ಆಗ ನಿಜಕ್ಕೂ ತಮ್ಮ ಸೇವೆ ಸಾರ್ಥಕವಾಗುತ್ತದೆ ಎಂದರು.ಜೆಜೆಎಂ ಮೆಡಿಕಲ್‌ ಕಾಲೇಜು ಪ್ರಾಂಶುಪಾಲ ಡಾ| ಎಸ್‌.ಬಿ. ಮುರುಗೇಶ್‌, ಹಿರಿಯ ವೈದ್ಯರಾದ ಡಾ| ಗುರುಪಾದಪ್ಪ, ಅಕಾಡೆಮಿಕ್‌ ಸಮಿತಿ ಕಾರ್ಯದರ್ಶಿ ಡಾ| ರವಿ ಇತರರು ಇದ್ದರು. 

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.