ಸತ್ಯವಂತರೇ ಆಗಿದ್ದಲ್ಲಿ ಚರ್ಚೆಗೆ ಬರಲಿ


Team Udayavani, Oct 21, 2018, 5:02 PM IST

dvg-1.jpg

ದಾವಣಗೆರೆ: ನಾವು ಕೇಳಿದ ಪ್ರಶ್ನೆಗಳಿಗೆ ಒಂದಕ್ಕೂ ಉತ್ತರಿಸದ ಶಾಸಕ ಶಾಮನೂರು ಶಿವಶಂಕರಪ್ಪನವರ ಬಗ್ಗೆ ಮಾತನಾಡುವುದೇ ವೇಸ್ಟ್‌ ಎಂದೇಳಿರುವ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ನನ್ನ ವಿರುದ್ಧ ಯಾವುದಾದರೂ ಆರೋಪ ಸಾಬೀತಾದಲ್ಲಿ ನಾನೂ ಸಹ ರಾಜಕೀಯ ನಿವೃತ್ತಿ ಹೊಂದುವೆ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂಬುದಾಗಿ ಶಾಸಕ ಶಾಮನೂರು ಶಿವಶಂಕರಪ್ಪನವರು ಟೀಕಿಸಿರುವ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ಶಿವಶಂಕರಪ್ಪ ಸುಮ್ಮನೆ ವಯಸ್ಸು ಕಳೆದಿದ್ದಾರೆ. ಅವರ ಬಗ್ಗೆ ಮಾತನಾಡದಿರುವುದೇ ಒಳ್ಳೆಯದು ಎಂದರು.
 
ನಾವೇನು ಅವರಂತೆ ಯಾರದೋ ಆಸ್ತಿ ಕಬಳಿಸಿದವರಲ್ಲ. ಗಾಂಜಿವೀರಪ್ಪನವರ ಸಮಾಧಿ ಜಾಗದ ಕಬಳಿಕೆ ಬಗ್ಗೆ ನಾನೇ ದಾಖಲೆ ಸಮೇತ ಚರ್ಚೆ ಬರುವಂತೆ ಆಹ್ವಾನಿಸಿದ್ದೆ. ಆ ಜಾಗ ಯಾರದ್ದೆಂದು ದಾಖಲೆ ಇದೆ. ಆ ದಾಖಲೆ ನಾವು ಸೃಷ್ಟಿ ಮಾಡಿದ್ದಲ್ಲ. ಎಲ್ಲವನ್ನೂ ಆರ್‌ ಟಿಐ ಮುಖಾಂತರ ಪಡೆದದ್ದು. ಸಾರ್ವಜನಿಕವಾಗಿ ಆ ದಾಖಲೆಗಳ ಚರ್ಚೆಗೆ ಬರಲು ಸವಾಲು ಹಾಕಿದ್ದೆ. ಈವರೆಗೂ ಅದಕ್ಕೆ ಅವರಿಂದ ಉತ್ತರವಿಲ್ಲ.

ಶಾಮನೂರು ಶಿವಶಂಕರಪ್ಪ 2ನೇ ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಾರೆ. ಅವರು ಸತ್ಯವಂತರೇ ಆಗಿದ್ದಲ್ಲಿ ಸಾರ್ವಜನಿಕ ಚರ್ಚೆಗೆ ಬರಲಿ. ನಾನು ಈಗಲೂ ಅದಕ್ಕೆ ಸಿದ್ಧ ಎಂದು ಹೇಳಿದರು. 

ಕುಂದುವಾಡ ಕೆರೆ ಬಳಿ ನಿರ್ಮಿಸಿರುವ ಗಾಜಿನಮನೆಗೆ ಜೀವಂತ ಇರುವ ಯಾವುದೇ ವ್ಯಕ್ತಿ ಹೆಸರಿಡುವುದು ಸಮಂಜಸವಲ್ಲ. ಮೇಲಾಗಿ ಬದುಕಿರುವ ವ್ಯಕ್ತಿಗಳ ಹೆಸರಿಡಕೂಡದೆಂದು ನ್ಯಾಯಾಲಯ ಸಹ ಆದೇಶಿಸಿದೆ. ಹಾಗಾಗಿ ಚನ್ನಗಿರಿಯಲ್ಲಿ ಕ್ರೀಡಾಂಗಣಕ್ಕೆ ನಮ್ಮ ಪಕ್ಷದ ಶಾಸಕ ಮಾಡಾಳು ವಿರುಪಾಕ್ಷಪ್ಪರ ಹೆಸರಿಟ್ಟದ್ದನ್ನು ತೆರವುಗೊಳಿಸಲಾಯಿತು. ಹಾಗಾಗಿ ಗಾಜಿನಮನೆಗೂ ಸಹ ಜೀವಂತವಾಗಿರುವ ಯಾವುದೇ ವ್ಯಕ್ತಿಗಳ ಹೆಸರಿಡಕೂಡದೆಂದು ಆಗ್ರಹಿಸಿದ ಜಾಧವ್‌, ದಾವಣಗೆರೆ ನಗರ ಹಾಗೂ ಜಿಲ್ಲೆ ಅಭಿವೃದ್ಧಿಗೆ ಶ್ರಮಿಸಿದ ಯಾವುದೇ ಪಕ್ಷದ ವ್ಯಕ್ತಿ ಹೆಸರಿಡಲಿ. ಮಾಜಿ ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌, ಜಿ. ಮಲ್ಲಿಕಾರ್ಜುನಪ್ಪ, ಪಂಪಾಪತಿ, ಕೆ.ಟಿ. ಜಂಬಣ್ಣ, ಚೆನ್ನಯ ಒಡೆಯರ್‌, ದಾನಿಗಳಾದ ರಾಜನಹಳ್ಳಿ ಹಾಗೂ ಚಿಗಟೇರಿ ಮನೆತನದ ಹೆಸರಿಡಲಿ. ಒಟ್ಟಾರೆ ಜೀವಂತ ಇರುವವರ ನಾಮಕರಣಕ್ಕೆ ನಮ್ಮ ವಿರೋಧ ಇದೆ ಎಂದು ಹೇಳಿದರು.

ಈಗಾಗಲೇ ದಾವಣಗೆರೆ ನಗರದ ಪ್ರಮುಖ ರಸ್ತೆ, ಉದ್ಯಾನವನ, ವೃತ್ತಕ್ಕೆ ಜೀವಂತವಾಗಿರುವ ಕೆಲವರ ಹೆಸರಿಡಲಾಗಿದೆ. ನಗರದ ಯಾವ್ಯಾವ ಸಾರ್ವಜನಿಕ ರಸ್ತೆ, ವೃತ್ತ, ಪಾರ್ಕ್‌ಗಳಿಗೆ ಯಾರ್ಯಾರ ಹೆಸರಿಡಲಾಗಿದೆ ಎಂಬ ವಿವರ ಸಂಗ್ರಹಿಸುತ್ತಿದ್ದೇವೆ. ಜೀವಂತವಾಗಿರುವ ವ್ಯಕ್ತಿಗಳ ಹೆಸರಿರುವ ಎಲ್ಲವನ್ನೂ ತೆರವುಗೊಳಿಸಲು ನಾವು ನ್ಯಾಯಾಲಯದ ಮೊರೆ ಹೋಗಲಿದ್ದೇವೆ ಎಂದು ತಿಳಿಸಿದರು. ಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಕಾರ್ಯಕ್ಕೆ ಸಜ್ಜಾಗುತ್ತಿದ್ದು, ದೇಶದ ಎಲ್ಲಾ ರಾಜಕೀಯ ಪಕ್ಷಗಳು ಒಂದಾದರೂ ದಾವಣಗೆರೆ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ತಪ್ಪಿಸಲು ಸಾಧ್ಯವಿಲ್ಲ. ಹಿಂದೆಯೂ ಗೆದ್ದು ತೋರಿಸಿದ್ದೇವೆ. ಮುಂದೆಯೂ ಜಯ ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಮುಖಂಡರಾದ ರಮೇಶನಾಯ್ಕ, ಎ. ಸಿ. ರಾಘವೇಂದ್ರ, ಹೇಮಂತಕುಮಾರ್‌, ಎಲ್‌.ಡಿ.ಗೋಣೆಪ್ಪ, ಅಕ್ಕಿ ಚಂದ್ರು, ಟಿಂಕರ್‌ ಮಂಜಣ್ಣ, ಪ್ರವೀಣ್‌ ಜಾಧವ್‌ ಪತ್ರಿಕಾಗೋಷ್ಠಿಯಲ್ಲಿದ್ದರು.  

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.