ಕೃಷಿ ಕ್ಷೇತ್ರ ಆತ್ಮನಿರ್ಭರಕ್ಕೆ ಪ್ರಧಾನಿ ಪಣ: ಕಡಾಡಿ

ಕೇಂದ್ರದಿಂದ ರೈತಪರ ಯೋಜನೆ ಜಾರಿ

Team Udayavani, Apr 27, 2022, 1:32 PM IST

farmer-scheme

ದಾವಣಗೆರೆ: ಕೇಂದ್ರ ಸರ್ಕಾರ ಡಾ| ಸ್ವಾಮಿನಾಥನ್‌ ವರದಿಗೆ ಪೂರಕವಾಗಿ ರೈತರ ಪರವಾಗಿ ಹಲವಾರು ಯೋಜನೆ, ಕಾರ್ಯಕ್ರಮ ಜಾರಿಗೊಳಿಸುತ್ತಿದೆ ಎಂದು ರಾಜ್ಯಸಭೆ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದರು.

ಮಂಗಳವಾರ ಶಾಮನೂರು ಜಯದೇವಪ್ಪ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಏರ್ಪಡಿಸಿದ್ದ ಆತ್ಮನಿರ್ಭರ ಕೃಷಿ ಮತ್ತು ಸಿರಿಧಾನ್ಯಗಳ ವರ್ಷಾಚರಣೆ ಮೇಳ, ಕೇಂದ್ರ, ರಾಜ್ಯ ಸರ್ಕಾರಗಳ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

ನರೇಂದ್ರ ಮೋದಿಯವರು ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಬಗ್ಗೆ ಮಾತನಾಡಿದ ಮೊದಲ ಪ್ರಧಾನಿ. ಬೇರೆ ಯಾವುದೇ ಪ್ರಧಾನ ಮಂತ್ರಿ ಈ ಮಾತು ಹೇಳಿಲ್ಲ. ಡಾ| ಸ್ವಾಮಿನಾಥನ್‌ ವರದಿಗೆ ಪೂರಕವಾಗಿ ಕೇಂದ್ರ ಸರ್ಕಾರ ಮಣ್ಣಿನ ಆರೋಗ್ಯ ಕಾರ್ಡ್‌, ಹನಿ ನೀರನ್ನು ಸರಿಯಾಗಿ ಬಳಸುವ ಉದ್ದೇಶದಿಂದ ಕೃಷಿ ಸಿಂಚಾಯಿ, ಕೃಷಿಕರು ವಯಸ್ಸಾದ ನಂತರವೂ ಗೌರವದಿಂದ ಬಾಳಲು ಅನುಕೂಲ ಆಗುವಂತೆ ಕಿಸಾನ್‌ ಮಾನ್‌ಧನ್‌, ಹೈನುಗಾರಿಕೆಗೆ ಉತ್ತೇಜನ, ಒಳಗೊಂಡಂತೆ ಹಲವಾರು ಯೋಜನೆ ಜಾರಿಗೆ ತರುತ್ತಿದೆ. ಸ್ವತಃ ಡಾ| ಸ್ವಾಮಿನಾಥನ್‌ ಅವರೇ ಯೋಜನೆ ಜಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ದೇಶದಲ್ಲಿ ಶೇ. 48 ರಷ್ಟು ಜನ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರೂ ದೇಶದ ತಲಾ ಆದಾಯಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ. 11 ರಷ್ಟು ಮಾತ್ರವೇ ಇತ್ತು. ನರೇಂದ್ರ ಮೋದಿ ಅವರು ಕೃಷಿ ಕ್ಷೇತ್ರ ಉದ್ಯಮದ ರೂಪ ಪಡೆಯಬೇಕು. ರೈತರ ಆದಾಯ ದ್ವಿಗುಣವಾಗಬೇಕು. ಕೃಷಿ ಕ್ಷೇತ್ರವನ್ನು ಆತ್ಮನಿರ್ಭ ರವನ್ನಾಗಿ ಮಾಡದೇ ಹೋದಲ್ಲಿ ದೇಶದ ಅಭಿವೃದ್ಧಿ ಆಗುವುದಿಲ್ಲ ಎಂದರಿತು ಹಲವಾರು ರೈತರಪರ ಯೋಜನೆ ಜಾರಿಗೊಳಿಸಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯೋಜನೆಗಳು ಜಾರಿಗೆ ಬರಲಿವೆ. ರೈತರು ಎಲ್ಲ ಯೋಜನೆಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿತರಾಗಬೇಕು ಎಂದು ಆಶಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಪರ ಸರ್ಕಾರಗಳಾಗಿವೆ. ಎರಡೂ ಸರ್ಕಾರ ರೈತರ ಪರ ಅನೇಕ ಯೋಜನೆ ಜಾರಿಗೊಳಿಸಿವೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಕೇಂದ್ರದ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 21,933 ಕೋಟಿ ಅನುದಾನ ಇತ್ತು. ಮೋದಿ ಅವರು ಅಧಿಕಾರಕ್ಕೆ ಬಂದ ನಂತರ 1,37,523 ಕೋಟಿ ಅನುದಾನ ಮೀಸಲಿಡಲಾಗಿದೆ. ಮಳೆ ಆಶ್ರಿತ ಪ್ರದೇಶದ ರೈತರ ಅನುಕೂಲಕ್ಕಾಗಿ ಕೃಷಿ ಸಿಂಚಾಯಿ ಯೋಜನೆ ಮೂಲಕ 6452 ಕೋಟಿ ನೆರವು ನೀಡಲಾಗಿದೆ ಎಂದು ತಿಳಿಸಿದರು.

ಕೃಷಿ ವೆಚ್ಚವನ್ನು ಶೇ.10 ರಿಂದ 15 ರಷ್ಟು ಕಡಿಮೆಗೊಳಿಸಲು ಅತ್ಯಗತ್ಯವಾಗಿರುವ ನೂತನ ತಂತ್ರಜ್ಞಾನ ಬಳಕೆ ಪ್ರಾರಂಭಿಸಲಾಗಿದೆ. ರೈತರು ಬೆಳೆದಂತಹ ಬೆಳೆಗಳಿಗೆ ಮೌಲ್ಯವರ್ಧಿತ ದರ ದೊರೆಯುವಂತಾಗಲು ಯೋಜನೆ ರೂಪಿಸಲಾಗಿದೆ. ಕರ್ನಾಟಕದಲ್ಲಿ ರೈತರ ಬೆಳೆಗಳ ಮಾರುಕಟ್ಟೆಗಾಗಿ ಸೆಕೆಂಡರಿ ಅಗ್ರಿ ಡೈರೆಕ್ಟರ್‌ ಹುದ್ದೆ ಸೃಜಿಸಲಾಗಿದೆ ಎಂದು ತಿಳಿಸಿದರು.

ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಮಾತನಾಡಿ, ರೈತರ ಆದಾಯ ದ್ವಿಗುಣವಾಗಿ, ಸ್ವಾವಲಂಬಿ ಜೀವನ ನಡೆಸಬೇಕು ಎಂಬ ಮಹತ್ತರ ಉದ್ದೇಶದಿಂದ ಪ್ರಧಾನಿಯವರು ಕೃಷಿ ಕ್ಷೇತ್ರದ ಉತ್ತೇಜನಕ್ಕೆ ಯೋಜನೆ ಜಾರಿಗೊಳಿಸಿದ್ದಾರೆ. ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿಸುತ್ತದೆ ಮತ್ತು ವಿದೇಶಗಳಿಗೆ ರಫ್ತು ಮಾಡುವಂತಾಗಬೇಕು ಎಂದು ಸಿರಿಧಾನ್ಯಗಳನ್ನು ಬೆಳೆಯಲು ಕರೆ ನೀಡಿದ್ದಾರೆ. ಮಾತ್ರವಲ್ಲ ಸಿರಿಧಾನ್ಯ ಬೆಳೆದವರಿಗೆ ಸಹಾಯಧನ ನೀಡುವ ವ್ಯವಸ್ಥೆಯನ್ನೂ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ದೇಶ ಪ್ರಗತಿ ಸಾಧಿಸಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ಮೋದಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆಲ್ಲಲಿದೆ. ರೈತ ಮೋರ್ಚಾ ಕಾರ್ಯಕರ್ತರು ಕೇಂದ್ರ, ರಾಜ್ಯ ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಕೂತಲ್ಲಿ ನಿಂತಲ್ಲಿ ಮಾತನಾಡಬೇಕು. ಜನರ ಮನೆ ಮನೆಗೆ, ಮನಸ್ಸುಗಳಲ್ಲಿ ಯೋಜನೆ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಲೋಕಿಕೆರೆ ನಾಗರಾಜ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎಸ್‌.ಎ. ರವೀಂದ್ರ ನಾಥ್‌, ಎಸ್‌. ವಿ. ರಾಮಚಂದ್ರ, ಮಾಜಿ ಶಾಸಕ ಬಿ.ಪಿ. ಹರೀಶ್‌, ಡಾ| ಎ.ಎಚ್. ಶಿವಯೋಗಿಸ್ವಾಮಿ, ಮೇಯರ್‌ ಜಯಮ್ಮ ಗೋಪಿನಾಯ್ಕ, ಎಸ್‌.ಎಂ. ವೀರೇಶ್‌ ಹನಗವಾಡಿ, ಬಿ.ಎಸ್. ಜಗದೀಶ್‌, ಬಿ.ಎಂ. ಸತೀಶ್‌, ಶಿವಪ್ರಸಾದ್‌, ಶಾಮನೂರು ಲಿಂಗರಾಜ್‌, ಅಣಬೇರು ಜೀವನ ಮೂರ್ತಿ, ಸಂಗಜ್ಜಗೌಡ್ರು ಇತರರು ಇದ್ದರು. ಅಣಜಿ ಗುಡ್ಡಪ್ಪ ನಿರೂಪಿಸಿದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.