ಬರದ ನಡುವೆಯೂ ಸಂಕ್ರಾಂತಿಗೆ ಸಜ್ಜು
Team Udayavani, Jan 15, 2019, 7:51 AM IST
ದಾವಣಗೆರೆ: ಜಿಲ್ಲೆಯಾದ್ಯಂತ ತೀವ್ರ ಬರಗಾಲದ ನಡುವೆಯೂ ಹೊಸ ವರ್ಷದ ಮೊದಲ ಹಬ್ಬ ಸಂಕ್ರಾತಿ ಸಿದ್ಧತೆ ನಗರದಲ್ಲಿ ಸೋಮವಾರ ಕಳೆಗಟ್ಟಿತ್ತು.
ಸಮೃದ್ಧಿಯ ಸಂಕೇತವಾಗಿರುವ ಸಂಕ್ರಾತಿ, ದಕ್ಷಿಣ ಭಾರತದಲ್ಲಿ ವಿಶೇಷವಾಗಿ ಆಚರಿಸಲಾಗುವ ಹಬ್ಬವಾಗಿದ್ದು, ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲೂ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ.
ಹಬ್ಬದ ಪ್ರಯುಕ್ತ ಎಳ್ಳು, ಬೆಲ್ಲ, ಸಕ್ಕರೆ ಅಚ್ಚು ಗೊಂಬೆ, ಹಣ್ಣು, ಹೂವು, ಪೂಜಿಸಲು ಕಬ್ಬನ್ನು ಮಹಿಳೆಯರು, ಹಿರಿಯರು, ಯುವತಿಯರು ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ನಡುವೆಯೂ ಅನುಕೂಲಕ್ಕೆ ತಕ್ಕಷ್ಟು ಖರೀದಿ ಮಾಡಿದರು.
ಗಡಿಯಾರ ಕಂಬ, ಚಾಮರಾಜಪೇಟೆಯ ಮಾರುಕಟ್ಟೆಗಳಲ್ಲಿ ಹಳ್ಳಿ ಹಾಗೂ ನಗರದ ಜನರು ಸಂಕ್ರಾತಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು. ಆದರೂ ಮಾರುಕಟ್ಟೆಯಲ್ಲಿ ಕೆಲಮಟ್ಟಿಗೆ ವ್ಯಾಪಾರ ಕುಂಠಿತವಾಗಿತ್ತು.
ಮಾರುಕಟ್ಟೆಯಲ್ಲಿ ಕೆ.ಜಿ ಸೇಬು 200 ರೂ, ಕಿತ್ತಲೆಹಣ್ಣು 50 ರೂ., ದಾಳಿಂಬೆ 60 ರೂ, ಪಪ್ಪಾಯಿ 30 ರೂ., ಕರಿದ್ರಾಕ್ಷಿ 100 ರೂ, ಹಸಿರು ದ್ರಾಕ್ಷಿ 60 ರೂ, ಅಂಜೂರ ಒಂದಕ್ಕೆ 10ರೂ., ಒಂದು ಸಣ್ಣ ಕಲ್ಲಂಗಡಿ 20 ರೂ., ಮಾರು ಸೇವಂತಿಗೆ ಹೂವು 30 ರೂ. ನಂತೆ ಮಾರಾಟ ಮಾಡಲಾಗುತ್ತಿತ್ತು. ಮಾರುಕಟ್ಟೆಗೆ ಬಂದಂತಹ ಜನರು ಸಹ ಅಷ್ಟೇ ಉತ್ಸುಕರಾಗಿ ಖರೀದಿ ಮಾಡಿದರು.
ಪ್ರತಿ ವರ್ಷ 15 ರಿಂದ 20ರೂ.ಗೆ ಮಾರಾಟವಾಗುತ್ತಿದ್ದ ಒಂದು ಕಬ್ಬಿನ ಕೋಲು ಈ ಬಾರಿ 40 ರೂ.ಗೆ ಮಾರಾಟವಾದವು. ಮಾಮೂಲಿಯಾಗಿ ಜಿಲ್ಲೆಯಲ್ಲಿ ಸಿಗುವ ಕಬ್ಬು ಇದಲ್ಲ. ಮೈಸೂರು, ಮಂಡ್ಯ, ಶಿವಮೊಗ್ಗ ಭಾಗದಿಂದ ತರಿಸುತ್ತೇವೆ. ಹಾಗಾಗಿ ಸಾಗಾಣಿಕೆ ವೆಚ್ಚ ಹೆಚ್ಚಿದ್ದು, ಬೆಲೆ ಏರಿಕೆ ಅನಿವಾರ್ಯವಾಗಿದೆ ಎನ್ನುತ್ತಾರೆ ಕಬ್ಬು ವ್ಯಾಪಾರಿ ಚಾನ್.
ಮಾರುಕಟ್ಟೆಯಲ್ಲಿ ಹೂವು, ಹಣ್ಣು ಇತರೆ ಬೆಲೆ ಏನೇ ಹೆಚ್ಚಿದರೂ ಕೂಡ ವರ್ಷದ ಮೊದಲ ಸುಗ್ಗಿ ಹಬ್ಬವನ್ನು ಮಾಡದೇ ಬಿಡುವಂತಿಲ್ಲ. ಕಬ್ಬು, ಹಣ್ಣು, ಎಳ್ಳು ಬೆಲ್ಲವಿಟ್ಟು ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸುತ್ತೇವೆ. ಹಬ್ಬಕ್ಕೆ ಸಾರ್ವಜನಿಕ ರಜೆ ಇರುವುದರಿಂದ ರೊಟ್ಟಿ, ಬುತ್ತಿ, ಪಲ್ಯ, ಚಟ್ನಿಪುಡಿ, ಮೊಸರು ಹೀಗೆ ಬಗೆ ಬಗೆಯ ಅಡುಗೆ ಖಾದ್ಯ ಮಾಡಿಕೊಂಡು ಹೊಳೆ ಇಲ್ಲವೇ ಉದ್ಯಾನಗಳಿಗೆ ಕುಟುಂಬ ಸಮೇತರಾಗಿ ಹೋಗಿ ಭೋಜನ ಸವಿಯುತ್ತೇವೆ. ಆ ಮೂಲಕ ಹಬ್ಬವನ್ನು ಸಂತಸದಿಂದ ಆಚರಣೆ ಮಾಡುತ್ತೇವೆ ಎಂದು ನಗರದ ಶಿವಕುಮಾರ್ ಬಡಾವಣೆಯ ಗೃಹಿಣಿ ಗಾಯಿತ್ರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್