ಹೆಚ್ಚಾಯ್ತು ತುಂಗಭದ್ರಾ ಒಳಹರಿವು


Team Udayavani, May 28, 2018, 4:36 PM IST

dvg-1.jpg

ಬಳ್ಳಾರಿ: ಅಂತಾರಾಜ್ಯ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ದಿನೇದಿನೆ ಹೆಚ್ಚಾಗುತ್ತಿದ್ದು, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದು ಒಳಹರಿವು ಹೆಚ್ಚಳಕ್ಕೆ ಕಾರಣವಾಗಿದ್ದು, ಮೂರು ಜಿಲ್ಲೆಗಳ ಜನರನ್ನು ಕಾಡುತ್ತಿದ್ದ ಕುಡಿವ ನೀರಿನ ಸಮಸ್ಯೆಯನ್ನೂ ದೂರಮಾಡಿದೆ. 133 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯವುಳ್ಳ ತುಂಗಭದ್ರಾ ಜಲಾಶಯ ಕಳೆದ ಹಲವು ವರ್ಷಗಳಿಂದ ಸಮರ್ಪಕ ಮಳೆ ಕೊರತೆಯಿಂದಾಗಿ ಭರ್ತಿಯಾಗಿರಲಿಲ್ಲ. ಆದರೆ, ಪ್ರಸಕ್ತ ವರ್ಷ ಮೇ ತಿಂಗಳಲ್ಲೇ ಒಳಹರಿವು ಆರಂಭವಾಗಿದೆ. 

ಭಾನುವಾರ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ 3083 ಕ್ಯೂಸೆಕ್‌ ದಾಖಲಾಗಿದೆ. ಇದರಿಂದ ಜಲಾಶಯದಲ್ಲಿ ಸಂಗ್ರಹವಿದ್ದ 2.417 ಟಿಎಂಸಿ ಅಡಿ ಡೆಡ್‌ಸ್ಟೋರೇಜ್‌ ನೀರಿನೊಂದಿಗೆ ಕಳೆದ ಮೂರು ದಿನಗಳಿಂದ ಜಲಾಶಯದಲ್ಲಿ 1.289 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಸದ್ಯ ಒಟ್ಟು 3706 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ನೀರಿನ ಮಟ್ಟ 1578.90 ಅಡಿಯಿದ್ದು, 1356 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯಲ್ಲಿ ಕೇವಲ 1.005 ಟಿಎಂಸಿ ನೀರಿನ ಸಂಗ್ರಹವಿದ್ದು, 510 ಕ್ಯೂಸೆಕ್‌ ಒಳಹರಿವಿತ್ತು. ಪರಿಣಾಮ ಕಳೆದ ವರ್ಷ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ವಿವಿಧೆಡೆ ಕುಡಿವ ನೀರಿನ ಸಮಸ್ಯೆ ತಲೆದೋರಿತ್ತು.
 
ಈ ಬಾರಿ ಮುಂಗಾರು ಮಳೆ ಶೀಘ್ರವಾಗಿ ಆರಂಭಗೊಂಡಿದ್ದು, ಜಲಾನಯನ ಪ್ರದೇಶಗಳಾದ ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ದಾವಣಗೆರೆ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಪರಿಣಾಮ ಪ್ರತಿದಿನ ಸರಾಸರಿ 3 ಸಾವಿರ ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಇದು ಮೂರು ಜಿಲ್ಲೆಗಳ ರೈತರಲ್ಲಿ ಸಂತಸ ಮೂಡಿಸಿದೆ. ಇನ್ನೊಂದು ತಿಂಗಳು ಮೂರು ಜಿಲ್ಲೆಗಳಲ್ಲಿ ಕುಡಿವ ನೀರಿಗೆ ಯಾವುದೇ ಸಮಸ್ಯೆ ಆಗಲಾರದು ಎನ್ನುತ್ತವೆ ತುಂಗಭದ್ರಾ ಆಡಳಿತ ಮಂಡಳಿಯ ಅಧಿಕಾರಿಗಳು.

ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ಇದೇ ರೀತಿ ಮುಂದುವರಿದಲ್ಲಿ ಪ್ರಸಕ್ತ ವರ್ಷ ಡೆಡ್‌ಸ್ಟೋರೇಜ್‌ ನೀರನ್ನು ಬಳಸುವ ಪ್ರಶ್ನೆಯೇ ಉದ್ಭವಿಸಲ್ಲ. ಕುಡಿವ ನೀರಿಗೂ ಜನರ ಪರದಾಟ ತಪ್ಪಲಿದೆ. ಆದರೆ, ಪ್ರಕೃತಿಯಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದರೆ, ಪ್ರಸಕ್ತ ವರ್ಷ ಮುಂಗಾರು ಮಳೆ ಒಳ್ಳೆಯ ಮುನ್ಸೂಚನೆ ನೀಡಿದ್ದು, ಕಳೆದ ನಾಲ್ಕು ವರ್ಷಗಳಿಂದ ಭರ್ತಿಯಾಗದ ತುಂಗಭದ್ರಾ ಜಲಾಶಯ ಈ ಬಾರಿಯಾದರೂ
ಭರ್ತಿಯಾಗಿ ಎರಡು ಬೆಳೆಗಳಿಗೆ ನೀರು ದೊರೆಯುವಂತಾಗಲಿ ಎಂಬುದು ಜಿಲ್ಲೆಯ ರೈತರ ಒತ್ತಾಸೆಯಾಗಿದೆ.

ಕುಡಿಯಲು ಎಲ್‌ಎಲ್‌ಸಿಗೆ ನೀರು: ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳು ಮತ್ತು ನೆರೆಯ ಆಂಧ್ರ ಪ್ರದೇಶದ ಕರ್ನೂಲ್‌
ಜಿಲ್ಲೆಯ ಎಮ್ಮಿಗನೂರು, ಇತರೆ ಗ್ರಾಮಗಳಿಗೆ ಕುಡಿವ ನೀರು ಪೂರೈಸುವಂತೆ ಆಗ್ರಹಿಸಿ, ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಗಿತ್ತು. ಜಲಾಶಯದಲ್ಲಿ ಬಳಕೆ ಮಾಡಬಾರದಾಗಿದ್ದ ಡೆಡ್‌ಸ್ಟೋರೇಜ್‌ ನೀರನ್ನು ಬಳಸುವುದು ಅಧಿಕಾರಿಗಳಿಗೆ ಅನಿವಾರ್ಯವಾಗಿತ್ತು.

ಮೂರು ದಿನಗಳಿಂದ ಜಲಾಶಯಕ್ಕೆ ನೀರು ಹರಿದು ಬಂದಿರುವುದರಿಂದ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದು, ಕುಡಿಯುವ ಸಲುವಾಗಿ ಎಲ್‌ಎಲ್‌ಸಿ ಕಾಲುವೆಗೆ ಮೊದಲು 500 ಕ್ಯೂಸೆಕ್‌ ನೀರನ್ನು ಬಿಟ್ಟಿದ್ದ ಮಂಡಳಿಯ ಅಧಿಕಾರಿಗಳು ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ ಪುನಃ 700 ಕ್ಯೂಸೆಕ್‌ ಹೆಚ್ಚಿಸಿ, ಒಟ್ಟು 1200 ಕ್ಯೂಸೆಕ್‌ ನೀರನ್ನು ಹೊರಬಿಡಲಾಗಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.