ಹೆಚ್ಚುತ್ತಿದೆ ವಿದೇಶಿ ವ್ಯಾಮೋಹ


Team Udayavani, Oct 30, 2017, 3:43 PM IST

30-25.jpg

ದಾವಣಗೆರೆ: ಇಂದಿನ ಯುವ ಜನಾಂಗದಲ್ಲಿ ನಮ್ಮ ತನದ ಪರಿಚಯ, ವಿವೇಕ ಇಲ್ಲವಾಗಿ, ವಿದೇಶಿ ವ್ಯಾಮೋಹಕ್ಕೆ 
ಬಲಿಯಾಗುತ್ತಿದ್ದಾರೆ ಎಂದು ಬೇಲೂರು ರಾಮಕೃಷ್ಣ ಮಿಷನ್‌, ಅದ್ವೈತಾಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್‌ ಹೇಳಿದ್ದಾರೆ.

ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ರಾಮಕೃಷ್ಣ ಆಶ್ರಮದಿಂದ ಸಹೋದರಿ ನಿವೇದಿತಾರ 150ನೇ ಜನ್ಮದಿನದ ನಿಮಿತ್ತ ಭಾನುವಾರ ನಡೆದ 2ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಯ ವ್ಯಾಮೋಹಕ್ಕೆ ತುತ್ತಾಗಿದ್ದಾರೆ. ಆಂತರಿಕ ಚೇತನ, ವಿವೇಕದ ಜಾಗೃತಿ ಕಳೆದುಕೊಂಡಿದ್ದಾರೆ. ಇದರಿಂದ ಆಚೆ ಬಂದು ಸ್ವದೇಶಿ ಹಿರಿಮೆಯನ್ನು ಎತ್ತಿಹಿಡಿಯಬೇಕು ಎಂದರು. ನಮ್ಮ ಸನಾತನ ಪರಂಪರೆಗಳ ಮಹತ್ವ ಇದೀಗ  ದೇಶಿಗರಿಗೆ ಅರ್ಥವಾಗುತ್ತಿವೆ. ಯೋಗದ ಮಹತ್ವನ್ನು ನಾವು ಯಾರೂ ಅರಿತಿರಲಿಲ್ಲ. ಇದೀಗ ವಿದೇಶಿಯರು ಮನಗಂಡಿದ್ದಾರೆ. ಅದನ್ನು ನೋಡಿ ನಾವೀಗ ಯೋಗ ಮಾಡಲು ಮುಂದಾಗುತ್ತಿದ್ದೇವೆ. ಹಿತ್ತಲ ಗಿಡ ಮದ್ದಲ್ಲ ಎಂಬಂತೆ ನಮ್ಮ ತನವನ್ನು ನಾವೇ ಕಡೆಗಣಿಸುತ್ತಿದ್ದೇವೆ. ಸಹೋದರಿ ನಿವೇದಿತಾರ ಜೀವನ ಸಂದೇಶ ಓದಿ, ಅವರ ಆರ್ದಶ, ತತ್ವಗಳನ್ನು ಅರಿತರೆ ನಮ್ಮ ತನದ ಹೆಮ್ಮೆ ನಮಗೆ ತಿಳಿಯುತ್ತದೆ ಎಂದು ಹೇಳಿದರು. 

ಎಲ್ಲರೂ ಶಿಕ್ಷಣವೆಂಬ ಬಂಧನದಲ್ಲಿಯೇ ಉಳಿದಿದ್ದಾರೆ. ಅದಕ್ಕಿಂತ ಹೆಚ್ಚಿನ ವಿಚಾರ ತಿಳಿಯುವ ಮನಸ್ಥಿತಿಯೇ ನಮ್ಮ 
ಯುವಜನಾಂಗದಲ್ಲಿ ಸಿದ್ಧಗೊಂಡಿಲ್ಲ. ಇಡೀ ಪ್ರಪಂಚವೇ ಭಾರತದ ಮಹತ್ವ ಅರಿತು ಹೆಮ್ಮೆಯಿಂದ ನೋಡುತ್ತದೆ. ಆದರೆ, ಭಾರತೀಯರಿಗೆ ನಮ್ಮ ದೇಶ, ಮಹತ್ವದ ಅರಿವಿನ ಕೊರತೆ ಕಂಡು ಬರುತ್ತಿದೆ ಎಂದು ವಿಷಾದಿಸಿದರು. ಬೆಂಗಳೂರು ರಾಮಕೃಷ್ಣ ಮಠದ ಸ್ವಾಮಿ ತ್ಯಾಗೀಶ್ವರಾನಂದಜೀ ಮಹಾರಾಜ್‌ ಮಾತನಾಡಿ, ದಾಸ್ಯತ್ವದ ಮನೋಭಾವದಿಂದ ಇಂದಿನ ಯುವಜನತೆ ಸಮೂಹ ಸನ್ನಿಗೆ ಒಳಗಾದವರಂತಾಗಿದ್ದಾರೆ. ಇಂತಹ ಮನೋಭಾವ ತೊಡೆದುಹಾಕಿ ಶ್ರೇಷ್ಠ ವ್ಯಕ್ತಿಗಳ ಸಾಧನೆ, ಶ್ರಮ, ಉಪದೇಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ದೇಶ, ಭಾಷೆ ಬೇರೆಯಾದರೂ ಪರಿಪೂರ್ಣ ಭಾರತೀಯರಾಗಿ ಸೋದರಿ ನಿವೇದಿತಾರು ದೇಶ ಸೇವೆಗೈದಿದ್ದಾರೆ. ಆದರೆ, ನಾವು ಮಾತ್ರ ಪಾಶ್ಚತ್ಯ ಸಂಸ್ಕೃತಿಗೆ ಮಾರುಹೋಗಿದ್ದೇವೆ. ನಮ್ಮನ್ನು, ನಮ್ಮ ದೇಶವನ್ನು ನಾವೇ ಗೌರವಿಸಿಕೊಳ್ಳದಿದ್ದರೆ ಬೇರಾರೂ ಗೌರವಿಸಲು ಸಾಧ್ಯ ಎಂದು ಪ್ರಶ್ನಿಸಿದರು.  ನಾವು, ನಮ್ಮ ಕೆಲಸ, ನಮ್ಮ ಭಾಷೆ, ದೇಶವನ್ನು ಗೌರವಿಸುವ ಮನೋಭಾವ ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ವಿದೇಶದಲ್ಲಿ ನೆಲಸಿರುವ ನಮ್ಮ ಭಾರತೀಯರ ಜಾಣ್ಮೆ, ಬುದ್ದಿಯನ್ನು ಮಾತ್ರ ಬಳಸಿಕೊಂಡು ತಮ್ಮ ಕೆಲಸ ನಿರ್ವಹಿಸುತ್ತಾರೆ. ಆದರೆ, ಎಂದಿಗೂ ಅವರನ್ನು ತಮ್ಮ ಸರಿಸಮ ಗೌರವ ನೀಡುವುದಿಲ್ಲ. ಇದೇ ಸ್ವಾಭಿಮಾನ ಭಾರತೀಯರಿಗೆ ಇಲ್ಲದಿರುವುದು ದುರಂತ ಎಂದು ವಿಷಾದ ವ್ಯಕ್ತಪಡಿಸಿದರು. ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ
ಜಿತಕಾಮಾನಂದಜೀ ಮಹಾರಾಜ್‌ ಅಧ್ಯಕ್ಷತೆ ವಹಿಸಿದ್ದರು.

ಊಟಿ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಾಘವೇಶಾನಂದಜೀ, ದಾವಣಗೆರೆ ರಾಮಕೃಷ್ಣ ಮಠದ ಅಧ್ಯಕ್ಷ ಆರ್‌.ಆರ್‌. ರಮೇಶ್‌ ಬಾಬು, ಹೇಮಂತ್‌ ಮಹಾರಾಜ್‌, ಕೊಡಗಿನ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಬೋಧಸ್ವರೂಪನಂದಜೀ ಮಹಾರಾಜ್‌ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.