ಪೌರ ಸಮಸ್ಯೆಗಳಿಗೆ ವಾಟ್ಸ್‌ ಆ್ಯಪ್‌ “ಪರಿಹಾರ’

ಪಾಲಿಕೆಯಿಂದ ವಿನೂತನ ಕಾರ್ಯಕ್ರಮ! ­ಸ್ವಚ್ಛ ದಾವಣಗೆರೆ ಮಾಡುವ ಗುರಿ: ವೀರೇಶ್‌

Team Udayavani, Mar 6, 2021, 6:04 PM IST

whatsapp

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಯಗಳ ಕುರಿತು ಸಾರ್ವಜನಿಕರು ವಾಟ್ಸ್‌ಆ್ಯಪ್‌ (8277234444) ಮೂಲಕ ದೂರು, ಅಹವಾಲು ಸಲ್ಲಿಸಲು “ಪರಿಹಾರ’ ಎಂಬ ಹೊಸ ವ್ಯವಸ್ಥೆಯನ್ನು ಮಹಾನಗರ ಪಾಲಿಕೆ ರೂಪಿಸಿದೆ. ಶುಕ್ರವಾರ ತಮ್ಮ ಕಚೇರಿಯಲ್ಲಿಯೇ ಈ ವ್ಯವಸ್ಥೆಗೆ ಚಾಲನೆ ನೀಡಿದ ನೂತನ ಮಹಾಪೌರ ಎಸ್‌.ಟಿ.ವೀರೇಶ್‌, ಈ ಕುರಿತು ಮಾಧ್ಯಮಗಳಿಗೆ ವಿವರಣೆ ನೀಡಿದರು.

ಮಹಾನಗರ ವ್ಯಾಪ್ತಿಯಲ್ಲಿ ನಡೆಯುವ ಎಲ್ಲ ಕಾಮಗಾರಿಗಳು, ರಸ್ತೆ, ಒಳಚರಂಡಿ ದುರಸ್ತಿ, ನೀರು ಸರಬರಾಜು, ಸ್ವತ್ಛತೆ, ಬೀದಿದೀಪ, ಕೊಳವೆ ಮಾರ್ಗ ದುರಸ್ತಿ, ಸತ್ತ ಪ್ರಾಣಿ ವಿಲೇವಾರಿ ಸೇರಿದಂತೆ ಇನ್ನಿತರ  ಪೌರಸೇವೆಗಳ ಕುರಿತು ಸಾರ್ವಜನಿಕರಿಗೆ ದೂರುಸಲ್ಲಿಸಿ, ತಕ್ಷಣ ಪರಿಹಾರ ಕಂಡುಕೊಳ್ಳಲು ಈ ವ್ಯವಸ್ಥೆ ಮಾಡಲಾಗಿದೆ ಎಂದದು ವಿವರಿಸಿದರು.

ಈಗಾಗಾಲೇ ಪಾಲಿಕೆಯಲ್ಲಿ ಸ್ಥಿರ ದೂರವಾಣಿಯಲ್ಲಿ (234444) ಕರೆ ಸ್ವೀಕರಿಸುವ ಮೂಲಕ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಕೇಂದ್ರದಲ್ಲಿಯೇ ವಾಟ್ಸ್‌ಆ್ಯಪ್‌ ಪರಿಹಾರ ಕಾರ್ಯವೂ ನಡೆಯಲಿದೆ. ಇದಕ್ಕಾಗಿ ಸಾರ್ವಜನಿಕ ಸಂಪರ್ಕ  ಅಧಿಕಾರಿಯನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರಿಂದ ಸ್ವೀಕರಿಸಿದ ದೂರುಗಳನ್ನು ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗೆ ತಿಳಿಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಬಳಿಕ ದೂರುದಾರರಿಗೆ ಪರಿಹಾರ ಒದಗಿಸಿದ ಬಗ್ಗೆ ಮಾಹಿತಿಯೂ ನೀಡಲಾಗುವುದು ಎಂದರು.

ಸ್ವತ್ಛ ಮಂಗಳೂರು ಮಾದರಿಯಲ್ಲಿ ಕಾರ್ಯಕ್ರಮ ರೂಪಿಸಿ ದಾವಣಗೆರೆಯನ್ನೂ ಸ್ವತ್ಛ ದಾವಣಗೆರೆ ಮಾಡುವ ಗುರಿ ಹೊಂದಿದ್ದೇನೆ. ಸ್ವತ್ಛತೆಯಲ್ಲಿ ಮಹಾನಗರವನ್ನು ಐದನೇ ರ್‍ಯಾಂಕ್‌ ಒಳಗೆ ತರುವ ಚಿಂತನೆಯಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಈ ಕುರಿತು ಜನರಲ್ಲಿಯೂ ಜಾಗೃತಿ ಮೂಡಿಸಲಾಗುವುದು. ಈಗಾಗಲೇ ಆಗಿರುವ ಸರ್ಕಾರಿ ಜಾಗೆ ಒತ್ತುವರಿ ತೆರವುಗೊಳಿಸಲು  ಚಿಂತನೆ ನಡೆಸುವ ಮುಂದೆ ಅತಿಕ್ರಮಣ ಆಗದಂತೆ ತಡೆಯಲು ಸಹ ಕ್ರಮವಹಿಸಲಾಗುವುದು ಎಂದರು.

ಹಿಂದಿನ ಮಹಾಪೌರರರು ಜಾರಿಗೆ ತಂದಿದ್ದ “ಮನೆ ಬಾಗಿಲಿಗೆ ಮಹಾನಗರ ಪಾಲಿಕೆ’ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಪಾಲಿಕೆ ಸದಸ್ಯರೊಂದಿಗೆ ಚರ್ಚಿಸಿ, ಕೆಲವು ಮಾರ್ಪಾಡುಗಳೊಂದಿಗೆ ಮುಂದುವರಿಸಲಾಗುವುದು ಎಂದರು.

ಆರೋಪ ಸುಳ್ಳು: ಹಿಂದಿನ ಮೇಯರ್‌ ಅವಧಿಯಲ್ಲಿ 52 ಎಕರೆ ಬಡಾವಣೆಗಳಲ್ಲಿ ಅಕ್ರಮವಾಗಿ ಡೋರ್‌ ನಂಬರ್‌ ನೀಡಲಾಗಿದೆ ಎಂಬ ಕಾಂಗ್ರೆಸ್ಸಿನವರ ಆರೋಪ ಸಂಪೂರ್ಣ ಸುಳ್ಳು. ಹಿಂದಿನ ಮೇಯರ್‌ ಅವರಿಂದ ಯಾವುದೇ ಅಧಿಕಾರ ದುರುಪಯೋಗ, ಅಕ್ರಮ ನಡೆದಿಲ್ಲ. ದೂಡಾ ಅನುಮೋದನೆಯೊಂದಿಗೆ ಎಲ್ಲವೂ ಕಾನೂನಾತ್ಮಕವಾಗಿ ನಡೆದಿದೆ ಎಂದು ಮಹಾಪೌರರು ಹಾಗೂ ಪಾಲಿಕೆ ಸದಸ್ಯ ಪ್ರಸನ್ನಕುಮಾರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಪಾಲಿಕೆ ಸದಸ್ಯರಾದ ಪ್ರಸನ್ನಕುಮಾರ್‌, ಕೆ.ಎಂ. ವೀರೇಶ್‌, ಶಿವಪ್ರಕಾಶ್‌, ಸಾರ್ವಜನಿಕ ಸಂಪರ್ಕ ಅಧಿಕಾರಿ ಸುನೀಲ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.