ಅಕ್ರಮ-ಸಕ್ರಮ ಹಕ್ಕುಪತ್ರ ವಿತರಣೆ
•21 ಫಲಾನುಭವಿಗಳು•ಸ್ವಂತ ಜಾಗ ಹೊಂದುವ ಕನಸು ಸಾಕಾರ
Team Udayavani, Jul 23, 2019, 3:09 PM IST
ಜಗಳೂರು: ತಾಲೂಕಿನ ಕಸ್ತೂರಿಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಅಕ್ರಮ ಸಕ್ರಮ ಫಲಾನುಭವಿಗಳೊಂದಿಗೆ ತಹಶೀಲ್ದಾರ್ ಮತ್ತು ಸಿಬ್ಬಂದಿ ವರ್ಗ.
ಜಗಳೂರು: ಸೂರು ಇಲ್ಲದವರು ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಯನ್ನು ಸರ್ಕಾರ ಸಕ್ರಮಗೊಳಿಸಿ ನಿಮಗೆ ಹಕ್ಕುಪತ್ರ ನೀಡಿದ್ದು, ಇದನ್ನು ಸದ್ವಿನಿಯೋಗ ಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಗ್ರಾಮಸ್ಥರಿಗೆ ಸಲಹೆ ನೀಡಿದರು.
ಸೋಮವಾರ ತಾಲೂಕಿನ ಕಸ್ತೂರಿಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ 94 ಸಿ ವಿಧಿಯಡಿ ಸರಕಾರಿ ಜಮಿನಿನಲ್ಲಿ ಕಟ್ಟಡ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.
ಸೂರು ಇಲ್ಲದವರು ಗೊಮಾಳ, ಸೇಂದಿವನ , ಸರಕಾರಿ ಜಮೀನುಗಳಲ್ಲಿ ಹಲವಾರು ವರ್ಷಗಳ ಹಿಂದೆ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡು, ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಸರಕಾರವೇ ಸೂರು ಸಕ್ರಮಗೊಳಿಸಿ ಹಕ್ಕುಪತ್ರ ನೀಡಿದೆ. ಸ್ವಂತ ಜಾಗವನ್ನು ಹೊಂದಬೇಕೆಂಬ ನಿಮ್ಮ ಕನಸನ್ನು ಸರಕಾರ ನನಸು ಮಾಡಿದ್ದು, ನೀವು ಜಾಗವನ್ನು ನಿಮ್ಮ ಸ್ವಂತ ಉಪಯೋಗಕ್ಕೆ ಬಳಕೆ ಮಾಡಿಕೊಳ್ಳ ಬೇಕು ಎಂದು ಹೇಳಿದರು.
ಆರ್ ಐ ಗಳಾದ ಸಮೀರ್, ಧನಂಜಯ್, ಗ್ರಾಮ ಲೆಕ್ಕಾಧಿಕಾರಿ ಮಲ್ಲಿಕಾರ್ಜುನ , ಪ್ರಕಾಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಈ ವೇಳೆ 21 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಇಂದು ತಹಶೀಲ್ದಾರ್ರ ಜನ್ಮದಿನ ಎಂದರಿತ ಗ್ರಾಮಸ್ಥರು ಜನ್ಮದಿನವನ್ನು ಆಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ
ಇಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’