ಸಮಸ್ಯೆಗಳಿಗೆ ವಚನಗಳು ಪರಿಹಾರ


Team Udayavani, Jan 12, 2019, 7:44 AM IST

dvg-4.jpg

ದಾವಣಗೆರೆ: ಪ್ರಸ್ತುತ ಜೀವನದಲ್ಲಿ ಎದುರಾಗುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಶಕ್ತಿಯನ್ನು ವಚನ ಸಾಹಿತ್ಯ ಹೊಂದಿದೆ ಎಂದು ಸಿರಿಗೆರೆ ಬೃಹನ್ಮಠದ ಶ್ರೀ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ಶುಕ್ರವಾರ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಕದಳಿ ಮಹಿಳಾ ವೇದಿಕೆಯ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಮಾತನಾಡಿದರು.

ಅನೇಕ ಶರಣ-ಶರಣೆಯರು ತಮ್ಮ ಬದುಕಿನುದ್ದಕ್ಕೂ ಕಂಡು, ಅನುಭವಿಸಿದ ಅನುಭವವನ್ನೇ ಅದ್ಭುತವಾಗಿ ವಚನಗಳ ಮೂಲಕ ಕಟ್ಟಿಕೊಟ್ಟಿದ್ದಾರೆ. ಅನುಭವದ ನುಡಿಗಳಾದ ವಚನಗಳು ಇಂದಿನ 21ನೇ ಶತಮಾನಕ್ಕೂ ಪ್ರಸ್ತುತವಾಗಿವೆ. ಅವು ಜನರ ನೋವಿಗೆ ಪರಿಹಾರ ದೊರಕಿಸಿಕೊಡುವ ಶಕ್ತಿ ಹೊಂದಿವೆ. ಹಾಗಾಗಿ ವಚನ ಸಾಹಿತ್ಯ ಶ್ರೇಷ್ಠವಾಗಿದೆ ಎಂದರು.

ಕದಳಿ ಎಂದರೆ ಬಾಳೆ. ಆದರೆ, ಕದಳಿ ಕೇವಲ ಬಾಳೆ ಅಲ್ಲ. ಕದಳಿ ಎಂದರೆ ಅದು ತನು, ಮನ, ಸಾಂಸಾರಿಕ ಬದುಕು ಎಂದರ್ಥ. ಕದಳಿ ಎಂಬುದು ಜೀವನದ ಎಲ್ಲ ಅನುಭವದ ಸಾರ ಒಳಗೊಂಡಿದೆ. ಯಾರು ನಿಜವಾಗಲೂ ಬದುಕಿನಲ್ಲಿ ಎದುರಾಗುವ ಜಂಜಾಟಗಳನ್ನು ಎದುರಿಸುವ ಧೈರ್ಯ ರೂಢಿಸಿಕೊಳ್ಳುತ್ತಾರೋ ಅವರ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಜಿ.ಎಸ್‌. ಶಿವರುದ್ರಪ್ಪ ಅವರ ಬಹುತೇಕ ಕವಿತೆಗಳಲ್ಲಿ ಸತಿ-ಪತಿ ಜೀವನದ ಸಾಂಸಾರಿಕ ತೊಳಲಾಟ ಕಂಡುಬಂದರೆ, ಕೆಲವು ಕವಿತೆಗಳಲ್ಲಿ ತಂದೆ-ತಾಯಿ, ಮಕ್ಕಳ ವಾತ್ಸಲ್ಯದ ಭಾವನೆಗಳನ್ನು ಅರ್ಥಪೂರ್ಣವಾಗಿ ಕಟ್ಟಿಕೊಟ್ಟಿದ್ದಾರೆ. ಅವರ ಕವಿತೆಯ ಅನೇಕ ಶಬ್ದ, ಪದ ಪುಂಜಗಳ ಅರ್ಥಗಳು ಅಕ್ಕಮಹಾದೇವಿಯ ವಚನಗಳಲ್ಲಿ ಕಂಡುಬರುತ್ತವೆ. ಹಾಗಾಗಿ ಜಿಎಸ್‌. ಶಿವರುದ್ರಪ್ಪ ಅವರ ಕವಿತೆಗಳು, ಶರಣೆ ಅಕ್ಕಮಹಾದೇವಿ ವಚನಗಳು ಒಂದೇ ರೀತಿಯ ಸ್ವರೂಪವನ್ನು ಒಳಗೊಂಡಿವೆ ಎಂದರು.

ಭೌತಿಕ ಜೀವನದಲ್ಲಿ ಅನುಭವಿಸುವ ಸಂಕಟ, ಜಗಳದಿಂದ ದೂರವಾಗುವ ಮಹಿಳೆಯರು, ನಂತರದಲ್ಲಿ ತವರು ಮನೆಯ ದಾರಿ ತುಳಿಯುವುದು ಸಾಮಾನ್ಯ. ಅದೇ ರೀತಿ ಸಂದರ್ಭ ಅಕ್ಕಮಹಾದೇವಿಗೂ ಒದಗಿ ಬಂದಿತು. ಆಗ ಅವಳು ಹೆತ್ತ ತಾಯಿ-ತಂದೆಯ ಮನೆ ಕಡೆ ಪ್ರವೇಶಿಸಿದೇ ಆಧ್ಯಾತ್ಮದ ತವರು ಮನೆಯಾದ ಕಲ್ಯಾಣದ ಅನುಭವ ಮಂಟಪದ ಕಡೆ ಹೋಗುತ್ತಾಳೆ. ಅಲ್ಲಿ ನಡೆಯುತ್ತಿದ್ದ ಆಧ್ಯಾತ್ಮಿಕ ವಿಚಾರ, ಜೀವನದ ಅನುಭವದ ಚರ್ಚೆಯ ವಿಚಾರಗಳು ಬೇರೆಲ್ಲೂ ಕೂಡ ನಡೆಯುತ್ತಿರಲಿಲ್ಲ ಎಂದು ಹೇಳಿದರು.

ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಬಸವರಾಜ ಸಾದರ ಮಾತನಾಡಿ, ವಚನ ಸಂಸ್ಕೃತಿಯ ಪುನರುತ್ಥಾನವನ್ನು ಕದಳಿ ಮಹಿಳಾ ವೇದಿಕೆ ಮಾಡುತ್ತಿದೆ. ಜಗತ್ತಿನ ಎಲ್ಲಾ ನೋವು ನಿವಾರಿಸುವ ಶಕ್ತಿ ವಚನಗಳಿಗಿದೆ. ಅವುಗಳ ಅರ್ಥ ಇಂದು ಅರ್ಧ ವಯಸ್ಸು ಕಳೆದ ನಮ್ಮಂತಹ ಹಿರಿಯರಿಗಿಂತ ಯುವ ಸಮೂಹಕ್ಕೆ ತಲುಪಬೇಕಾಗಿದೆ ಎಂದರು.

ಗರ್ಭಗುಡಿಯ ಮಾಲಕಿ ತಾಯಿ ಆಗಿದ್ದು, ಆ ತಾಯಿಗೆ ದೇವಸ್ಥಾನದ ಗರ್ಭಗುಡಿ ಪ್ರವೇಶ ನಿರ್ಬಂಧಿಸುವುದು ಸರಿಯಲ್ಲ. ಋತುಚಕ್ರ ಸಮಯ ಎಂಬ ಅನಿಷ್ಟ ಪದ್ಧತಿಯಿಂದ ಮಹಿಳೆ ಸೂತಕದಲ್ಲಿ ಬದುಕುವ ಸ್ಥಿತಿ ಇಂದು ನಿರ್ಮಾಣ ಆಗಿದೆ. ಇಂತಹ ಪದ್ಧತಿಯನ್ನು ಬಸವಣ್ಣ, ಅಕ್ಕಮಹಾದೇವಿ ಹಿಂದಿನ ಕಾಲದಲ್ಲೇ ವಿರೋಧಿಸಿದ್ದಾರೆ. ಅವರು ಋತುಚಕ್ರ ಸಮಯ ಸೂತಕವಲ್ಲ, ಪವಿತ್ರವಾದದ್ದು ಎಂದು ಹೇಳಿದ್ದಾರೆ. ಈ ನೀತಿಯನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಚನ ಸಾಹಿತ್ಯ, ಸಂಸ್ಕೃತಿ ಸಾಗರವಿದ್ದಂತೆ. ಅದರ ಆಳಕ್ಕೆ ಇಳಿದಂತೆ ಅಣಿಮುತ್ತುಗಳು ದೊರಕುತ್ತವೆ. ಈ ಸಾಹಿತ್ಯದ ಅಧ್ಯಯನದಿಂದ ಇಡೀ ಜಗತ್ತಿನ ಅಂತರ್‌ ಶಿಸ್ತಿನ ಜ್ಞಾನ ಪರಿಚಯವಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರಾದ ಡಾ| ಎಚ್. ಗಿರಿಜಮ್ಮ, ಪ್ರೊ| ಟಿ. ನೀಲಾಂಬಿಕ, ಅನುಸೂಯಮ್ಮ ಟಿ.ಎಸ್‌. ಪಾಟೀಲ್‌, ಮಲ್ಲಮ್ಮ, ಸರೋಜಾ ಪಾಟೀಲ್‌, ಪುಟ್ಟಮ್ಮ ಮಹಾರುದ್ರಯ್ಯ, ಡಾ| ಜಸ್ಟಿನ್‌ ಡಿಸೋಜಾ, ಡಾ| ಶಾಂತಾ ಭಟ್, ಚೌಡಿಕೆ ಉಚ್ಚೆಂಗೆಮ್ಮ, ರೇವತಿ ನಾಯಕ್‌ ಅವರಿಗೆ ಕಾಯಕ ಶ್ರೀ ಪ್ರಶಸ್ತಿ ನೀಡಲಾಯಿತು.

ಅಖೀಲ ಭಾರತ ಶರಣ ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಚಿಕ್ಕೋಳ್‌ ಈಶ್ವರಪ್ಪ, ಕದಳಿ ಮಹಿಳಾ ವೇದಿಕೆ ಜಿಲ್ಲಾಧ್ಯಕ್ಷೆ ಪ್ರಮೀಳ ನಟರಾಜ್‌, ಗಿರಿಜಮ್ಮ ಸೋಮಶೇಖರಗೌಡ್ರು, ಸುಲೋಚನಾ ರಾಜಶೇಖರ್‌, ಯಶಾ ದಿನೇಶ್‌ ಇತರರು ಉಪಸ್ಥಿತರಿದ್ದರು. ಕದಳಿ ಮಹಿಳಾ ವೇದಿಕೆಯ ಸದಸ್ಯರು ವಚನ ಗಾಯನ ನಡೆಸಿಕೊಟ್ಟರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.