ಮಕ್ಕಳಲ್ಲಿ ಕನಸು ಬಿತ್ತಿದ ಅಧಿಕಾರಿಗಳು!

ತಮ್ಮ ಬಾಲ್ಯದ ಕಷ್ಟ ಜೀವನ-ಸಾಧನೆಯ ಹಾದಿ ಬಿಚ್ಚಿಟ್ಟ ಡಿಸಿ ಸಹಿತ ಇತರ ಅಧಿಕಾರಿಗಳು

Team Udayavani, Jan 31, 2020, 11:58 AM IST

31-Janauary-5

ಜಗಳೂರು: ದೇಶದಲ್ಲಿ ಉನ್ನತ ಸ್ಥಾನದಲ್ಲಿರುವಂತ ಶೇ. 90 ಅಧಿಕಾರಿಗಳು ಮಾತೃಭಾಷೆ ಮಾಧ್ಯಮ ಮತ್ತು ಸರಕಾರಿ ಶಾಲೆಗಳಲ್ಲಿ ಕಲಿತವರೇ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಹೇಳಿದರು .

ತಾಲೂಕಿನ ಹೊಸಕೆರೆ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳಲಾಗಿದ್ದ “ಕನಸು ಬಿತ್ತುವ ಕೆಲಸ, ರಾಷ್ಟ್ರ ಕಟ್ಟುವ ಕೆಲಸ” ಮತ್ತು ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡು ಬಡತನದಿಂದಾಗಿ ಎಷ್ಟೋ ರಾತ್ರಿ ಊಟವಿಲ್ಲದೆ ನೀರು ಕುಡಿದು, ಅವರಿವರು ಕೊಟ್ಟ ಬಟ್ಟೆ ಧರಿಸಿ ಜೀವನ ಸಾಗಿಸಿದ್ದೇನೆ. ಈ ಕಷ್ಟದ ಜೀವನದಲ್ಲೂ ನಾನು ಕೆಂಪು ಗೂಟದ ಕಾರಿನಲ್ಲಿ ಓಡಾಡಬೇಕು ಎಂದು ಕನಸನ್ನು ಕಂಡು ಅದನ್ನು ನೆರವೇರಿಸಿಕೊಂಡಿದ್ದೇನೆ. ನೀವೂ ನಮ್ಮಂತಾಗುವ ಕನಸನ್ನು ಕಾಣಬೇಕೆಂಬ ಉದ್ದೇಶದಿಂದ ತಾಲೂಕಿನ ಈ ಗ್ರಾಮದ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳನ್ನೂ ನನ್ನೊಂದಿಗೆ ಕರೆತಂದಿದ್ದೇನೆ. ಕನಸು ಕಣಲಿಕ್ಕೆ ಅಂತಸ್ತಿನ ವ್ಯತ್ಯಾಸವಿರುವುದಿಲ್ಲ. ಸಾಧಿಸುವ ಛಲದ ಜೊತೆಗೆ ನಿರ್ದಿಷ್ಟ ಗುರಿ, ಅದಕ್ಕೆ ತಕ್ಕ ಶ್ರಮ ಹಾಕಿದಾಗ ಯಶಸ್ಸು ಕಾಣಲಿದ್ದೀರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯತಿ ಸಿಇಒ ಪದ್ಮ ಬಸವಂತಪ್ಪ ಮಾತನಾಡಿ, ಪ್ರಾಣಿ ಮತ್ತು ಮನುಷ್ಯನಿಗೆ ವ್ಯತ್ಯಾಸವಿದೆ. ಮನುಷ್ಯನಿಗೆ ಯೋಚನೆ ಶಕ್ತಿ ಇದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಕಂಡ ಕನಸನ್ನು ಯಶಸ್ವಿಗೊಳಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಪಿಡಿ ನಜ್ಮಾ ಮಾತನಾಡಿ, ನಿಮ್ಮ ಮೇಲೆ ನಿಮಗೆ ಆತ್ಮವಿಶ್ವಾಸವಿರಬೇಕು. ಆಗ ಮಾತ್ರ ನಮ್ಮ ಕನಸನ್ನು ನಾವು ಈಡೇರಿಸಿಕೊಳ್ಳಲು ಸಾಧ್ಯ. ನನಗೆ ಓದಲು ಆಸಕ್ತಿ ಇರಲಿಲ್ಲ. ವಿವಾಹದ ನಂತರ ನನ್ನ ಅತ್ತೆ, ಮಾವ, ಕುಟುಂಬದವರ ಒತ್ತಡದಿಂದ ಪದವಿ ಪಡೆದು ನಂತರ ಪ್ರೌಢಶಾಲಾ ಶಿಕ್ಷಕಿಯಾದೆ. ನಂತರ ಉನ್ನತ ಅ ಧಿಕಾರಿಗಳನ್ನು ಕಂಡು ನಾನು ಕೂಡ ಅಂತಹ ಸ್ಥಾನಕ್ಕೆ ಬರಬೇಕೆಂಧು ಕಷ್ಟು ಪಟ್ಟು ಓದಿ ಈ ಸ್ಥಾನದಲ್ಲಿದ್ದೇನೆ ಎಂದು ತಮ್ಮ ಯಶಸ್ಸಿನ ಗುಟ್ಟನ್ನ ಮಕ್ಕಳಿಗೆ ತಿಳಿಸಿದರು.

ವಿಶೇಷ ಭೂಸ್ವಾ ಧೀನಾಧಿ ಕಾರಿ ರೇಷ್ಮ ಹಾನಗಲ್‌ ಮಾತನಾಡಿ, ಮುಸ್ಲಿಂ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವುದಿಲ್ಲ. ಅದರಲ್ಲಿಯೂ ಕನ್ನಡ ಮಾಧ್ಯಮದಲ್ಲಿ ಓದಲಿಕ್ಕೆ ಅವಕಾಶವಿರಲಿಲ್ಲ. ನಮ್ಮ ತಂದೆ ಅವರ ಸಹೋದರರ ವಿರೋಧದ ನಡುವೆಯೂ ನನ್ನನ್ನು ಶಾಲೆಗೆ ಸೇರಿಸಿದ್ದರಿಂದ ನಾನು ಈ ಹಂತ ತಲುಪಿದ್ದೇನೆ ಎಂದು ಹೇಳಿದರು.

ಎ.ಸಿ. ಮಮತ ಹೊಸಗೌಡ್ರು ಮಾತನಾಡಿ, ನಾನು ವಿಜ್ಞಾನ ವಿಷಯದಲ್ಲಿ ಉತ್ತಮಅಂಕ ಪಡೆದು ಇಂಜಿನಿಯರಿಂಗ್‌ ಸೀಟ್‌ ದೊರೆತರೂ ಅದು ಸಾಧ್ಯವಾಗಲಿಲ್ಲ. ಡಿಇಡಿ ಪದವಿ ಪಡೆದು ಶಿಕ್ಷಕಿಯಾಗಿದೆ. ನಂತರ ವಿವಾಹವಾಗಿ ಎರಡು ಮಕ್ಕಳ ತಾಯಿಯಾದ ನಂತರ ಸತತ ಪರಿಶ್ರಮದಿಂದ ಕೆಎಎಸ್‌ ಪಾಸ್‌ ಆಗಿ ಎ ಸಿ ಆಗಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.