ಸಮರೋಪಾದಿಯಲ್ಲಿ ಕೆಲಸ ಮಾಡಲು ಸೂಚನೆ
Team Udayavani, May 9, 2020, 11:21 AM IST
ಜಗಳೂರು: ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಅಧ್ಯಕ್ಷತೆಯಲ್ಲಿ ಪಿಡಿಒ ಮತ್ತು ಗ್ರಾಮಲೆಕ್ಕಾಧಿಕಾರಿಗಳ ಸಭೆ ನಡೆಯಿತು.
ಜಗಳೂರು: ಕೋವಿಡ್ ನಿಯಂತ್ರಿಸಲು ಪ್ರತಿಯೊಬ್ಬ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮರೋಪಾರಿಯಲ್ಲಿ ಕೆಲಸ ಮಾಡಬೇಕು ಎಂದು ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪಿಡಿಒ ಮತ್ತು ಗ್ರಾಮ ಲೆಕ್ಕಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಟ್ಟಣದಲ್ಲಿ ಅಂಗಡಿ ಮುಂಭಾಗದಲ್ಲಿ ಮತ್ತು ತರಕಾರಿ ಮಾರಾಟ ಮಾಡುವ ಸ್ಥಳಗಳಲ್ಲಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವಂತೆ ಬಾಕ್ಸ್ಗಳನ್ನು ಮಾಡಲಾಗಿದೆ. ಕೋವಿಡ್ ನಮ್ಮಲ್ಲಿ ಬಂದಿಲ್ಲ ಎಂಬ ಬೇಜವಾಬ್ದಾರಿ ಬೇಡ. ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ತಾಲೂಕಿನಲ್ಲಿ ಚೆಕ್ಪೋಸ್ಟ್ಗಳನ್ನು ಮಾಡಿದ್ದು ಯಾವುದೇ ಭಾಗದಿಂದಲೂ ದಾವಣಗೆರೆಯಿಂದ ಜಗಳೂರಿಗೆ ಯಾರೂ ಬರದಂತೆ ಮತ್ತು ತೆರಳದಂತೆ ನಿಗಾ ವಹಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪಿಡಿಒ ಮತ್ತು ಗ್ರಾಮಲೆಕ್ಕಾಧಿಕಾರಿಗಳು ಗ್ರಾಮಗಳ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಿಸಿ ಹೊಸಬರನ್ನು ಗ್ರಾಮಗಳಿಗೆ ಪ್ರವೇಶ ಮಾಡದಂತೆ ನಿರ್ಬಂಧಿಸಬೇಕು ಎಂದರು. ಪಪಂ ಮುಖ್ಯಾಧಿಕಾರಿ ರಾಜು ಡಿ. ಬಣಕಾರ, ತಾಪಂ ಇಒ ಮಲ್ಲಾ ನಾಯ್ಕ, ಸಿಪಿಐ ದುರುಗಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ