ಅನುದಾನ ಖರ್ಚಾದರೂ ಸ್ವಚ್ಛವಾಗದ ಚರಂಡಿ
Team Udayavani, Mar 5, 2020, 11:36 AM IST
ಜಗಳೂರು: 14ನೇ ಹಣಕಾಸು ಯೋಜನೆಯಡಿ ಚರಂಡಿ ಸ್ವಚ್ಛತೆ ಹಾಗೂ ಬೀದಿ ದೀಪಗಳ ದುರಸ್ತಿಗೆ 40 ಸಾವಿರಕ್ಕೂ ಅಧಿಕ ವೆಚ್ಚ ತೋರಿಸಲಾಗಿದ್ದರೂ ಗ್ರಾಮದ ದಲಿತ ಕಾಲೋನಿಯಲ್ಲಿ ಚರಂಡಿಗಳು ಗಬ್ಬು ನಾರುತ್ತಿದ್ದು, ಬೀದಿ ದೀಪದ ವ್ಯವಸ್ಥೆ ಇಲ್ಲದೇ ಈ ಭಾಗದ ಜನರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ಮುಸ್ಟೂರು ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ ದೂರಿದ್ದಾರೆ.
ಗ್ರಾಮದ ಚರಂಡಿ ಮತ್ತು ಬೀದಿ ದೀಪದ ಸಮಸ್ಯೆಯನ್ನು ಬಗೆಹರಿಸುವಂತೆ ಹಲವಾರು ಬಾರಿ ಮನವಿ ಮಾಡಿದರೂ ಸಹ ಸದಸ್ಯರ ಮಾತಿಗೆ ಪಿಡಿಒ ಕಿಮ್ಮತ್ತು ನೀಡುತ್ತಿಲ್ಲ. ಬರುವ ಅನುದಾನವನ್ನು ತಮಗೆ ಇಚ್ಛೆ ಬಂದಂತೆ ವೆಚ್ಚ ಮಾಡುತ್ತಾರೆ ಎಂದು ಸದಸ್ಯ ತಿಪ್ಪೇಸ್ವಾಮಿ ದೂರುತ್ತಾರೆ.
ಈ ಕಾಲೋನಿಯಲ್ಲಿ ಚರಂಡಿ ಅಲ್ಲದೇ ಬೀದಿ ದೀಪದ ವ್ಯವಸ್ಥೆ ಸಮರ್ಪಕವಾಗಿ ಇಲ್ಲದೇ ಕಳೆದ 15 ದಿನಗಳಿಂದ ಕತ್ತಲೆಯಲ್ಲಿ
ಜೀವನ ಕಳೆಯುವಂತಾಗಿದೆ. ರಾತ್ರಿ ಆಯಿತೆಂದರೆ ಮನೆಗಳಿಗೆ ಹಾವು, ಚೇಳು, ವಿಷ ಜಂತುಗಳು ಬರುತ್ತವೆ ಎನ್ನುತ್ತಾರೆ ಯಲ್ಲಮ್ಮ.
ಚರಂಡಿ ಸ್ವಚ್ಛಗೊಳಿಸಲು ಕಳೆದ ಕೆಲವು ತಿಂಗಳ ಹಿಂದೆ 48,730
ರೂ. ಬ್ಯಾಂಕಿನಿಂದ ತೆಗೆಯಲಾಗಿದೆ. ಆದರೆ ಕೆಲಸ ಮಾತ್ರ ಆಗಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.
ಚರಂಡಿ ನೀರು ಹೋಗಲು ವ್ಯಕ್ತಿಯೋರ್ವ ಅಡ್ಡಿ ಪಡಿಸುತ್ತಿದ್ದರಿಂದ ಚರಂಡಿ ನೀರು ಸರಾಗವಾಗಿ ಹರಿಯುತ್ತಿಲ್ಲ. ಕೆಲವು ದಿನಗಳ ಹಿಂದೆಯೇ ಹೊಸ ಬಲ್ಪ್ಗಳನ್ನು ಹಾಕಲಾಗಿದೆ. ಸುನಿತಾ,
ಪಿಡಿಒ, ಮುಸ್ಟೂರು ಗ್ರಾಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ