ಐತಿಹಾಸಿಕ ಮೆರವಣಿಗೆಗೆ ಸಾಕ್ಷಿಯಾದ ಜಗಳೂರು


Team Udayavani, Feb 1, 2018, 1:53 PM IST

01-31.jpg

ದಾವಣಗೆರೆ: ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆ ದಿನ ನಡೆಯುವ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಬೆಳ್ಳಿ ಪಲ್ಲಕ್ಕಿ ಮೆರವಣಿಗೆಗೆ ಲಕ್ಷಾಂತರ ಭಕ್ತರ ಸಮೂಹ ಸಾಕ್ಷಿಯಾಯಿತು. ಸಿರಿಗೆರೆ ತರಳಬಾಳು ಮಠದ ಪವಿತ್ರ ಪರಂಪರೆಯಂತೆ ಮಠದ ಪೀಠಾಧಿಪತಿಗಳ ಬೆಳ್ಳಿ ಪಲ್ಲಕ್ಕಿ ಮೆರವಣಿಗೆ ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನದಂದು ಮಾತ್ರ ನಡೆಯುತ್ತದೆ. ವಿಶೇಷವಾಗಿ ಅಲಂಕೃತವಾದ ಪಲ್ಲಕ್ಕಿಯಲ್ಲಿ ಕುಳಿತ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ
ಮೆರವಣಿಗೆಯನ್ನು ಕಣ್ತುಂಬಿಕೊಳ್ಳುವ ಅಪರೂಪದ ಕ್ಷಣಕ್ಕಾಗಿ ತುದಿಗಾಲ ಮೇಲೆ ಅಸಂಖ್ಯಾತ ಭಕ್ತ ಸಮೂಹ ಕಾಯುತ್ತಿದ್ದರು. ಶ್ರೀಗಳು ಮೆರವಣಿಗೆಯಲ್ಲಿ ಸಾಗುವ ದೃಶ್ಯವನ್ನು ನಾಡಿನ ದಶದಿಕ್ಕುಗಳಿಂದಲೂ ಆಗಮಿಸಿದ ಭಕ್ತ ಸಮೂಹ ಕಣ್ಮನ ತುಂಬಿಕೊಂಡಿತು.

ಜಗಳೂರು ಪಟ್ಟಣದಲ್ಲಿ ಕಣ್ಣು ಹಾಯಿಸಿದಷ್ಟು ದೂರಕ್ಕೂ ಭಕ್ತರು ಕಂಡು ಬಂದರು. ಭಕ್ತ ಸಾಗರದ ಮಧ್ಯೆ ಸಾಗಿ ಬಂದ ಮೆರವಣಿಗೆ ತರಳಬಾಳು ಮಠದ ಐತಿಹಾಸಿಕ ಪರಂಪರೆಯ ಪ್ರತೀಕವಾಗಿತ್ತು. ಮೆರವಣಿಗೆಯ ರಸ್ತೆಯ ಇಕ್ಕೆಲಗಳಲ್ಲಿ ಮಾತ್ರವಲ್ಲ, ಮನೆ ಮಹಡಿ, ಮರ, ಕಾಂಪೌಂಡ್‌ಗಳನ್ನು ಏರಿ ಕುಳಿತಿದ್ದ ಭಕ್ತರು, ಸಿರಿಗೆರೆ ತರಳಬಾಳು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ
ದರ್ಶನ ಪಡೆದರು. ಐತಿಹಾಸಿಕ ಮೆರವಣಿಗೆಗೆ ಡೊಳ್ಳು, ಕಹಳೆ, ಕೀಲುಕುದುರೆ, ಹುಲಿವೇಶ, ನಂದಿಕೋಲು, ವೀರಗಾಸೆ, ಭಜನಾ ತಂಡಗಳು ಹೀಗೆ ಹತ್ತು ಹಲವು ಜಾನಪದ ಕಲಾ ತಂಡಗಳು ಇನ್ನಷ್ಟು ರಂಗು ತಂದಿದ್ದವು. ಡಾ| ಶಿವಮೂರ್ತಿ ಶಿವಾಚಾರ್ಯ
ಸ್ವಾಮೀಜಿ ಪಲ್ಲಕ್ಕಿಯಲ್ಲಿ ಆಸೀನರಾದಾಗ ಸಮಿತಿ ಕಾರ್ಯದರ್ಶಿ ಡಾ| ಜಿ. ಮಂಜುನಾಥಗೌಡ ಹಾಗೂ ಖಜಾಂಚಿ ಯು.ಜಿ. ಶಿವಕುಮಾರ್‌ ಮಾಲಾರ್ಪಣೆ ಮಾಡಿ ಭಕ್ತಿಕಾಣಿಕೆ ಸಮರ್ಪಿಸಿದರು.

ಈ ಐತಿಹಾಸಿಕ ಮೆರವಣಿಗೆ ಪಾಪಯ್ಯನಾಯಕ ದೇವಾಲಯದ ಸಮೀಪ ಇರುವ ಶಿವನಗೌಡರ ಮನೆಯಿಂದ ಹೊರಟು ಭುವನೇಶ್ವರಿ ಸರ್ಕಲ್‌, ನೆಹರೂ ಸರ್ಕಲ್‌, ಕೆ.ಇ.ಬಿ. ಸರ್ಕಲ್‌, ನಗರದ ಪ್ರಮುಖ ಬೀದಿಗಳ ಮೂಲಕ ಹುಣ್ಣಿಮೆ ಮಹೋತ್ಸವದ ವೇದಿಕೆ ಕಾರ್ಯಕ್ರಮ ನಡೆಯುತ್ತಿರುವ ತರಳಬಾಳು ಕೇಂದ್ರದಲ್ಲಿ ಅಂತ್ಯಗೊಂಡಿತು. ಮಠದ ಬಿರುದಾವಳಿಗಳನ್ನು ಹಿಡಿದ ಯುವಕರು, ಚಾಮರ ಬೀಸುತ್ತ ಸಾಗಿದ ಪಾರುಪತ್ತೆಗಾರರು ಅಲ್ಲದೆ ಹಲವು ಜಾನಪದ ಕಲಾತಂಡಗಳು, ಶಿವಸೈನ್ಯ, ಯುವಪಡೆಗಳು ವಿಶೇಷ
ದಿರಿಸಿನಿಂದ ಆಕರ್ಷಿಸಿದರು. ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಶಾಸಕ ಎಚ್‌.ಪಿ. ರಾಜೇಶ್‌, ಮಾಜಿ ಶಾಸಕರಾದ ಎಸ್‌.ವಿ. ರಾಮಚಂದ್ರ, ಟಿ. ಗುರುಸಿದ್ಧನಗೌಡ, ಮಹೋತ್ಸವ ಕಾರ್ಯ ನಿರ್ವಹಣಾ ಸಮಿತಿ ಅಧ್ಯಕ್ಷ ಕೆ.ಬಿ. ಕಲ್ಲೇರುದ್ರೇಶ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.