ಮುಖ್ಯಮಂತ್ರಿಗಳೇ ಇನ್ನೂ ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ:ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
Team Udayavani, Jan 30, 2021, 1:46 PM IST
ದಾವಣಗೆರೆ: ಮುಖ್ಯಮಂತ್ರಿಗಳೇ ಇನ್ನೂ ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ. ಕೂಡಲೇ ಪಂಚಮಸಾಲಿ ಸಮಾಜಕ್ಕೆ ಎರಡು ಎ ಮೀಸಲಾತಿ ನೀಡಿ. ಇನ್ನು ಮುಂದಿನ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದ್ದು ಇದರಿಂದ ಏನಾದರೂ ಅನಾಹುತ ಸಂಭವಿಸಿದರೆ ಅದರ ಹೊಣೆಯನ್ನು ಮುಖ್ಯಮಂತ್ರಿಯವರೇ ಹೊರಬೇಕಾಗುತ್ತದೆ ಎಂದು ಕೂಡಲ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಹರಿಹರ ಪೀಠದ ವಚನಾನಂದ ಸ್ವಾಮೀಜಿಯವರೊಂದಿಗೆ ಶನಿವಾರ ನಗರದ ರಾಣಿಚೆನ್ನಮ್ಮ ವೃತ್ತದಲ್ಲಿ ಬಾರುಕೋಲು ಬೀಸುವ ಮೂಲಕ ಪಾದಯಾತ್ರೆಗೆ ಕ್ರಾಂತಿ ರೂಪ ಕೊಟ್ಟು ಶ್ರೀಗಳು ಮಾತನಾಡಿದರು.
ಇದನ್ನೂ ಓದಿ:ಗಾಂಧೀಜಿಯನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ಮಂದಿ ಹೆಚ್ಚಾಗಿದ್ದಾರೆ: ಸಿದ್ದರಾಮಯ್ಯ
ರಾಜ್ಯದಲ್ಲಿ 17 ಜನ ಪಂಚಮಸಾಲಿ ಶಾಸಕರಿದ್ದು ಎಲ್ಲರೂ ಸಮಾಜಕ್ಕೆ ಎರಡು ಎ ಮೀಸಲಾತಿ ನೀಡುವ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಬೇಕು. ಶಾಸಕರು ಎಲ್ಲ ಸಮುದಾಯದಿಂದ ಆಗಿರಬಹುದು. ಆದರೆ, ಶಾಸಕರಿಗೆ ಟಿಕೆಟ್ ಕೊಡುವಾಗ ಪಂಚಮಸಾಲಿ ಎಂಬ ಜಾತಿ ನೋಡಿಯೇ ಕೊಡಲಾಗಿದೆ ಎಂಬುದನ್ನು ಶಾಸಕರು ಅರಿಯಬೇಕು. ಸಮಾಜಕ್ಕೆ ಎರಡು ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿಯವರ ಮೇಲೆ ಒತ್ತಡ ಹಾಕಬೇಕು. ಉಳಿದವರಿಗೆ ನ್ಯಾಯ ಕೊಡುತ್ತೀರಿ, ಪಂಚಮಸಾಲಿಗಳಿಗೆ ನ್ಯಾಯ ಏಕೆ ಒದಗಿಸುತ್ತಿಲ್ಲ ಎಂದು ಕೇಳಬೇಕು. ಮೀಸಲಾತಿ ಕೊಡದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಯಡಿಯೂರಪ್ಪ ಅವರಿಗೆ ಒತ್ತಡ ಹಾಕಬೇಕು ಎಂದರು.
ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ಮಾತನಾಡಿ, ಎರಡು ಎ ಮೀಸಲಾತಿ ಪಂಚಮಸಾಲಿಗಳಿಗೆ ನೀಡುವ ಭಿಕ್ಷೆಯಲ್ಲ. ಅದು ಹಕ್ಕು. ಲಿಂಗಾಯತದ ಅನೇಕ ಒಳಪಂಗಡಗಳು ಎರಡು ಎ ಮೀಸಲಾತಿಯನ್ನು ಈಗಾಗಲೇ ಪಡೆದಿವೆ. ಪಂಚಮಸಾಲಿಗಳಿಗೂ ಸಿಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ