ವೀರಶೈವ ಒಳಪಂಗಡ ಒಗ್ಗೂಡಲಿ


Team Udayavani, Mar 10, 2019, 7:44 AM IST

dvg-3.jpg

ಹರಿಹರ: ವೀರಶೈವ ಸಮಾಜದ ಒಳಪಂಗಡಗಳ ಮಧ್ಯೆ ಪರಸ್ಪರ ವಿವಾಹ ಸಂಬಂಧಗಳು ಏರ್ಪಟ್ಟಾಗ ಮಾತ್ರ ಸಮಾಜ ಸಂಘಟನೆ ಬಲಾಡ್ಯಗೊಳ್ಳಲು ಸಾಧ್ಯ ಎಂದು ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಹೇಳಿದರು.

ನಗರ ಹೊರವಲಯದ ಪಂಚಮಸಾಲಿ ಪೀಠದ ಹರ ದೇವಸ್ಥಾನದಲ್ಲಿ ಶನಿವಾರ ನಡೆದ ವೀರಶೈವ ಮಹಾಸಭಾ ತಾಲೂಕು ಘಟಕದ ಸಂಘಟನೆ ಮತ್ತು ಸದಸ್ಯತ್ವ ನೋಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಧರ್ಮ, ಜಾತಿಗಳಲ್ಲೂ ಪಂಗಡಗಳ ಅಸ್ತಿತ್ವ ಸಹಜ. ಪರಸ್ಪರ
ವಿವಾಹ ಸಂಬಂಧಗಳೇರ್ಪಟ್ಟರೆ ಸಹಬಾಳ್ವೆ ಸುಗಮವಾಗುತ್ತದೆ ಎಂದರು.

ಹಾನಗಲ್‌ ಕುಮಾರಸ್ವಾಮಿಗಳು ದೂರದೃಷ್ಟಿಯಿಂದ ಎಲ್ಲಾ ಒಳಪಂಗಡಗಳನ್ನು ಒಟ್ಟುಗೂಡಿಸಿ ಮಹಾಸಭಾ ಸ್ಥಾಪಿಸಿದರು. ತದನಂತರ ಒಳಪಂಗಡಗಳ ಒಗ್ಗೂಡಿಸುವಿಕೆ ನಿರಂತರವಾಗಿ ನಡೆಯುತ್ತಿದೆ. ವಿದೇಶಗಳಲ್ಲೆಲ್ಲೂ ವೀರಶೈವರಲ್ಲಿ ಒಳಪಂಗಡಗಳು ಅಸ್ತಿತ್ವದಲ್ಲಿಲ್ಲ. ಎಲ್ಲರೂ ವೀರಶೈವ ಅಥವಾ ಬಸವದಳ ಎಂಬ ಹೆಸರಿನಡಿ ಒಗ್ಗಟ್ಟಾಗಿದ್ದಾರೆ. ಸಮಾಜದ ಪ್ರತಿಯೊಬ್ಬರೂ ವೀರಶೈವ ಮಹಾಸಭಾ ಸದಸ್ಯತ್ವ ಪಡೆದು,
ಎಲ್ಲೆಡೆ ಒಗ್ಗಟ್ಟು ಪ್ರದರ್ಶಿಸಬೇಕೆಂದು ಕರೆ ನೀಡಿದರು.

ತಾಲೂಕು ಅಧ್ಯಕ್ಷ ಡಿ.ಜಿ.ಶಿವಾನಂದಪ್ಪ ಮಾತನಾಡಿ, ಇಂದಿನಿಂದ ಸದಸ್ಯತ್ವ ನೋಂದಣಿ ಜೊತೆಗೆ ಒಳಪಂಗಡಗಳ ಒಗ್ಗೂಡಿಸುವ ಮಹತ್ತರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರಾಜ್ಯದ 84 ತಾಲೂಕುಗಳ ಪೈಕಿ ದಾವಣಗೆರೆ ಜಿಲ್ಲೆಯ ಹರಿಹರ ಮತ್ತು ದಾವಣಗೆರೆ ತಾಲೂಕುಗಳಲ್ಲಿ ಮಾತ್ರ ಮಹಾಸಭಾಗೆ ಚುನಾವಣೆ ನಡೆದಿದೆ. ಉಳಿದ ತಾಲೂಕುಗಳಲ್ಲೂ ಸಂಘಟನೆ ಚುರುಕಾಗಬೇಕಿದೆ ಎಂದರು.

ಹಿರಿಯ ಮುಖಂಡ ಎನ್‌.ಜಿ. ನಾಗನಗೌಡ, ಪಾಲಾಕ್ಷಪ್ಪ ಬಣಕಾರ್‌, ಡಿ.ಎಂ.ಹಾಲಸ್ವಾಮಿ ಮಾತನಾಡಿದರು. ಪಂಚಮಸಾಲಿ ಸಮಾಜದ ಅಧ್ಯಕ್ಷ ಗುಳೇದಹಳ್ಳಿ ಶೇಖರಪ್ಪ, ಕುಂಬಾರ ಸಮಾಜದ ಅಧ್ಯಕ್ಷ ಕರಿಬಸಪ್ಪ, ಹಡಪದ ಅಣ್ಣಪ್ಪ ಸಮಾಜದ ಅಧ್ಯಕ್ಷ ಕೆ.ಉಮಾಪತಿ, ಬಣಜಿಗ ಸಮಾಜದ
ಅಧ್ಯಕ್ಷ ಟಿ.ಜೆ.ಮುರುಗೇಶಪ್ಪ, ನೊಣಬ ಸಮಾಜದ ಅಧ್ಯಕ್ಷ ಕೆ.ಎನ್‌. ನಾಗನಗೌಡ, ಸಾಧು ವೀರಶೈವ ಸಮಾಜದ ಎಚ್‌. ಎಂ. ಶಿವಾನಂದಪ್ಪ, ಜಿ.ನಂದಿಗೌಡ್ರು, ಎಚ್‌. ವಿಶ್ವನಾಥಪ್ಪ, ತಿಮ್ಮನಗೌಡ, ಆರ್‌.ಸಿ. ಪಾಟೀಲ್‌, ಚಂದ್ರಶೇಖರ್‌ ಪೂಜಾರಿ, ಬಸವರಾಜ ಓಂಕಾರಿ, ಅನಿತಾ ಪಾಟೀಲ್‌, ಕೆ.ಸಿ. ಪಾಟೀಲ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.