26ಕ್ಕೆ ಮತ್ತೆ ಕಲ್ಯಾಣ ಆಂದೋಲನ ಪೂರ್ವಭಾವಿ ಸಭೆ


Team Udayavani, Jun 25, 2019, 7:35 AM IST

dg-tdy-2..

ದಾವಣಗೆರೆ: ಸಹಮತ... ವೇದಿಕೆ ಪದಾಧಿಕಾರಿಗಳ ಸುದ್ದಿಗೋಷ್ಠಿ.

ದಾವಣಗೆರೆ: ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಆ. 22 ರಂದು ನಡೆಯಲಿರುವ ಮತ್ತೆ ಕಲ್ಯಾಣ…ಆಂದೋಲನದ ಹಿನ್ನೆಲೆಯಲ್ಲಿ ಜೂ. 26 ರಂದು ಕುವೆಂಪು ಕನ್ನಡ ಭವನದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಹಮತ ವೇದಿಕೆಯ ಡಾ| ಎಚ್.ಎಸ್‌. ಮಂಜುನಾಥ್‌ ಕುರ್ಕಿ ತಿಳಿಸಿದ್ದಾರೆ.

ಮತ್ತೆ ಕಲ್ಯಾಣ… ಆಂದೋಲನದ ಯಶಸ್ಸಿಗೆ ರೂಪುರೇಷೆ, ಎಲ್ಲಾ ಜಾತಿ, ವರ್ಗದ ಮಠಾಧೀಶರು, ಮುಖಂಡರನ್ನು ಆಹ್ವಾನಿಸುವುದು ಒಳಗೊಂಡಂತೆ ಅನೇಕ ವಿಚಾರಗಳ ವಿನಿಮಯ, ಚಿಂತನೆ-ಮಂಥನ ಮಾಡುವ ಉದ್ದೇಶದಿಂದ ಬುಧವಾರ ಬೆಳಗ್ಗೆ 11ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ನಾಡಿನಲ್ಲಿ 900 ವರ್ಷಗಳ ಹಿಂದೆ ಬಸವಾದಿ ಶರಣರ ನೇತೃತ್ವದಲ್ಲಿ ಜಾತಿ, ಮತ, ಪಂಥ, ಲಿಂಗ ಭೇದ, ಅಸಮಾನತೆಯ ವಿರುದ್ಧ ಕಲ್ಯಾಣ ಕ್ರಾಂತಿ ನಡೆದಿತ್ತು. ಪ್ರಸ್ತುತ ವಾತಾವರಣದಲ್ಲಿ ಅಂತಹ ಕ್ರಾಂತಿಯ ಅಗತ್ಯತೆ ಇದೆ. ಅಂತಹ ತತ್ವಗಳು, ಮಾನವೀಯ ಚಿಂತನೆಗಳತ್ತ ಹೊರಳಿ ನೋಡುವ ಪ್ರಯತ್ನವೇ ಮತ್ತೆ ಕಲ್ಯಾಣ… ಆಂದೋಲನ ಎಂದು ತಿಳಿಸಿದರು.

ಮತ್ತೆ ಕಲ್ಯಾಣ ಆಂದೋಲನ… ಕೇವಲ ಒಂದು ಸಮಾರಂಭ, ವಿಚಾರ ಸಂಕಿರಣ ಅಲ್ಲ. ಸಮಾಜದ ಇಂದಿನ ತಲ್ಲಣಗಳಿಗೆ ಇದೇ ನೆಲದಲ್ಲಿ ಜನ್ಮ ತಳೆದ ಶರಣ ಚಳವಳಿಯ ತಾತ್ವಿಕ ಭಿತ್ತಿಯೊಳಗಿನಿಂದ ಪರಿಹಾರಗಳನ್ನು ಹುಡುಕಿಕೊಳ್ಳುವ ಅನ್ವೇಷಣೆ. ವ್ಯಕ್ತಿ, ಕಸುಬು, ಜಾತಿ, ಲಿಂಗ, ಭಾಷೆ, ಧರ್ಮಗಳ ಹೆಸರಲ್ಲಿ ಮನುಷ್ಯರು ಸಹಜೀವಿಗಳಿಂದ ಸರಿಯುತ್ತಾ ಒಡೆದು ಹೋಗುತ್ತಿರುವ ಆತಂಕದ ಮಧ್ಯೆ ಜೊತೆ ಜೊತೆಯಾಗಿಯೇ ಮುನ್ನಡೆಯಲು ತೊಡಗುತ್ತಿರುವ ಹೊಸ ಪ್ರಕ್ರಿಯೆ ಎಂದು ತಿಳಿಸಿದರು.

ಆಗಸ್ಟ್‌ ತಿಂಗಳ ಪೂರ್ತಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ನಡೆಯಲಿರುವ ಮತ್ತೆ ಕಲ್ಯಾಣ ಆಂದೋಲನ… ಆ.1 ರಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಪ್ರಾರಂಭವಾಗಲಿದೆ. 12ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿಯ ನಂತರ ಕೆಲವರು ವಚನಗಳನ್ನು ಸುಡುವ ಪ್ರಯತ್ನ ನಡೆಸಿದಾಗ ವಚನಕಾರ್ತಿ ಅಕ್ಕನಾಗಮ್ಮ ವಚನಗಳ ಗಂಟು ಹೊತ್ತುಕೊಂಡು ಬಂದು ತರೀಕೆರೆ ಸಮೀಪದ ಎಣ್ಣೆಹಳ್ಳಿಯಲ್ಲಿ ಸಂರಕ್ಷಿಸಿ, ಸಂವರ್ಧನೆಗೆ ತಂದ ನೆನಪಿನಲ್ಲಿ ತರೀಕೆರೆಯಿಂದ ಪ್ರಾರಂಭಿಸಿ, ಆ.30 ರಂದು ಬಸವ ಕಲ್ಯಾಣದಲ್ಲಿ ಮುಕ್ತಾಯವಾಗಲಿದೆ. ದಾವಣಗೆರೆಯಲ್ಲಿ ಆ.22 ರಂದು ಆಂದೋಲನದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಎಂ. ಶಿವಕುಮಾರ್‌, ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ದೇವರಮನೆ ಶಿವಕುಮಾರ್‌, ಜಿಪಂ ಸದಸ್ಯ ಕೆ.ಎಸ್‌. ಬಸವಂತಪ್ಪ, ನಗರಪಾಲಿಕೆ ಮಾಜಿ ಸದಸ್ಯ ಶ್ರೀನಿವಾಸ್‌ ಶಿವಗಂಗಾ, ಶಶಿಧರ್‌ ಹೆಮ್ಮನಬೇತೂರು, ಶ್ರೀನಿವಾಸ್‌ ಮಳ್ಳೆಕಟ್ಟೆ, ಕೊರಟಿಕೆರೆ ಶಿವಕುಮಾರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.