ಕನಕದಾಸರು ಜಾತಿ-ಧರ್ಮ ಮೀರಿದ ದಾರ್ಶನಿಕ


Team Udayavani, Dec 4, 2020, 2:23 PM IST

ಕನಕದಾಸರು ಜಾತಿ-ಧರ್ಮ ಮೀರಿದ ದಾರ್ಶನಿಕ

ದಾವಣಗೆರೆ: ದಾಸ ಶ್ರೇಷ್ಠ ಕನಕದಾಸರು ಜಾತಿ, ಧರ್ಮ ಮೀರಿ ಸಾಮಾಜಿಕನ್ಯಾಯ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ ದಾರ್ಶನಿಕ ಎಂದು ದಾವಣಗೆರೆವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಹೇಳಿದರು.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತತ್ವಜ್ಞಾನಿ ಕನಕದಾಸರ ಚಿಂತನೆ, ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಶ್ರೀಮಂತಿಕೆಯ ಸುಪ್ಪತ್ತಿಗೆಯಲ್ಲಿ ಬೆಳೆದು ಐಷಾರಾಮಿ ಜೀವನ ಮಾಡಬಹುದಾಗಿದ್ದಕನಕದಾಸರು ಲೌಕಿಕ ಸುಖಕ್ಕಿಂತಪಾರಮಾರ್ಥಿಕ ಸುಖವನ್ನು ಅರಸಿದರು.ಭಗವಂತನ ಸನ್ನಿಧಾನದಲ್ಲಿ ಶಾಶ್ವತ ನೆಲೆ ಕಂಡುಕೊಂಡರು. ತ್ಯಾಗ, ಅಚಲ ಭಕ್ತಿ, ದೇವರಆರಾಧನೆಯಲ್ಲಿ ತಮ್ಮನ್ನುಅರ್ಪಿಸಿಕೊಂಡವರು ಎಂದು ಸ್ಮರಿಸಿದರು. ಕನಕದಾಸರು ತಮ್ಮನ್ನು ದಾಸರದಾಸ ಎನ್ನುವ ಮೂಲಕ ಸಮರ್ಪಣಾ ಭಾವತೋರಿದ್ದಾರೆ. ಅಂತಹ ಹಂತವನ್ನು ತಲುಪುವುದು ಸುಲಭವಲ್ಲ. ಅವರಲ್ಲಿನಭಕ್ತಿ, ಸೇವಾಕಾಂಕ್ಷೆಗಳು ಉನ್ನತಿಗೆ ಏರಿಸಿದವು.ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆಮ್ಮದೇಯಾದ ಕೊಡುಗೆ ನೀಡಿದ್ದಾರೆ. ಅವರಕಾವ್ಯಗಳು ವಾಸ್ತವಕ್ಕೆ ಹಿಡಿದ ಕನ್ನಡಿ ಎಂದು ತಿಳಿಸಿದರು.

ಕುಲಸಚಿವ ಪ್ರೊ| ಬಸವರಾಜ ಬಣಕಾರ ಮಾತನಾಡಿ, ದೇವರು ಭಕ್ತನಿಗೆ ದರ್ಶನ ನೀಡದಿದ್ದಾಗ ನಿಷ್ಕಲ್ಮಷ ಭಕ್ತಿ, ಅಚಲ ಸಂಕಲ್ಪ ಇದ್ದಾಗ ಭಕ್ತನ ಬಳಿಗೆ ದೇವರು ಬರುತ್ತಾನೆ ಎಂಬುದನ್ನು ತೋರಿಸಿಕೊಟ್ಟವರು ಕನಕದಾಸರು ಎಂದು ತಿಳಿಸಿದರು.

ಕನ್ನಡಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ| ಎಚ್‌. ವಿಶ್ವನಾಥ್‌ ಮಾತನಾಡಿ, ಕನಕದಾಸರು ಬದುಕುವ ಶೈಲಿಯನ್ನು ಕಲಿಸುವ ಜೊತೆಗೆ ಅನಿಷ್ಠ, ಅನಾಚಾರಗಳನ್ನು ಬಂಡೆದ್ದು ಪ್ರತಿಭಟಿಸಿದಛಲಗಾರ. ಜಾತ್ಯತೀತ ಮನೋಭಾವ ಬಗ್ಗೆಎಲ್ಲರಿಗೂ ಅರಿವು ಮೂಡಿಸುವ ಮೂಲಕ ಮಾದರಿಯಾಗಿದ್ದಾರೆ ಎಂದರು.

ಕಲಾ ನಿಕಾಯದ ಡೀನ್‌ ಪ್ರೊ| ಕೆ.ಬಿ. ರಂಗಪ್ಪ, ಉಪಕುಲಸಚಿವ ಮಲ್ಲಿಕಾರ್ಜುನ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ವಿಭಾಗದ ಸಂಯೋಜನಾ ಧಿಕಾರಿಕುಮಾರ ಸಿದ್ಧಮಲ್ಲಪ್ಪ ಸ್ವಾಗತಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.