ಸರ್ಕಾರಿ ಉತ್ಸವಕ್ಕಷ್ಟೇ ಕನ್ನಡ ಸೀಮಿತ


Team Udayavani, Nov 29, 2018, 5:04 PM IST

dvg-1.jpg

ದಾವಣಗೆರೆ: ಕನ್ನಡವೆಂದರೆ ಅದು ಬರೀ ಭಾಷೆಯಲ್ಲ. ಕನ್ನಡ ವಿಜ್ಞಾನ, ಕಲೆ, ತಂತ್ರಜ್ಞಾನ, ರಾಜಕೀಯ, ಆರ್ಥಿಕತೆ, ಜೀವನ ವಿಧಾನ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಬಸವರಾಜ ಸಬರದ ವಿಶ್ಲೇಷಿಸಿದ್ದಾರೆ.

ಬುಧವಾರ, ದಾವಣಗೆರೆ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ 63ನೇ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವಂತಹ ಕನ್ನಡ ಕೇವಲ ಸರ್ಕಾರಿ ಉತ್ಸವವಾಗಿ ಉಳಿದಿದೆ ಎಂದು ವಿಷಾದಿಸಿದರು.

ಕನ್ನಡ ಭಾಷೆ ಇಂದು ಜೀವಂತವಾಗಿರುವುದು ಗ್ರಾಮೀಣ ಪ್ರದೇಶಗಳಲ್ಲಿನ ಜನರ ಬಳಕೆಯಿಂದ ಮಾತ್ರ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕವಿಗಳ ಹೊರತಾಗಿಯೂ ಕನ್ನಡವನ್ನು ಬೆಳೆಸಿದವರು ಎಲೆಮರೆ ಕಾಯಿಯಾಗಿಯೇ ಉಳಿದಿದ್ದಾರೆ. ಪ್ರಶಸ್ತಿಯನ್ನೇ ಮಾನದಂಡವಾಗಿ ನೋಡುವ ಮನೋಭಾವ ಹಲವು ಉತ್ಕೃಷ್ಟ ಕನ್ನಡದ ಸಾಹಿತಿಗಳನ್ನು ಸಮಾಜದ ಮುಖ್ಯವಾಹಿನಿಯಿಂದ ದೂರವಿರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಭಾಷೆ ಪ್ರಾಚೀನ ಕನ್ನಡವೆಂಬ ಅಂಧಾಭಿಮಾನ ಇದ್ದರೆ ಅದರಿಂದ ಯಾವುದೇ ಪ್ರಯೋಜನವಿಲ್ಲ. ಕನ್ನಡವನ್ನು ಕಂಪ್ಯೂಟರೀಕರಣಗೊಳಿಸಬೇಕು. ವಿಜ್ಞಾನ- ತಂತ್ರಜ್ಞಾನದಲ್ಲಿ ಕನ್ನಡವನ್ನು ಹೆಚ್ಚಾಗಿ ಬಳಸುವಂತಾಗಬೇಕು. ಆಗ ಮಾತ್ರ ಕನ್ನಡ ಭಾಷೆಯ ಅಸ್ತಿತ್ವ ಉಳಿಯಲು ಸಾಧ್ಯ. ಅದರ ಜೊತೆಗೆ ಬೇರೆ ಭಾಷೆಯ ಶಬ್ದಗಳನ್ನು ತದ್ಭವ ರೂಪದಲ್ಲಿ ಬಳಸಬೇಕು
ಎಂದು ಅಭಿಪ್ರಾಯಪಟ್ಟರು. 

ಶುದ್ಧ ಕನ್ನಡವೆಂಬ ತತ್ವದಲ್ಲಿ ಯಾವುದೇ ಹುರುಳಿಲ್ಲ. ಅಲ್ಲಮಪ್ರಭು ಹೇಳುವಂತೆ ಪದವ ಹೇಳಬಹುದಲ್ಲದೇ ಪದಾರ್ಥವನ್ನು ಹೇಳಲಾಗದಯ್ಯ… ಎಂಬಂತೆ ಯಾವುದೇ ಪದಕ್ಕೂ ಅರ್ಥ ಇರುವುದಿಲ್ಲ. ಅದು ಸಂದರ್ಭ, ಕಾಲಕ್ಕೆ ತಕ್ಕಂತೆ  ನಿರ್ಧರಿತವಾಗುತ್ತದೆ. ಅಂತೆಯೇ ಕನ್ನಡವನ್ನು ನಾವು ಒಂದು ಭಾಷೆಗೆ ಕೇಂದ್ರೀಕರಿಸಬಾರದು ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಭಾಗದ ಭಾಷೆಯ ಸಮ್ಮಿಳನವೇ ನಿಜವಾದ ಕನ್ನಡ ಎನ್ನುವ ಸೂತ್ರದಲ್ಲಿನ ಸರಳತೆಯ ಅರ್ಥಮಾಡಿಕೊಂಡು ಭಾಷೆಯನ್ನು ಬೆಳೆಸಬೇಕು. ಬೇರೆ ಭಾಷಿಗರು ಕನ್ನಡ ಮಾತನಾಡಲು ಪ್ರಯತ್ನಿಸಿದರೆ ಅದನ್ನು ಪ್ರೋತ್ಸಾಹಿಸಬೇಕು ಎಂದು ಕಿವಿಮಾತು ಹೇಳಿದರು.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ| ದಾದಾಪೀರ್‌ ನವಿಲೇಹಾಳ್‌ ಮಾತನಾಡಿ, ಕನ್ನಡ ಎಂದರೆ ಮನೋಧರ್ಮ. ಕನ್ನಡ ಹಿಂದಿನಿಂದಲೇ ಶ್ರೀಮಂತವಾಗಿ ಬೆಳೆದಿದೆ .ನಮ್ಮ ಪರಂಪರೆಯಲ್ಲಿ ಕನ್ನಡದ ಧಾತುವನ್ನು ನಾವು ದಕ್ಕಿಸಿಕೊಳ್ಳಬೇಕು. ಕನ್ನಡ ಪ್ರತಿಯೊಬ್ಬರ ಪ್ರಜ್ಞೆಯ ಭಾಗವಾಗಬೇಕು ಎಂದು ಆಶಿಸಿದರು. 

ಕನ್ನಡ ಓದುವ ಹವ್ಯಾಸ ಮಾತ್ರವಿರದೆ ಅದನ್ನು ಕ್ರಿಯಾಶೀಲವಾಗಿ ಬಳಸುವ ಚಾಕಚಕ್ಯತೆ ಬೆಳೆಸಿಕೊಳ್ಳಬೇಕು. ಒಂದು ಚರಿತ್ರೆಯನ್ನು ವರ್ತಮಾನಕ್ಕೆ ತರದೆ ಅದರ ಭವಿಷ್ಯತ್ತನ್ನು ಸಾಧಿಸುವುದು ಅಸಾಧ್ಯ. ಈ ನಿಟ್ಟಿನಲ್ಲಿ ಪ್ರಶ್ನಾ ಮತ್ತು ಹೋರಾಟ ಮನೋಭಾವ ರೂಢಿಸಿಕೊಂಡಾಗ ಮಾತ್ರ ಭಾಷೆ ಉಳಿಯಲು ಸಾಧ್ಯ. ಇಂದಿನ ದಿನಗಳಲ್ಲಿ ಕನ್ನಡ ಪುಸ್ತಕ ಓದುವ ಹವ್ಯಾಸವೇ ಇಲ್ಲದಂತಾಗಿದೆ. ಸಮಷ್ಟಿ ಪ್ರಜ್ಞೆಯನ್ನು ಕಟ್ಟಿಕೊಟ್ಟ ಕುವೆಂಪುರವರ ಸಾಹಿತ್ಯ ಓದಬೇಕು. ಆ ರೀತಿ ಸಾಹಿತ್ಯವನ್ನು ಓದುವಿಕೆಯಲ್ಲಿ ತೊಡಗಿದಾಗ ಮಾತ್ರ ಭಾಷಾ ಬೆಳವಣಿಗೆ ಸಾಧ್ಯ ಎಂದು ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ಪಿ. ಕಣ್ಣನ್‌ ಮಾತನಾಡಿ, ಭಾಷೆಗಾಗಿ ಕರ್ನಾಟಕದಲ್ಲಿ ಆದ ತೀವ್ರ ಸ್ವರೂಪದ ಹೋರಾಟ ಬೇರೆ ಎಲ್ಲಿಯೂ ನಡೆದಿಲ್ಲ. ಅಂತಹ ಕನ್ನಡಾಭಿಮಾನ ನಮ್ಮಲ್ಲಿದೆ. ಬೇರೆ ಬೇರೆ ಪ್ರದೇಶದ ಜನರ ವಿಭಿನ್ನ ಕನ್ನಡ ಭಾಷೆಯು ಇಡೀ ಕನ್ನಡದ ವಿಶೇಷತೆಯನ್ನು ಹೆಚ್ಚಿಸಿದೆ. ಟಿ.ಪಿ. ಕೈಲಾಸಂ, ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ಮೂಲತಃ ಕನ್ನಡದವರಲ್ಲದಿದ್ದರೂ ಅವರ ಕನ್ನಡ ಪ್ರೇಮ ಕಲಿಯುವಂಥದ್ದು. ಅಂತಹ ಸೇವೆಯನ್ನು ನಾವು ಕನ್ನಡಕ್ಕಾಗಿ ಸಲ್ಲಿಸೋಣ ಎಂದು ಹೇಳಿದರು.

ದಾವಣಗೆರೆ ವಿಶ್ವವಿದ್ಯಾಲಯದ ಕಲಾನಿಕಾಯ ಮುಖ್ಯಸ್ಥ ಪ್ರೊ| ಬಿ.ಪಿ. ವೀರಭದ್ರಪ್ಪ, ಪರೀಕ್ಷಾಂಗ ಕುಲಸಚಿವ ಕೆ.ಎನ್‌. ಗಂಗಾನಾಯ್ಕ, ಹಣಕಾಸು ಅಧಿಕಾರಿ ಡಾ. ಜೆ.ಕೆ ರಾಜು ಇತರರು ಇದ್ದರು. 

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.