ಜಲಸಂರಕ್ಷಣೆ ಕಾಯಕದಲ್ಲಿ ಕರ್ನಾಟಕ ದೇಶಕ್ಕೇ ಮಾದರಿ

ಜಲ ಸಂರಕ್ಷಣೆಗೆ ನರೇಗಾ ಸಾರಥಿ

Team Udayavani, Mar 22, 2022, 11:50 AM IST

6

ದಾವಣಗೆರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯ ಸರ್ಕಾರ ದುಡಿಯುವ ಕೈಗಳಿಗೆ ಕೆಲಸ ನೀಡುವ ಜತೆಗೆ ಜಲಸಂರಕ್ಷಣೆಗೆ ವಿಶೇಷ ಗಮನಹರಿಸಿದ್ದು, ಪ್ರಸಕ್ತ ವರ್ಷ ಜಲಸಂರಕ್ಷಣೆ ಕಾಯಕದಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ.

ನರೇಗಾ ಕಾಮಗಾರಿಯ ಅನುಷ್ಠಾನದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆ ಪ್ರಸಕ್ತ 2021- 2022ನೇ ಸಾಲಿನಲ್ಲಿ ಜಲ ಸಂರಕ್ಷಣೆಗೆ ವಿಶೇಷ ಒತ್ತು ನೀಡಿದೆ. ಇದರ ಪರಿಣಾಮ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಐದು ಲಕ್ಷಕ್ಕೂ ಅಧಿಕ ಜಲ ಸಂರಕ್ಷಣೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಬೃಹತ್‌ ಪ್ರಗತಿ ಸಾಧಿಸಲಾಗಿದೆ.

ಅರಣ್ಯ ಪ್ರದೇಶದಲ್ಲಿ ಕೈಗೊಂಡ ಸಮಪಾತಳಿ ಬದುಗಳು, ರೈತರ ಜಮೀನಿನಲ್ಲಿ ಕಂದಕ ಬದುವು, ಕಲ್ಯಾಣಿಗಳ ಪುನಶ್ಚೇತನ, ಕೆರೆ ಅಭಿವೃದ್ಧಿ, ನದಿ ಪುನಶ್ಚೇತನ ಕಾಮಗಾರಿಗಳು ಜಲಸಂರಕ್ಷಣೆಯಲ್ಲಿ ಪ್ರಮುಖವಾಗಿವೆ. ಜಲಶಕ್ತಿ ಅಭಿಯಾನದಡಿ ಹಳ್ಳಿಗಳಲ್ಲಿ ಸಮಗ್ರ ಕೆರೆ ಅಭಿವೃದ್ಧಿ, ನಾಲಾ ದುರಸ್ತಿ, ಕಲ್ಯಾಣಿ ದುರಸ್ತಿ, ಗೋಕಟ್ಟೆ ನಿರ್ಮಾಣ, ಮಳೆ ಕೊಯ್ಲು, ಚೆಕ್‌ಡ್ಯಾಂ ನಿರ್ಮಾಣ, ಇಂಗುಗುಂಡಿ ನಿರ್ಮಾಣ, ಜಲಮರುಪೂರಣ, ಅರಣ್ಯೀಕರಣ, ಕೃಷಿ ಹೊಂಡ, ಜಮೀನುಗಳಲ್ಲಿ ಬದುಹೊಂಡ ನಿರ್ಮಾಣ, ನಾಲಾ ಪುನಶ್ಚೇತನ, ತೆರೆದಬಾವಿ ಪುನಶ್ಚೇತನದಂತಹ ವಿವಿಧ ಕಾಮಗಾರಿಗಳನ್ನು ಮಾಡಲಾಗಿದೆ. ಈ ಕಾಮಗಾರಿಗಳ ಅನುಷ್ಠಾನದ ಪರಿಣಾಮ ಹಿಂಗಾರಿನಲ್ಲಿ ಸುರಿದ ಮಳೆಯಿಂದ ಅಂತರ್ಜಲಮಟ್ಟ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.

692 ಕಲ್ಯಾಣಿಗಳ ಜೀರ್ಣೋದ್ಧಾರ: ಬಹು ವರ್ಷಗಳ ಹಿಂದೆ ಗ್ರಾಮಗಳಲ್ಲಿ ಜನರಿಗೆ ದೈನಂದಿನ ಬಳಕೆಗೆ ಅನುಕೂಲವಾಗಲು ದೊಡ್ಡ ದೊಡ್ಡ ಕಲ್ಯಾಣಿಗಳನ್ನು ನಿರ್ಮಿಸಲಾಗಿತ್ತು. ಹಲವು ಕಲ್ಯಾಣಿ ಗಳಿಗೆ ದೈವಿಕ ಭಾವನೆ ಹಾಗೂ ಪುರಾಣ ಇತಿಹಾಸ ಕೂಡ ಇದೆ. ಕ್ರಮೇಣ ಜನರು ಕಲ್ಯಾಣಿಗಳ ಬದಲಿಗೆ ಕೊಳವೆ ಬಾವಿಗಳನ್ನು ಹೆಚ್ಚಾಗಿ ಅವ ಲಂಬಿಸಿದ್ದರಿಂದ ಕಲ್ಯಾಣಿಗಳಲ್ಲಿ ನೀರು ಬತ್ತಿ ಹೋಗಿದ್ದವು. ಜನರು ಕೂಡ ಕಲ್ಯಾಣಿಯನ್ನು ಅವಲಂಬಿಸದೇ ಪರ್ಯಾಯ ಕೊಳವೆ ಬಾವಿಗಳನ್ನು ಅವಲಂಬಿಸಿದ್ದರಿಂದ ಕಲ್ಯಾಣಿಗಳು ಬಳಕೆಗೆ ಬಾರದೆ ಅವಸಾನದಂಚಿಗೆ ತಲುಪಿದ್ದವು.  ಇಂತಹ ಕಲ್ಯಾಣಿಗಳನ್ನು ಗುರುತಿಸಿ ರಾಜ್ಯದಲ್ಲಿ ಸುಮಾರು 692 ಕಲ್ಯಾಣಿಗಳನ್ನು ಪ್ರಸಕ್ತ ಸಾಲಿನಲ್ಲಿ ಜೀರ್ಣೋದ್ಧಾರ ಮಾಡಿರುವುದು ಇನ್ನೊಂದು ವಿಶೇಷ.

ಕ್ಯಾಚ್‌ ದಿ ರೈನ್‌’ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆಯಂತೆ ಜಲಶಕ್ತಿ ಅಭಿಯಾನವನ್ನು ದೇಶದಾದ್ಯಂತ ಪ್ರಾರಂಭಿಸಲಾಗಿದ್ದು, ರಾಜ್ಯದಲ್ಲಿಯೂ ಜಲಶಕ್ತಿ ಅಭಿಯಾನದ ಮೂಲಕ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯ ಜಲಮೂಲಗಳನ್ನು ಗುರುತಿಸಿ ಪುನಶ್ಚೇತನ ಗೊಳಿಸುವ ಕಾರ್ಯ ನಡೆದಿದೆ. ರಾಜ್ಯದಲ್ಲಿ ಒಟ್ಟು 5.92 ಲಕ್ಷ ಜಲಶಕ್ತಿ ಕಾಮಗಾರಿಗಳನ್ನು ಕೈಗೊಂಡಿದ್ದು, ಬಹುತೇಕ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.

ಒಟ್ಟಾರೆ ನರೇಗಾ ಯೋಜನೆಯ ಮೂಲಕ ಸ್ವತಃ ರಾಜ್ಯ ಸರ್ಕಾರ ಹಾಗೂ ಕೂಲಿಕಾರ್ಮಿಕರು ಜಲ ಸಂರಕ್ಷಣೆಯ ವಿಶೇಷ ಕಾಯಕದಲ್ಲಿ ಗುರುತರ ಸಾಧನೆ ಮಾಡಿರುವುದು ಸ್ತುತ್ಯಾರ್ಹ.

 

ಕಾರ್ಮಿಕರಿಂದ ಜಲ ಕೈಂಕರ್ಯ

ನರೇಗಾ ಯೋಜನೆಯಡಿ ರಾಜ್ಯದಲ್ಲಿ ನಡೆದ ಜಲ ಕೈಂಕರ್ಯದಲ್ಲಿ ಕರ್ನಾಟಕ ಇಡೀ ದೇಶಕ್ಕೇ ಮಾದರಿಯಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಿದ ಹಿಂದಿನ ಬೃಹತ್‌ ಶಕ್ತಿಯೇ ಕೂಲಿ ಕಾರ್ಮಿಕರ ಶಕ್ತಿಯಾಗಿದೆ.  ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಕೆಲಸ ಪಡೆದುಕೊಳ್ಳುವ ಜತೆಗೆ ಜಲಸಂರಕ್ಷಣೆ ಕಾಮಗಾರಿಯನ್ನು ಶ್ರದ್ಧೆಯಿಂದ ನಿರ್ವಹಿಸುವ ಮೂಲಕ ಗ್ರಾಮೀಣ ಕೂಲಿಕಾರ್ಮಿಕರು ಸಹ ಜಲ ರಕ್ಷಣೆಯ ಕಾಯಕದಲ್ಲಿ ದೊಡ್ಡ ಕೊಡುಗೆ ನೀಡಿದ್ದಾರೆ.

 

ನರೇಗಾ ಯೋಜನೆಯ ಜಲಶಕ್ತಿ ಅಭಿಯಾನದಡಿ ಜಲಸಂರಕ್ಷಣೆಗೆ ವಿಶೇಷ ಒತ್ತು ನೀಡಲಾಗಿದೆ. ಜಲಸಂರಕ್ಷಣೆ ಕಾಮಗಾರಿಗಳ ಅನುಷ್ಠಾನದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ. ತನ್ಮೂಲಕ ಜಲ ಸಂರಕ್ಷಣೆಯಲ್ಲಿ ನರೇಗಾ ಕೂಡ ವಿಶೇಷ ಕೊಡುಗೆ ನೀಡಿದಂತಾಗಿದೆ.

  • ಬಿ.ಆನಂದ್‌, ಉಪಕಾರ್ಯದರ್ಶಿ, ಜಿಪಂ, ದಾವಣಗೆರೆ

 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.