ವ್ಯಕ್ತಿಯಲ್ಲ, ಪಕ್ಷ ನಿಷ್ಠೆ ಮುಖ್ಯ: ಭೀಮಪ್ಪ 


Team Udayavani, May 2, 2018, 4:48 PM IST

2-May-18.jpg

ಹರಪನಹಳ್ಳಿ: ಕಳೆದ ಮೂರು ದಶಕಗಳಿಂದ ಕಮ್ಯುನಿಸ್ಟ್‌ ಹೋರಾಟ ನಡೆಸುತ್ತಾ ಬಂದಿದ್ದ, ಕೆಪಿಸಿಸಿ ಸದಸ್ಯರಾಗಿದ್ದ ಕೋಡಿಹಳ್ಳಿ ಭೀಮಪ್ಪ ಈಚೆಗೆ ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಮಂಗಳವಾರ ಮಾಜಿ ಸಚಿವ
ಜಿ.ಕರುಣಾಕರರ ರೆಡ್ಡಿ ಅವರು ಕೋಡಿಹಳ್ಳಿ ಭೀಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿರುವುದು ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕಳೆದ ಒಂದು ದಶಕ ಕಾಲ ಕ್ಷೇತ್ರದಲ್ಲಿ ಎಂ.ಪಿ. ರವೀಂದ್ರ ಅವರ ಜೊತೆಗೂಡಿ ಕರುಣಾಕರ ರೆಡ್ಡಿ ವಿರುದ್ಧ ಸಂಘಟನೆ ಮಾಡಿದ್ದ ಕೋಡಿಹಳ್ಳಿ ಭೀಮಪ್ಪ ಅವರ ನಿವಾಸಕ್ಕೆ ಕರುಣಾಕರ ರೆಡ್ಡಿ ಭೇಟಿ ನೀಡಿರುವುದು ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರ ಕುತೂಹಲಕ್ಕೆ ಕಾರಣವಾಗಿದೆ.

ಇದಕ್ಕೂ ಮೊದಲು ಪಟ್ಟಣದ ತಮ್ಮ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಭೀಮಪ್ಪ ಅವರು, ಕ್ಷೇತ್ರದಲ್ಲಿ ನನಗೆ ವ್ಯಕ್ತಿ ಮುಖ್ಯವಲ್ಲ. ಪಕ್ಷ ನಿಷ್ಠೆ ಹೊಂದಿದ್ದೇನೆ. ಹಾಗಾಗಿ ನಾನು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ. ನಾನು ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದೆ. ಪಕ್ಷ ಸಂಘಟನೆ ಮಾಡಿದ್ದ ನನ್ನನ್ನು ನಿರ್ಲಕ್ಷ್ಯ ಮಾಡಿದರು. ಗಣಿ ಲೂಟಿಕೊರರ ವಿರುದ್ಧ ಹೋರಾಟ ಮಾಡಿದ ಕಾಂಗ್ರೆಸ್‌ ಪಕ್ಷದ ಮುಖಂಡರು ಆನಂದಸಿಂಗ್‌, ನಾಗೇಂದ್ರರನ್ನು ಪಕ್ಷಕ್ಕೆ ಸೇರಿಸಿಕೊಂಡು ನೈತಿಕತೆ ಕಳೆದುಕೊಂಡರು. ಹಾಗಾಗಿ ಕಾಂಗ್ರೆಸ್‌ ತೊರೆದು ಸಂಸದ ಶ್ರೀರಾಮುಲು ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ತಿಳಿಸಿದರು.

ಸಚಿವ ಸಂತೋಷ ಲಾಡ್‌, ಅನಿಲ್‌ ಲಾಡ್‌ ಅವರು ಕೂಡ ಅಕ್ರಮ ಗಣಿಗಾರಿಕೆ ಪಾಲುದಾರರು. ಅಂತಹವರ ಜೊತೆಗೆ ಪಕ್ಷದಲ್ಲಿರಲು ಮುಜುಗರಗೊಂಡು ಪಕ್ಷ ತೊರೆಯಬೇಕಾಯಿತು. ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರೂ ಯಾರೂ ಸಂಪರ್ಕಿಸದೇ ಸಂಘಟನೆ ಹಿನ್ನೆಲೆಯ ನನ್ನಂತಹ ಹೋರಾಟಗಾರನನ್ನು ಕಾಂಗ್ರೆಸ್‌ ಪಕ್ಷ ಕಳೆದುಕೊಂಡಿದೆ. ಶ್ರೀರಾಮುಲು ಸ್ಥಾನಮಾನ, ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದಾರೆ. ಹರಪನಹಳ್ಳಿ ಕ್ಷೇತ್ರದಲ್ಲಿ ನನ್ನ ಬೆಂಬಗಲಿಗರು ಸಹ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು.

ಕೂಡ್ಲಿಗಿ, ಬಾದಾಮಿ, ಮೊಳಕಾಲ್ಮೂರು, ಹಗರಿ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದೇನೆ. ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನ 7 ಗ್ರಾಪಂ ವ್ಯಾಪ್ತಿಯ ಉಸ್ತುವಾರಿ ನನಗೆ ಕೊಟ್ಟಿದ್ದು, ಅಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಕ್ಷೇತ್ರದಲ್ಲಿ ಹಿಂದೆ ಕಾಂಗ್ರೆಸ್‌ನದಲ್ಲಿದಾಗ ಬಹಳ ಜನರು ಸಹಾಯ ಮಾಡಿದ್ದಾರೆ, ಅವರ ಪ್ರೀತಿಗೆ ಅಭಾರಿಯಾಗಿದ್ದೇನೆ. ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿ ದೂರವಾಣಿ ಮೂಲಕ ಸಂಪರ್ಕ ಮಾಡಿದ್ದಾರೆ. ಅಧಿಕೃತವಾಗಿ ಆಹ್ವಾನಿಸಿದರೆ ಪ್ರಚಾರಕ್ಕೆ ತೆರಳುವುದಾಗಿ ತಿಳಿಸಿದರು. 

ಕೋಡಿಹಳ್ಳಿ ಭೀಮಪ್ಪ ಅವರ ನಿವಾಸಕ್ಕೆ ಮಾಜಿ ಸಚಿವ ಜಿ. ಕರುಣಾಕರರರೆಡ್ಡಿ ಭೇಟಿ ನೀಡಿದ ಸಂದರ್ಭದಲ್ಲಿ ಮುಖಂಡರಾದ ಎಂ.ಪಿ. ನಾಯ್ಕ, ಸಣ್ಣಹಾಲಪ್ಪ, ಲೋಕೇಶ್‌, ಅಲ್ಮರಸೀಕೆರೆ ರಾಜಪ್ಪ, ಕಣವಿಹಳ್ಳಿ ಚಂದ್ರಶೇಖರ್‌, ಇಮ್ರಾನ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.