ಕ್ಷತ್ರಿಯ ಸಮಾಜ ಸಂಘಟಿತವಾಗಲಿ


Team Udayavani, Feb 18, 2019, 8:11 AM IST

dvg-4.jpg

ಹೊನ್ನಾಳಿ: ಕ್ಷತ್ರಿಯ ಸಮಾಜ ಬಾಂಧವರು ತಾವು ಅಲ್ಪಸಂಖ್ಯಾತರೆಂದು ಭಾವಿಸಬಾರದು. ಕ್ಷತ್ರಿಯರು ಶಕ್ತಿವಂತರು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ತಾಲೂಕಿನ ಸೂರಟೂರು ಗ್ರಾಮದಲ್ಲಿ ಸೂರಟೂರು ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕ್ಷತ್ರಿಯ ಸಮುದಾಯ ಭವನದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯಾ ಪೂರ್ವ ಹಾಗೂ ನಂತರ ಕ್ಷತ್ರಿಯರ ಸಾಧನೆ ಅಪಾರ ಹಾಗೂ ಅದ್ಭುತ ಎಂದ ಅವರು, ಒಗ್ಗಟ್ಟು ಪ್ರದರ್ಶಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು. ಹೊನ್ನಾಳಿ ಪಟ್ಟಣದಲ್ಲಿ ಕ್ಷತ್ರಿಯ ಸಮಾಜದ ವತಿಯಿಂದ ಸಮುದಾಯ ಭವನಕ್ಕೆ ಬೇಡಿಕೆ ಬಂದಿದ್ದು, ಪಟ್ಟಣದ ಸುತ್ತಮುತ್ತ ಯಾವುದೇ ನಿವೇಶನವಿಲ್ಲ. ಸಮಾಜದವರು ನಿವೇಶನದ ವ್ಯವಸ್ಥೆ ಮಾಡಿದರೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದು ಹೇಳಿದರು.

ಕರ್ನಾಟಕ ಪ್ರದೇಶ ಹಿಂದೂ ಕ್ಷತ್ರಿಯ ಸಂಘದ ರಾಜ್ಯಾಧ್ಯಕ್ಷ ರಾಮನಗೌಡ ಬಿ.ಪಾಟೀಲ್‌ ಮಾತನಾಡಿ, ಕ್ಷತ್ರಿಯರಾದ ನಾವು ಶ್ರೀರಾಮನ ಆದರ್ಶಗಳನ್ನು ಪಾಲಿಸುವುದು ಮುಖ್ಯವಾಗಿದೆ. ಶ್ರೀರಾಮ ವಿಶ್ವಕ್ಕೆ ಆದರ್ಶ ಎಂದು ಹೇಳಿದರು. 

ಕ್ಷತ್ರಿಯ ಸಮಾಜದ ಸಂಘಟನೆಗಾಗಿ ರಾಜ್ಯ ಮಟ್ಟದ ಸಂಘ ರಚಿಸಲಾಗಿದೆ. ಸಮಾಜ ಬಾಂಧವರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಬಾಗಲಕೋಟೆ ಜಿಲ್ಲಾಧ್ಯಕ್ಷ ಶಿವಾನಂದ ಪೂಜಾರ್‌ ಮಾತನಾಡಿ, ರಾಜ್ಯದಲ್ಲಿ ಎಲ್ಲಾ ಸಮಾಜದವರು ಸ್ವಾಮಿಗಳನ್ನು ನೇಮಕ ಮಾಡಿಕೊಂಡು ಸಮಾಜ ಸಂಘಟಿಸುತ್ತಿದ್ದಾರೆ. ನಮ್ಮ ಸಮಾಜಕ್ಕೆ ಸ್ವಾಮಿಗಳಿಲ್ಲ. ನಾವೂ ಸಂಘಟಿತರಾಗುವ ಬಗ್ಗೆ ಚಿಂತಿಸಬೇಕು ಎಂದು ಹೇಳಿದರು. ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ಕ್ಷತ್ರಿಯ ಸಮಾಜ ಚಿಕ್ಕ ಹಾಗೂ ಚೊಕ್ಕ ಸಮಾಜವಾಗಿದೆ. 

ಇನ್ನೊಬ್ಬರಿಗೆ ತೊಂದರೆ ಕೊಡದಂತೆ ಬಾಳುವ ಸಮಾಜ ಕ್ಷತ್ರಿಯ ಸಮಾಜ ಎಂದು ಹೇಳಿದರು. ಸೊರಟೂರು ಕ್ಷತ್ರಿಯ ಸಮಾಜ ಸೇವಾ ಸಂಘದ ಸಹ ಕಾರ್ಯದರ್ಶಿ ಪಿ.ಎಚ್‌.ಹನುಮಂತಯ್ಯ ಪ್ರಾಸ್ತಾವಿಕ ಮಾತನಾಡಿದರು. ಗ್ರಾ.ಪಂ ಅಧ್ಯಕ್ಷ ಡಿ.ಹನುಮಂತಗೌಡ, ಕ್ಷತ್ರಿಯ ಸಮಾಜದ
ರಾಜ್ಯ ಕಾರ್ಯಾಧ್ಯಕ್ಷ ಶಿವನಗೌಡಪಾಟೀಲ್‌ ಬೆಳ್ಳಟ್ಟಿ ಮಾತನಾಡಿದರು.

ಸೊರಟೂರು ಕ್ಷತ್ರಿಯ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಪರಸಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ ಸದಸ್ಯೆ ಉಮಾ ಎಂ.ಪಿ.ರಮೇಶ್‌, ಕ್ಷತ್ರಿಯ ಸಮಾಜದ ಗೌರವಾಧ್ಯಕ್ಷ ಎಚ್‌. ಚಂದ್ರಪ್ಪ, ಗ್ರಾ.ಪಂ ಸದಸ್ಯೆ ರೂಪ, ಸಮಾಜದ ಗಣ್ಯರಾದ ಸುಭಾಷ ಹಲಗತ್ತಿ, ಆಯನೂರು ರವಿಕುಮಾರ್‌, ಕೆ.ರಾಮಪ್ಪ, ಗೋಕಾಕ್‌ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಪಿ.ಶಾಂತ ಉಪಸ್ಥಿತರಿದ್ದರು. ಶಿಕ್ಷಕ ಗಣೇಶ್‌ ಸ್ವಾಗತಿಸಿ, ನಿರೂಪಿಸಿದರು. ಇದಕ್ಕೂ ಮುನ್ನ ಸಿದ್ಧಗಂಗಾ ಶ್ರೀಗಳು ಹಾಗೂ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.