ದೇಶಿ ಕ್ರೀಡೆಗೆ ಪ್ರೋತ್ಸಾಹದ ಕೊರತೆ
Team Udayavani, Sep 15, 2017, 11:15 AM IST
ದಾವಣಗೆರೆ: ವಿದೇಶಿ ಆಟಗಳ ಅಬ್ಬರದ ನಡುವೆ ಕಬಡ್ಡಿಯಂತಹ ಅನೇಕ ದೇಶಿ ಕ್ರೀಡೆಗಳು ಕಣ್ಮರೆಯಾಗುತ್ತಿವೆ ಎಂದು ಮೇಯರ್ ಅನಿತಾಬಾಯಿ ವಿಷಾದಿಸಿದ್ದಾರೆ.
ಗುರುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ನಡೆದ ದಾವಣಗೆರೆ
ವಿಶ್ವವಿದ್ಯಾಲಯ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿ ಮತ್ತು ವಿಶ್ವವಿದ್ಯಾಲಯ ತಂಡದ ಆಯ್ಕೆ ಉದ್ಘಾಟಿಸಿ ಮಾತನಾಡಿದ ಅವರು, ಈಗ ಕ್ರಿಕೆಟ್, ಟೆನ್ನಿಸ್, ಬ್ಯಾಡ್ಮಿಂಟನ್ ಇತರೆ ಆಧುನಿಕ ಕ್ರೀಡೆಗಳಿಗೆ ಅತಿ ಹೆಚ್ಚು ಪ್ರೋತ್ಸಾಹ
ದೊರೆಯುತ್ತಿದೆ. ದೇಶಿ ಕ್ರೀಡೆಗಳು ಪ್ರೋತ್ಸಾಹದ ಕೊರತೆಯಿಂದ ನಿಧಾನವಾಗಿ ಕಾಣೆಯಾಗುತ್ತಿವೆ ಎಂದರು.
ಈಚೆಗೆ ಕಬಡ್ಡಿಗೂ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಆ ಆಟದತ್ತ ಜನರು ಮತ್ತೆ ಆಕರ್ಷಿತರಾಗುತ್ತಿದ್ದಾರೆ. ಮಹಿಳೆಯರು ಭಾಗವಹಿಸುತ್ತಿರುವುದು ಸಂತೋಷದ ವಿಚಾರ. ವಿದ್ಯಾರ್ಥಿಗಳು ಯಾವುದೇ ಕ್ರೀಡೆಯನ್ನು ಅಲಕ್ಷ್ಯ ಮಾಡಬಾರದು. ಪಠ್ಯದಷ್ಟೇ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗೆ ಸಮಾನ ಗಮನ ನೀಡಬೇಕು. ಸೋಲು-ಗೆಲುವು ಸಾಮಾನ್ಯ. ಭಾಗವಹಿಸುವಿಕೆಯೇ ಮುಖ್ಯ ಎಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್ ಎಸ್. ಗುಳೇದ್ ಮಾತನಾಡಿ, ಪ್ರೊ- ಕಬಡ್ಡಿ ಪಂದ್ಯಾವಳಿ ಪ್ರಾರಂಭದ ನಂತರ ದೇಶಿ ಕ್ರೀಡೆ ಕಬಡ್ಡಿಗೆ ಹೆಚ್ಚು ಪ್ರೋತ್ಸಾಹ, ಉತ್ತೇಜನ ದೊರೆಯುತ್ತಿದೆ. ದೇಶಿಯ ಕ್ರೀಡೆಗಳಿಗೆ ಇನ್ನೂ ಹೆಚ್ಚಿನ ಮಾನ್ಯತೆ ದೊರೆಯುವಂತಾಗಲಿ. ಒಲಂಪಿಕ್ಸ್ನಲ್ಲಿ ಭಾರತದ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲಿ ಎಂದು
ಆಶಿಸಿದರು. ರಾಜ್ಯ ವಿಶ್ವವಿದ್ಯಾಲಯ ಮತ್ತು ಕಾಲೇಜು ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ
ಪ್ರೊ| ಸಿ.ಎಚ್. ಮುರಿಗೇಂದ್ರಪ್ಪ ಮಾತನಾಡಿ, ಹಿಂದೆ ಕ್ರೀಡೆಗಳಿಗೆ ಹೆಚ್ಚು ಉತ್ತೇಜನ, ಪ್ರೋತ್ಸಾಹದಾಯಕ
ವಾತಾವರಣ ಇಲ್ಲದ ಕಾರಣಕ್ಕೆ ಕ್ರೀಡೆಯಲ್ಲಿ ಹಿಂದುಯುಳಿಲಾಯಿತು. ಈಗಲೂ ಕೆಲ ಆಟಗಳಿಗೆ ದೊರೆಯುತ್ತಿರುವ ಪ್ರೋತ್ಸಾಹ ಇತರೆ ಕ್ರೀಡೆಗಳಿಗೆ ದೊರೆಯುತ್ತಿಲ್ಲ. ಕಬಡ್ಡಿ ಎಲ್ಲ ಆಟಗಳಿಗೆ ಸಮಾನ ಪ್ರೋತ್ಸಾಹ
ದೊರೆಯಬೇಕಿದೆ ಎಂದರು.
ಕಾಲೇಜು ಪ್ರಾಚಾರ್ಯ ಡಾ| ಮಲ್ಲಿಕಾರ್ಜುನ ಕಲಮರಹಳ್ಳಿ, ದಾವಣಗೆರೆ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಎಂ.ಎಸ್. ರಾಜಕುಮಾರ್, ಡಾ| ಕೆ.ಎಂ. ಯೋಗೀಶ್ ,ಡಾ|ಕೆ.ಎಚ್.ಜಿ. ಶಾಂತಕುಮಾರಿ, ಎಂ.ಕೆ.ದಾನಪ್ಪ, ಎಸ್.ಆರ್. ಭಜಂತ್ರಿ, ಭೀಮಣ್ಣ ಸುಣಗಾರ್, ಶಶಿಕಲಾ, ಡಾ| ಪ್ರಕಾಶ್ ಹಲಗೇರಿ, ತಿಪ್ಪಾರೆಡ್ಡಿ, ಡಾ| ಟಿ. ಮಂಜಣ್ಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
Gayatri Siddeshwar: “ರಾಹುಲ್ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’
MUST WATCH
ಹೊಸ ಸೇರ್ಪಡೆ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
ಇಸ್ರೇಲ್ ದೇಶದಲ್ಲಿ ಅಲ್ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್