ರೈತರಿಲ್ಲದೇ ಬಿಕೋ ಎನ್ನುತ್ತಿದೆ ರಾಗಿ ಖರೀದಿ ಕೇಂದ್ರ


Team Udayavani, Jan 22, 2020, 12:22 PM IST

dg-tdy-2

ಜಗಳೂರು: ಪಹಣಿಯಲ್ಲಿನ ಕೆಲವು ನ್ಯೂನ್ಯತೆಗಳಿಂದಾಗಿ ರಾಗಿ ಖರೀದಿ ಕೇಂದ್ರದ ಹತ್ತಿರ ರೈತರು ಸುಳಿಯದಂತಾಗಿದ್ದು, ರಾಗಿ ಖರೀದಿಗೆ ಇರುವ ನಿಯಮಗಳನ್ನು ಸಡಿಲಗೊಳಿಸಿದರೆ ಮಧ್ಯವರ್ತಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಸರಕಾರ ರಾಗಿ ಖರೀದಿ ಕೇಂದ್ರ ಪ್ರಾರಂಭಿಸಿದ್ದು, 3150 ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಆದರೆ 20 ದಿನ ಕಳೆದರೂ ಕೇಂದ್ರದಲ್ಲಿ ಕೇವಲ 8 ಜನ ಮಾತ್ರ ಹೆಸರು ನೋಂದಾಯಿಸಿದ್ದಾರೆ. ತಾಲೂಕಿನಾದ್ಯಂತ 13 ಸಾವಿರಕ್ಕೂ ಅಧಿಕ ಎಕರೆ ರಾಗಿ ಬಿತ್ತನೆ ಪ್ರದೇಶವಿದ್ದು, ಸುಮಾರು 1200 ರಿಂದ 1400 ರೈತರು ರಾಗಿ ಬೆಳೆದಿದ್ದಾರೆ. ಮುಂಗಾರು ಹಂಗಾಮಿನಲ್ಲಿ ದಾಖಲೆ ನೀಡಿ ಮೆಕ್ಕೆಜೋಳ, ಕಡಲೆ ಮುಂತಾದ ಬೀಜಗಳನ್ನು ಖರೀದಿಸಿದ ರೈತರು ರಾಗಿ ಬಿತ್ತನೆ ಮಾಡಿದ್ದಾರೆ. ಪಹಣಿಯಲ್ಲಿ ರಾಗಿ ಎಂದು ನಮೂದಾಗಿದ್ದರೆ ಮಾತ್ರ ಖರೀದಿ ಕೇಂದ್ರದ ಕಂಪ್ಯೂಟರ್‌ನಲ್ಲಿ ಯಶಸ್ವಿಯಾಗಿ ಹೆಸರು ನೋಂದಾವಣೆಯಾಗುತ್ತದೆ. ಆದರೆ ಸುಮಾರು ರೈತರ ಪಹಣೆಯಲ್ಲಿ ಮೆಕ್ಕೆಜೋಳ. ಶೇಂಗಾ, ಸಜ್ಜೆ, ಜೋಳ ಎಂದು ನಮೂದಾಗಿರುವುದರಿಂದ ಖರೀದಿ ಕೇಂದ್ರದ ತಂತ್ರಾಂಶದಲ್ಲಿ ಹೆಸರು ನೋಂದಾವಣೆಯಾಗದೇ ರೈತರು ರಾಗಿಮಾರಾಟ ಮಾಡದಂತಾಗಿದೆ.

ಹಂಗಾಮುವಾರು ಬೆಳೆ ಸಮೀಕ್ಷೆ ಕಾರ್ಯವನ್ನು ಕೃಷಿ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ನಡೆಸಿದ್ದು, ಇವರು ಕ್ಷೇತ್ರಕ್ಕೆ ತೆರಳಿ ಸಮರ್ಪಕವಾಗಿ ಸಮೀಕ್ಷೆ ನಡೆಸದೆ ಎಲ್ಲೋ ಕುಳಿತು ಮೊಬೈಲ್‌ನಲ್ಲಿ ಬೆಳೆ ನಮೂದಿಸಿದ್ದಾರೆ ಎಂಬ ದೂರುಗಳು ಕೂಡ ರೈತರಿಂದ ಕೇಳಿ ಬರುತ್ತಿವೆ.

ಮಧ್ಯವರ್ತಿಗಳಿಂದ ಲಾಭದ ಹುನ್ನಾರ?: ಇದನ್ನೆ ಬಂಡವಾಳವಾಗಿಸಿಕೊಂಡಿರುವ ಕೆಲವು ಮಧ್ಯವರ್ತಿಗಳು ಖರೀದಿಗೆ ಇರುವ ನಿಯಮಗಳನ್ನು ಸಡಿಲಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ ಮೇಲೆ ಕೆಲವು ಸಂಘಟನೆಗಳ ಮೂಲಕ ಒತ್ತಡ ಹಾಕುವಂತಹ ತಂತ್ರಗಳನ್ನು ಮಾಡುತ್ತಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಸರಕಾರ ಇರುವ ನಿಯಮವನ್ನು ಸಡಿಲಗೊಳಿಸಿದರೆ ಲಾಭ ರೈತರಿಗೆ ದೊರೆಯದೆ ಮಧ್ಯವರ್ತಿಗಳ ಪಾಲಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಏಕೆಂದರೆ ತಾಲೂಕಿನದ್ಯಾಂತ ರಾಗಿ ಬೆಳೆ ಉತ್ತಮ ಇಳುವರಿ ಬಂದಿದ್ದು, ದಲ್ಲಾಳಿಗಳು ಈಗಾಗಲೇ 1800 ರಿಂದ 2000 ರೂ. ನಂತೆ ರಾಗಿ ಖರೀದಿಸಿ ಗೊದಾಮುಗಳಲ್ಲಿ ನೂರಾರು ಚೀಲ ಶೇಖರಿಸಿದ್ದಾರೆ.

ಸರಕಾರ ನಿಯಮಗಳನ್ನು ಸಡಿಲಗೊಳಿಸಿದರೆ ಮಧ್ಯವರ್ತಿಗಳು ಖರೀದಿ ಕೇಂದ್ರದಲ್ಲಿ ತಮ್ಮ ದಾಸ್ತಾನು ಮಾರಿಕೊಂಡು ಲಕ್ಷಗಟ್ಟಲೆ ಆದಾಯ ಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ರೈತರು ರಾಗಿ ಬೆಳೆದಿದ್ದು ಪಹಣಿಯಲ್ಲಿ ಇತರೆ ಬೆಳೆ ಎಂದು ನಮೂದಾಗಿದ್ದರೆ ಆಕ್ಷೇಪಣೆ ಸಲ್ಲಿಸಲು ಸರಕಾರ ಅವಕಾಶ ನೀಡಿದ್ದು, ಆಕ್ಷೇಪಣೆ ಸಲ್ಲಿಸಿದ ರೈತನ ಜಮೀನುಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರೆ ನಿಜಾಂಶ ತಿಳಿಯಲಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.