ಬಿಸಿಯೂಟಕ್ಕೆ ಅಕ್ಕಿ ಇದೆ… ಬೇಳೆ ಇಲ್ಲ…ಟೆಂಡರ್‌ ವಿಳಂಬವಾಗಿರುವುದರಿಂದ ಸರಬರಾಜು ಆಗಿಲ್ಲ

ಶಾಲಾ ಮಕ್ಕಳ ಮಧ್ಯಾಹ್ನದ ಊಟಕ್ಕೆ ತೊಗರಿಬೇಳೆ ಕೊರತೆ

Team Udayavani, Dec 7, 2022, 7:17 AM IST

ಬಿಸಿಯೂಟಕ್ಕೆ ಅಕ್ಕಿ ಇದೆ… ಬೇಳೆ ಇಲ್ಲ…ಟೆಂಡರ್‌ ವಿಳಂಬವಾಗಿರುವುದರಿಂದ ಸರಬರಾಜು ಆಗಿಲ್ಲ

ದಾವಣಗೆರೆ: “ಪಿಎಂ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆಯಡಿ ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ತೊಗರಿಬೇಳೆಯ ಕೊರತೆ ಎದುರಾಗಿದೆ. ಹಲವು ಶಾಲೆಗಳಲ್ಲಿ ತೊಗರಿಬೇಳೆ ಇಲ್ಲದೆ ಅಡುಗೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅನೇಕ ಶಾಲೆಗಳಲ್ಲಿ ನವೆಂಬರ್‌ನಲ್ಲಿಯೇ ತೊಗರಿ ಬೇಳೆ ದಾಸ್ತಾನು ಖಾಲಿಯಾಗಿದೆ. ಕೆಲವು ಶಾಲೆಗಳಲ್ಲಿ ಡಿಸೆಂಬರ್‌ ಮೊದಲ ವಾರಕ್ಕೆ ಆಗುವಷ್ಟು ದಾಸ್ತಾನು ಇದ್ದು, ತೀರಾ ಕಡಿಮೆ ಪ್ರಮಾಣದಲ್ಲಿ ಬೇಳೆ ಬಳಸಲಾಗುತ್ತಿದೆ.

ಟೆಂಡರ್‌ ವಿಳಂಬ
ಕೋವಿಡ್‌ ಬರುವ ಮೊದಲು ಪ್ರತೀ ತಿಂಗಳು ರಾಜ್ಯ ಮಟ್ಟದಲ್ಲಿ ಟೆಂಡರ್‌ ಕರೆದು ತೊಗರಿಬೇಳೆ ಪೂರೈಸಲಾಗುತ್ತಿತ್ತು. ಕೋವಿಡ್‌ ಬಳಿಕ ಮೂರು ತಿಂಗಳಿಗೊಮ್ಮೆ ತೊಗರಿಬೇಳೆಯನ್ನು ಒಮ್ಮೆಲೆ ಸರಬರಾಜು ಮಾಡಲಾಗುತ್ತಿದೆ. ಕಳೆದ ಸೆಪ್ಟಂಬರ್‌ ಮೊದಲ ವಾರದಲ್ಲಿ ಶಾಲೆಗಳಿಗೆ ತೊಗರಿಬೇಳೆ ಸರಬರಾಜು ಆಗಿತ್ತು. ಬಳಿಕ ನವೆಂಬರ್‌ ವೇಳೆಗೆ ಪೂರೈಕೆ ಆಗಬೇಕಿತ್ತು. ಆದರೆ ರಾಜ್ಯ ಮಟ್ಟದಲ್ಲಿ ಟೆಂಡರ್‌ ವಿಳಂಬವಾದದ್ದರಿಂದ ಡಿಸೆಂಬರ್‌ ಬಂದರೂ ಸರಬರಾಜು ಆಗಿಲ್ಲ. ಈಗ 3 ತಿಂಗಳಿಗೊಮ್ಮೆ ಬೇಳೆ ಪೂರೈಸುತ್ತಿರುವುದರಿಂದ ಗುಣಮಟ್ಟವೂ ಕೆಡುತ್ತಿದೆ. ಇದರಿಂದ ಕಳಪೆ ಬೇಳೆ ನೀಡುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ.

ಶಾಲಾ ಹಂತದಲ್ಲೇ ಖರೀದಿಗೆ ಸೂಚನೆ
ರಾಜ್ಯಾದ್ಯಂತ ಶಾಲೆಗಳಲ್ಲಿ ತೊಗರಿಬೇಳೆ ಕೊರತೆ ಉಂಟಾಗಿರುವುದನ್ನು ಮನಗಂಡ ಪಿಎಂ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯ ನಿರ್ದೇಶಕರು, ತೊಗರಿಬೇಳೆ ಕೊರತೆಯಾದಲ್ಲಿ ಶಾಲಾ ಹಂತದಲ್ಲಿ ಉಳಿಕೆ ಇರುವ ಅಕ್ಷರ ದಾಸೋಹ ಅನುದಾನ ಬಳಸಿ, ಬೇಳೆ ಪೂರೈಕೆ ಆಗುವವರೆಗೆ ಸ್ಥಳೀಯವಾಗಿ ಗುಣಮಟ್ಟದ ತೊಗರಿಬೇಳೆ ಖರೀದಿಸಲು ಸೂಚನೆ ನೀಡಿದ್ದಾರೆ.

ನವೆಂಬರ್‌-ಡಿಸೆಂಬರ್‌ ತಿಂಗಳ ತೊಗರಿ ಬೇಳೆ ಪೂರೈಕೆ ವಿಳಂಬವಾಗಿದೆ. ಆದರೆ ಅದರಿಂದ ತುಂಬಾ ಸಮಸ್ಯೆಯಾಗಿಲ್ಲ. ಇದುವರೆಗೆ ದಾಸ್ತಾನಿದ್ದ ತೊಗರಿಬೇಳೆ ಬಳಸಿಕೊಂಡಿದ್ದೇವೆ. ಸ್ಥಳೀಯವಾಗಿ ಶಾಲಾ ಮಟ್ಟದಲ್ಲಿಯೇ ತೊಗರಿಬೇಳೆ ಖರೀದಿಸಲು ಕೂಡ ಆದೇಶ ನೀಡಿದ್ದೇವೆ.
– ಉಷಾ, ಶಿಕ್ಷಣಾಧಿಕಾರಿ,
ಅಕ್ಷರ ದಾಸೋಹ, ದ.ಕ. ಜಿಲ್ಲೆ

ಉಡುಪಿ ಜಿಲ್ಲೆಯಲ್ಲಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ಸಂಬಂಧಿಸಿ ತೋಗರಿಬೇಳೆ ಅಥವಾ ಯಾವುದೇ ಆಹಾರ ಪದಾರ್ಥಗಳ ಕೊರತೆ ಇಲ್ಲ. ಎಲ್ಲ ಶಾಲೆಗಳಲ್ಲೂ ಸರಕಾರದ ನಿಯಮದಂತೆ ಬಿಸಿಯೂಟ ಯಥಾಪ್ರಕಾರ ನಡೆಯುತ್ತಿದೆ.
-ಪ್ರಸನ್ನ ಎಚ್‌.,
ಸಿಇಒ ಜಿ.ಪಂ. ಉಡುಪಿ

ರಾಜ್ಯ ಮಟ್ಟದಲ್ಲಿ ನಡೆಯಬೇಕಿದ್ದ ಟೆಂಡರ್‌ ವಿಳಂಬವಾಗಿದ್ದರಿಂದ ಶಾಲೆಗಳಲ್ಲಿ ತೊಗರಿಬೇಳೆ ಕೊರತೆಯುಂಟಾಗಿದೆ. ಯೋಜನೆಯ ನಿರ್ದೇಶಕರು ಶಾಲಾ ಅನುದಾನದಲ್ಲಿ ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಿರುವುದರಿಂದ ಬೇಳೆ ಬರುವವರೆಗೆ ಮಕ್ಕಳ ಊಟಕ್ಕೆ ಸಮಸ್ಯೆಯಾಗದಂತೆ ಸ್ಥಳೀಯವಾಗಿ ಬೇಳೆ ಖರೀದಿಸಿ ಮಕ್ಕಳ ಊಟಕ್ಕೆ ಬಳಸಲಾಗುವುದು.
-ಡಾ| ಎ. ಚನ್ನಪ್ಪ, ದಾವಣಗೆರೆ ಜಿ.ಪಂ. ಸಿಇಒ

-  ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.