ಯೂರಿಯಾ ಪೂರೈಕೆಯಲ್ಲಿ ಕೃಷಿ ಇಲಾಖೆ ವಿಫಲ
Team Udayavani, Aug 25, 2020, 6:17 PM IST
ಸಾಂದರ್ಭಿಕ ಚಿತ್ರ
ಜಗಳೂರು: ರೈತರಿಗೆ ಸಮರ್ಪಕವಾಗಿ ಯೂರಿಯಾ ಗೊಬ್ಬರ ಮತ್ತು ಔಷಧ ಪೂರೈಕೆ ಮಾಡುವಲ್ಲಿ ಕೃಷಿ ಇಲಾಖೆಯವರು ವಿಫಲರಾಗಿದ್ದಾರೆ ಎಂದು ಆರೋಪಿ ರೈತ ಸಂಘ ಹಾಗೂ ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ)ದ ತಾಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಲ್ಲನಹೊಳೆ ಚಿರಂಜೀವಿ ಮಾತನಾಡಿ, ಜಗಳೂರು ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಬೆಳೆಗಳಿಗೆ ಬೇಕಾದ ಯೂರಿಯಾ ಗೊಬ್ಬರವಿಲ್ಲದೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಅಂಗಡಿಗಳಲ್ಲಿ ಯೂರಿಯಾ ದೊರೆಯುತ್ತಿಲ್ಲ. ಹೀಗಾಗಿ ಬೇರೆ ಜಿಲ್ಲೆಗೆ ಹೋಗಿ ಹೆಚ್ಚಿನ ಬೆಲೆ ನೀಡಿ ತರಬೇಕಾಗಿದೆ. ಕಸಬಾ ಹೋಬಳಿಯಲ್ಲಿ ಮೆಕ್ಕೆಜೋಳಕ್ಕೆ ಹುಳು ಬಾದೆ ಪ್ರಾರಂಭವಾಗಿದೆ. ಆದರೂ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷ ಗಂಗಾಧರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್, ತಾಲೂಕು ಕಾರ್ಯದರ್ಶಿ ದೊಣ್ಣೆಹಳ್ಳಿ ಲೋಕೇಶ್, ಸೊಕ್ಕೆ ಹೋಬಳಿ ಕಾರ್ಯದರ್ಶಿ ಕಸವನಹಳ್ಳಿ ನಾಗರಾಜ್, ಕಸಬಾ ಹೋಬಳಿ ಅಧ್ಯಕ್ಷ ಎಂ. ಶರಣಪ್ಪ, ಬಿಳಿಚೋಡು ಹೋಬಳಿ ಅಧ್ಯಕ್ಷ ಪ್ರಹ್ಲಾದಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ