ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Sep 16, 2020, 6:52 PM IST
ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಡಿ ಎಸ್.ಎಸ್.ಎಂ. ನಗರ, ಬಿಡಿ ಲೇಔಟ್, ಪಾರ್ವತಮ್ಮ ನಗರಗಳಲ್ಲಿ ಕೈಗೊಳ್ಳುತ್ತಿರುವ 10 ಕೋಟಿ ರೂ. ವೆಚ್ಚದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ಸಿಟಿ ಯೋಜನೆಯಡಿ ಸಿಸಿ ಚರಂಡಿ, ಕವರಿಂಗ್ ಸ್ಲಾಬ್ ಹಾಗೂ ಸಿಸಿ ರಸ್ತೆ ನಿರ್ಮಾಣ ಸೇರಿಂದಂತೆ ಮೂಲ ಸೌಕರ್ಯ ಅಭಿವೃದ್ಧಿಗಳ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಗುತ್ತಿಗೆದಾರರು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಆದಷ್ಟು ಬೇಗ ಜನರಿಗೆ ಒದಗಿಸಬೇಕು. ಸಿಜಿ ಆಸ್ಪತ್ರೆಯಲ್ಲಿ 30 ವೆಂಟಿಲೇಟರ್ ಗಳಿವೆ. ಆದರೆ ಆಪರೇಟರ್ ಮಾಡುವವರಿಲ್ಲ. ಕೂಡಲೇ ನೇಮಕ ಮಾಡಿಕೊಂಡು ಸಾರ್ವಜನಿಕರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾನಗರಪಾಲಿಕೆ ಮೇಯರ್ ಬಿ.ಜಿ. ಅಜಯಕುಮಾರ್ ಮಾತನಾಡಿ, ಸ್ಮಾರ್ಟ್ಸಿಟಿ ಯೋಜನೆಯಡಿ ಕೆಲಸಗಳು ವಿಳಂಬವಾಗುತ್ತಿವೆ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟುಸಭೆ ಮಾಡಲಾಗಿದೆ. ಆದಷ್ಟು ಬೇಗ ಕೆಲಸ ಮಾಡಲು ಸೂಚನೆ ನೀಡಲಾಗಿದ್ದುಸದ್ಯದಲ್ಲಿಯೇ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಈಗಾಗಲೇ ಶೇ. 60ರಷ್ಟು ಕೆಲಸವಾಗಿದೆ ಎಂದು ತಿಳಿಸಿದರು. ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ. ವಿರೇಶ್, ಮುಖಂಡ ಅಮಾನುಲ್ಲಾ ಖಾನ್ ಮಾತನಾಡಿದರು.ಉಪ ಮಹಾಪೌರರಾದ ಸೌಮ್ಯ ನರೇಂದ್ರ,ಸದಸ್ಯರಾದ ಎ.ಬಿ. ರಹೀಂ, ಚಮನ್ಸಾಬ್, ಜಾಕೀರ್ ಇನ್ನಿತರರು ಇದ್ದರು.
ಶಾಸಕರ ಅಸಮಾಧಾನ : ಆಡಳಿತ ನಡೆಸುವವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಆದರೆ, ಇತ್ತೀಚಿಗೆ ಸರ್ಕಾರದಿಂದ 125ಕೋಟಿ ರೂ. ಅನುದಾನ ಬಂದಾಗಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎಂಬಂತೆ ವರ್ತಿಸಿದರು. ಈ ಬಗ್ಗೆ ಸಚಿವರ ಗಮನಕ್ಕೂ ತರಲಾಯಿತು.ಅವರು ಸಹ ಸ್ಪಂದಿಸಲಿಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?