ರಸ್ತೆ ಕಾಮಗಾರಿಗೆ ಭೂಮಿಪೂಜೆ
Team Udayavani, Aug 28, 2020, 8:00 PM IST
ಮಾಯಕೊಂಡ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕೈಗೊಂಡಿರುವಮಾಯಕೊಂಡ ವಿಧಾನಸಭಾ ಕ್ಷೇತ್ರದ ತುರ್ಚಘಟ್ಟ ಗ್ರಾಮದಿಂದ ಆನಗೋಡುವರೆಗೆ ಮಾಯಕೊಂಡ-ಕಂದಗಲ್ಲು ರಸ್ತೆಯಅಭಿವೃದ್ಧಿ ಕಾಮಗಾರಿಗೆ ಸಂಸದ ಜಿ.ಎಂ. ಸಿದ್ದೇಶ್ವರ್ ಹಾಗೂ ಶಾಸಕ ಪ್ರೊ| ಎನ್. ಲಿಂಗಣ್ಣ ಕಂದಗಲ್ಲು ಮತ್ತು ಕುರ್ಕಿ ಗ್ರಾಮದಲ್ಲಿ ಗುರುವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್, ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಮಾಡಬೇಕು. ಗ್ರಾಮಸ್ಥರು ಕೂಡ ಕೆಲಸ ನಡೆಯುವ ಸಮಯದಲ್ಲಿ ಸಾಮಗ್ರಿಗಳ ಗುಣಮಟ್ಟವನ್ನು ಪರಿಶೀಲನೆ ಮಾಡುತ್ತಿರಬೇಕು. ಮಾಯಕೊಂಡ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಹೊಂದಬೇಕು. ನಿಮ್ಮ ಋಣ ನನ್ನ ಮತ್ತು ಶಾಸಕರ ಮೇಲಿದೆ. ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೂಲ ಋಣ ತೀರಿಸುವುದಾಗಿ ತಿಳಿಸಿದರು.
ಶಾಸಕ ಪ್ರೊ| ಎನ್. ಲಿಂಗಣ್ಣ ಮಾತನಾಡಿ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಮಗಾರಿ ಮಾಡಲು ಎಷ್ಟೇ ಪ್ರಯತ್ನ ಮಾಡಿದರೂ ಕೆಲಸ ನಡೆಯಲಿಲ್ಲ. ಯಡಿಯೂರಪ್ಪ ನೇತೃತ್ವದ ಸರ್ಕಾರ ಬಂದ ಮೇಲೆ ನಾನು ಮತ್ತು ಸಂಸದರು ಅನುದಾನ ಬಿಡುಗಡೆ ಮಾಡಿಸಿದ್ದೇವೆ ಎಂದರು. ಮಾಜಿ ಶಾಸಕ ಬಸವರಾಜ ನಾಯ್ಕ್ ಹಾಗೂ ಜಿಪಂ ಅಧ್ಯಕ್ಷೆ ದೀಪಾ ಜಗದೀಶ್ ಮಾತನಾಡಿದರು. ಜಿಪಂ ಸದಸ್ಯೆ ಶೈಲಜಾ ಬಸವರಾಜ್, ತಾಪಂ ಸದಸ್ಯ ಅಶೋಕ್, ಬಿಜೆಪಿ ಮಂಡಲ ಅಧ್ಯಕ್ಷ ದೇವೇಂದ್ರಪ್ಪ, ಮಾಜಿ ಅಧ್ಯಕ್ಷ ಅಣಬೇರು ಜೀವನಮೂರ್ತಿ, ಮುಖಂಡರಾದ ದೇವರಾಜ್ ಅತ್ತಿಗೆರೆ, ಬಸಪ್ಪ, ರಾಜಣ್ಣ ಮತ್ತಿತರರು ಇದ್ದರು. ತುರ್ಚಘಟ್ಟದಿಂದ ಆನಗೋಡು 7.30 ಕಿಮೀ ಉದ್ದದ ರಸ್ತೆಗೆ 5.80 ಕೋಟಿ, ಮಾಯಕೊಂಡದಿಂದ ಕಂದಗಲ್ಲು ರಸ್ತೆ ಯ ಕಬ್ಬೂರು, ಮಲ್ಲೇನಹಳ್ಳಿ, ಅತ್ತಿಗೆರೆ, ಗೋಪನಾಳು, ಕಾಶಿಪುರ, ಮಳಲ್ಕೆರೆವರೆಗೆ 22.62 ಕಿಮೀವರೆಗೆ 22.79 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ