ಜಿದ್ದಾಜಿದ್ದಿಯ ಕ್ಷೇತ್ರದಲ್ಲಿ ಲೀಡ್‌ ಲೆಕ್ಕಾಚಾರ!


Team Udayavani, Apr 30, 2019, 12:28 PM IST

gul-4

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಅತೀ ಜಿದ್ದಾಜಿದ್ದಿ ಹಾಗೂ ಭಾರೀ ಪೈಪೋಟಿಯ ಇತಿಹಾಸ ಹೊಂದಿರುವ ಹರಿಹರ ವಿಧಾನಸಭಾ ಕ್ಷೇತ್ರದ ಮತದಾರರ ಲೆಕ್ಕಾಚಾರದ ನಾಡಿಮಿಡಿತ ಊಹೆಗೂ ನಿಲುಕದ್ದು. ಹಾಗಾಗಿ ಈ ಕ್ಷೇತ್ರದಲ್ಲಿ ಇದೇ ಪಕ್ಷ ಲೀಡ್‌ ಪಡೆಯುತ್ತದೆ ಎಂದು ಅಂದಾಜಿಸುವುದು ಕಠಿಣ.

1977 ರಲ್ಲಿ ಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ಲೋಕಸಭಾ ಕ್ಷೇತ್ರದ ಮೊಟ್ಟ ಮೊದಲ ಸಂಸದ ಕೊಂಡಜ್ಜಿ ಬಸಪ್ಪನವರು ಹರಿಹರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಂಡಜ್ಜಿಯವರು. ಕೇಂದ್ರದ ಆರೋಗ್ಯ ಇಲಾಖೆಯ ರಾಜ್ಯ ಸಚಿವರಾಗಿಯೂ ಕೆಲಸ ಮಾಡಿದ್ದವರು. ಬಿ. ಬಸವಲಿಂಗಪ್ಪ, ಡಾ| ವೈ. ನಾಗಪ್ಪ ಅವರಂತಹ ಸಚಿವರು ಇದೇ ತಾಲೂಕಿನವರು.

ಸಾಕಷ್ಟು ಜಿದ್ದಾಜಿದ್ದಿನ ರಾಜಕೀಯದ ಇತಿಹಾಸ ಹೊಂದಿರುವ ಹರಿಹರ ವಿಧಾನಸಭಾ ಕ್ಷೇತ್ರದ ಮತದಾರರ ಮನದ ಲೆಕ್ಕಾಚಾರ ಬಲು ಪಕ್ಕಾ. ಹಾಗಾಗಿಯೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದೇ ಪಕ್ಷ ಖಚಿತವಾಗಿಯೇ ಲೀಡ್‌ ಪಡೆದೇ ತೀರುತ್ತದೆ ಎನ್ನುವಂತಿಲ್ಲ. ಬಿಜೆಪಿ ಹಾಗೂ ಮೈತ್ರಿ ಪಕ್ಷಗಳು ತಮ್ಮದೇ ಲೆಕ್ಕಾಚಾರದ ಆಧಾರದಲ್ಲಿ ತಮಗೆ ಇಷ್ಟೇ ಲೀಡ್‌ ದೊರೆಯುತ್ತದೆ ಎಂಬ ನಿರೀಕ್ಷೆಯಲ್ಲಿವೆ. ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 1,04,184 ಪುರುಷರು, 1,03,970 ಮಹಿಳೆಯರು ಹಾಗೂ 16 ಇತರರು ಒಳಗೊಂಡಂತೆ 2,08,170 ಮತದಾರರು ಇದ್ದಾರೆ. ಏ.23 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ 80,404 ಪುರುಷರು, 74,485 ಮಹಿಳೆಯರು ಹಾಗೂ 6 ಇತರೆ ಮತದಾರರು ಮತದಾನ ಮಾಡಿದ್ದಾರೆ. ಒಟ್ಟಾರೆ ಶೇ. 74.41 ಮತದಾನವಾಗಿದೆ.

2014ರ ಲೋಕಸಭಾ ಚುನಾವಣೆಯಲ್ಲಿ 2,00,521 ಮತದಾರರಲ್ಲಿ 1,45,845 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಆಗ ಶೇ. 72.23 ಮತದಾನವಾಗಿತ್ತು. 2014ರ ಚುನಾವಣೆಗೆ ಹೋಲಿಕೆ ಮಾಡಿದಲ್ಲಿ ಈ ಬಾರಿ ಶೇ. 2.18 ರಷ್ಟು ಮತದಾನ ಹೆಚ್ಚಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜಿ.ಎಂ. ಸಿದ್ದೇಶ್ವರ್‌ 60,529, ಕಾಂಗ್ರೆಸ್‌ನ ಎಸ್‌.ಎಸ್‌. ಮಲ್ಲಿಕಾರ್ಜುನ್‌ 70,101 ಹಾಗೂ ಜೆಡಿಎಸ್‌ನ ಮಹಿಮಾ ಜೆ. ಪಟೇಲ್ 9,702 ಮತ ಪಡೆದಿದ್ದರು. ಭರ್ಜರಿ ಎನ್ನುವಂತಹ ಮೋದಿ ಅಲೆಯ ನಡುವೆಯೂ ಹರಿಹರ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ ಲೀಡ್‌ ಗಳಿಸಿತ್ತು.

ಈ ಬಾರಿ ನಡೆದ ಚುನಾವಣೆಯಲ್ಲೂ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ ಅವರ ಸಮುದಾಯದ ಮತಗಳು ಮತ್ತು ಕಾಂಗ್ರೆಸ್‌, ಜೆಡಿಎಸ್‌ನ ಸಾಂಪ್ರದಾಯಿಕ ಮತಗಳು ಲೀಡ್‌ ಒದಗಿಸಲಿವೆ ಎಂಬ ಮಾತು ಬಲು ಜೋರಾಗಿ ಕೇಳಿ ಬರುತ್ತಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಲೆ ಹಾಗೂ ಯುವ ಮತದಾರರ ಒತ್ತಾಸೆ, ಸಂಸದ ಜಿ.ಎಂ. ಸಿದ್ದೇಶ್ವರ್‌ ತಾಲೂಕಿನಲ್ಲಿ ಕೈಗೊಳ್ಳಲಿರುವ ಅಭಿವೃದ್ಧಿ ಕಾರ್ಯಗಳು ಲೀಡ್‌ ತಂದು ಕೊಡಲಿವೆ ಎಂಬುದು ಬಿಜೆಪಿ ಲೆಕ್ಕಾಚಾರ. ಹರಟೆ ಕಟ್ಟೆಗಳ ಮೇಲೆ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆಯಾದರೂ ಎಲ್ಲೂ ಸಹ ಅಭ್ಯರ್ಥಿಗಳ ಪರ ಬೆಟ್ಟಿಂಗ್‌ ನಡೆಯುತ್ತಿಲ್ಲ.

•ರಾ. ರವಿಬಾಬು

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.