ಖಾಸಗಿಯಲ್ಲೂ ಉದ್ಯೋಗ ಮೀಸಲಾತಿ ಕಲ್ಪಿಸಲಿ


Team Udayavani, May 12, 2017, 12:46 PM IST

dvg1.jpg

ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ದಲಿತ ಸಮುದಾಯಗಳ ಬಗ್ಗೆ ನಿಜವಾಗಿಯೂ ಕಾಳಜಿಯಿದ್ದಲ್ಲಿ ಖಾಸಗಿ ಕ್ಷೇತ್ರದಲ್ಲಿಯೂ ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ತರಲಿ ಎಂದು ಬಿಎಸ್ಪಿ ರಾಜ್ಯ ಸಂಚಾಲಕ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದ್ದಾರೆ. 

ಶುಕ್ರವಾರ ರಸ್ತೆ ಸಾರಿಗೆ ಸಂಸ್ಥೆ ದಾವಣಗೆರೆ ವಿಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದ ಬೆಳ್ಳಿ ಹಬ್ಬದ ಮಹೋತ್ಸವ ಮತ್ತು ಡಾ| ಬಿ.ಆರ್‌. ಅಂಬೇಡ್ಕರ್‌ರವರ 126ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಈಚೆಗೆ ದಲಿತ ಸಮುದಾಯದ ಮೀಸಲಾತಿ ಸೌಲಭ್ಯ ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಇದೇ ಸ್ಥಿತಿ ಮುಂದುವರೆದಲ್ಲಿ ಸರ್ಕಾರಿ ಉದ್ಯೋಗ ಎನ್ನುವುದು ದಲಿತ  ಸಮುದಾಯಕ್ಕೆ ಸಿಗುವುದೇ ಇಲ್ಲ. ಹಾಗಾಗಿ ಐಟಿ, ಬಿಟಿಯಂತಹ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದರು. 

ಭಾರತದಲ್ಲಿ 4 ವರ್ಗ, 6 ಸಾವಿರ ಜಾತಿ, 1 ಲಕ್ಷ ಉಪಜಾತಿ ಇವೆ. ಶತ ಶತಮಾನದಿಂದ ದಲಿತ ಸಮುದಾಯಗಳ ಮೇಲೆ ಒಂದಿಲ್ಲ ಒಂದು ರೀತಿಯ ದೌರ್ಜನ್ಯ, ಶೋಷಣೆ, ದಬ್ಟಾಳಿಕೆ ನಡೆಯುತ್ತಲೇ ಇದೆ.  ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರದಲ್ಲಿ ತೀರಾ ಹಿಂದುಳಿದಿರುವ ದಲಿತ ಸಮುದಾಯಕ್ಕೆ ಸಲಾತಿ ಸೌಲಭ್ಯ ಬೇಕೇ ಬೇಕು ಎಂದು ಪ್ರತಿಪಾದಿಸಿದರು.

ದೇಶದಲ್ಲಿ 30 ಕೋಟಿಗೂ ಅಧಿಕ ಸಂಖ್ಯೆಯಲ್ಲಿರುವ ದಲಿತ ಸಮುದಾಯದವರು ಅನುಭವಿಸುತ್ತಿದ್ದ ಶೋಷಣೆ, ದೌರ್ಜನ್ಯ, ದಬ್ಟಾಳಿಕೆ ತಪ್ಪಿಸಲಿಕ್ಕೆ 360 ಕೋಟಿಯಷ್ಟಿವೆ ಎನ್ನುವ ಯಾವುದೇ ದೇವರು ಬರಲಿಲ್ಲ. ಅಂಬೇಡ್ಕರ್‌ ಮಾತ್ರವೇ ದಲಿತ ಸಮುದಾಯಗಳ ಶೋಷಣೆ ತಪ್ಪಿಸಲು ಬಂದವರು.

1950ರಲ್ಲಿ ಜಾರಿಗೆ ಬಂದ ಸಂವಿಧಾನದಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸುವ ಮೂಲಕ ದಲಿತರು ಸಹ ಕೆಲವಾರು ಹುದ್ದೆ, ರಾಜಕೀಯ ಅಧಿಕಾರ ಪಡೆಯಲು ನೆರವಾದರು. ಅಂಬೇಡ್ಕರ್‌ ದಲಿತರಿಗೆ ಮಾತ್ರವೇ ಮೀಸಲಾತಿ ಸೌಲಭ್ಯ ನೀಡಲಿಲ್ಲ. ಎಲ್ಲ ಸಮುದಾಯಕ್ಕೆ ನೀಡಿದ ಕಾರಣಕ್ಕೆ ದೇವೇಗೌಡ ಪ್ರಧಾನಿ ಆದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ತಿಳಿಸಿದರು. ಈಚೆಗೆ ಸರ್ವೋತ್ಛ ನ್ಯಾಯಾಲಯದ ನೀಡಿರುವ ತೀರ್ಪಿನಿಂದ ರಾಜ್ಯದಲ್ಲಿ 16 ಸಾವಿರಕ್ಕೂ ಹೆಚ್ಚು ದಲಿತ ಅಧಿಕಾರಿಗಳು, ನೌಕರರು ಮುಂಬಡ್ತಿಯಿಂದ ಹಿಂಬಡ್ತಿ ಪಡೆಯುವ ಆತಂಕದ ಸ್ಥಿತಿಯಲ್ಲಿದ್ದಾರೆ.

ರಾಜ್ಯ ಸರ್ಕಾರ ಮುಂಬಡ್ತಿ ಸೌಲಭ್ಯ ಕುರಿತಂತೆ ನ್ಯಾಯಾಲಯದಲ್ಲಿ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಿ, ಸಮರ್ಥ ವಾದ ಮಂಡಿಸಬೇಕು. ಕೇಂದ್ರ ಸರ್ಕಾರ ಮುಂಬಡ್ತಿ ಮೀಸಲಾತಿಸೌಲಭ್ಯ ಕುರಿತಂತೆ ಮಸೂದೆ ಮಂಡನೆ ಮಾಡಿ, ಕಾಯ್ದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.  

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Shamanuru Shivashankarappa

Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು

mp renukacharya

ಬಿಎಸ್ ವೈ ವಿರುದ್ದದ ಷಡ್ಯಂತ್ರದ ಹಿಂದೆ ಪ್ರಭಾವಿ ಸಚಿವರಿದ್ದಾರೆ: ರೇಣುಕಾಚಾರ್ಯ

17

Priyanka Jarakiholi: ಸಮಸ್ಯೆ ಇರುವ ಮಾತ್ರಕ್ಕೆ ಪ್ರತ್ಯೇಕ ರಾಜ್ಯ ಪ್ರಸ್ತಾವ ಸಲ್ಲ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.