ಸರ್ಕಾರದ ಅನುದಾನ ಸದ್ಬಳಕೆಯಾಗಲಿ

ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಲಿ: ರೇಣುಕಾಚಾರ್ಯ

Team Udayavani, Apr 27, 2022, 4:18 PM IST

renukacharya

ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಿದರೆ ಮಾತ್ರ ಸರ್ಕಾರದಿಂದ ಬಂದಂತಹ ಸಾವಿರಾರು ಕೋಟಿ ಅನುದಾನ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಪಟ್ಟಣದ ತಾಪಂ ಸಾಮರ್ಥ್ಯಸೌಧದಲ್ಲಿ ಮಂಗಳವಾರ ನಡೆದ ತ್ತೈಮಾಸಿಕ ಕೆಡಿಪಿ ಹಾಗೂ ತಾಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಸಾಧನೆ ಮತ್ತು ಅನುಷ್ಠಾನದ ಸಮಗ್ರ ಮಾಹಿತಿಯನ್ನು ಸಭೆಗೆ ವಿವರಿಸಬೇಕು. ವಿವರಣೆ ಸಂಪೂರ್ಣ ದಾಖಲೆಯೊಂದಿಗೆ ಇರಬೇಕು ಎಂದು ಸೂಚಿಸಿದರು.

ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಅನುದಾನ ಹಾಗೂ ಕ್ರಿಯಾ ಯೋಜನೆಯನ್ನು ವಿವರಿಸುವಂತೆ ಶಾಸಕರು ತಿಳಿಸಿದರು. ಅಧಿಕಾರಿಗಳು ಸಮರ್ಪಕ ವಿವರಣೆ ಕೊಡಲು ತಡವರಿಸಿದಾಗ ಶಾಸಕರೇ ವಿವಿಧ ಇಲಾಖೆಗಳಿಗೆ ಹಾಗೂ ಗ್ರಾಮಗಳಿಗೆ ಬಂದಂತಹ ಅನುದಾನದ ಬಗ್ಗೆ ವಿವರಿಸಿದರು.

ನ್ಯಾಮತಿ ತಾಲೂಕಿನ ಜೀನಹಳ್ಳಿ ಗ್ರಾಮ ಸೇರಿದಂತೆ ಇತರ ಗ್ರಾಮಗಳಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ನೀರಾವರಿ ಇಲಾಖೆಯವರು ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಯಲ್ಲಿ ರಸ್ತೆಗಳನ್ನು ದುರಸ್ತಿ ಮಾಡದೆ ಹಾಗೆಯೇ ಬಿಟ್ಟಿದ್ದೀರಿ, ಇದರಿಂದ ಗ್ರಾಮೀಣ ಭಾಗದ ರಸ್ತೆಗಳು ಹಾಳಾಗುತ್ತವೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಎಂಜಿನಿಯರ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ಗೋವಿನಕೋವಿ, ಹನುಮಸಾಗರ ವ್ಯಾಪ್ತಿಯ 94 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಹಾಗೂ ಬೆನಕನಹಳ್ಳಿ ಏತ ನೀರಾವರಿ ಯೋಜನೆಯಿಂದ 24 ಕೆರೆಗಳನ್ನು ತುಂಬಿಸುವ ಯೋಜನೆಯ 519 ಕೋಟಿ ರೂ. ವೆಚ್ಚದ ಕಾಮಗಾರಿ ಭರದಿಂದ ಸಾಗಿದೆ. ಕುಂದೂರು ಕೆರೆ ಏರಿ ಅಗಲೀಕರಣಕ್ಕೆ 6 ಕೋಟಿ ರೂ., ಅರಕೆರೆ, ನರಸಗೊಂಡನಹಳ್ಳಿ ಬಳಿಯ ಚತುಷ್ಪಥಕ್ಕೆ 4.5 ಕೋಟಿ ರೂ. ಅನುದಾನ ಬಿಡುಗಡೆಯಾಗಿ ಕಾಮಗಾರಿ ಪ್ರಗತಿಯಲ್ಲಿದೆ. ಅರಬಗಟ್ಟೆ ಗ್ರಾಮದಲ್ಲಿ 2 ಮತ್ತು ಸಿಂಗಟಗೆರೆ ಗ್ರಾಮದ ಬಳಿ 1 ವಸತಿ ಶಾಲೆ ಸೇರಿದಂತೆ ಒಟ್ಟು 3 ವಸತಿ ಶಾಲೆಗಳ ಕಟ್ಟಡಗಳು ಪೂರ್ಣಗೊಂಡಿವೆ. ಬೇಲಿಮಲ್ಲೂರು ಗ್ರಾಮದ ಬಳಿ ಹಾಗೂ ಎಚ್‌. ಕಡದಕಟ್ಟೆ ಬಳಿಯ ಹೆಲಿಪ್ಯಾಡ್‌ ಬಳಿ ಇರುವ ವಿದ್ಯಾರ್ಥಿನಿಲಯಗಳ ಕಟ್ಟಡಗಳು ಶೀಘ್ರದಲ್ಲಿ ಉದ್ಘಾಟನೆಯಾಗಲಿವೆ ಎಂದು ತಿಳಿಸಿದರು.

30.40 ಕೋಟಿ ರೂ. ವೆಚ್ಚದಲ್ಲಿ ಒಟ್ಟು 132 ಕೊಠಡಿಗಳನ್ನು ನಿರ್ಮಿಸಲಾಗಿದೆ. ನ್ಯಾಮತಿ ಪಟ್ಟಣದ ಕೆಪಿಎಸ್‌ಗೆ ಅವಶ್ಯವಾಗಿರುವ ಕಟ್ಟಡದ ಕಾಮಗಾರಿ ಪ್ರಾರಂಭವಾಗಿದೆ. ಹೊನ್ನಾಳಿ ಮತ್ತು ನ್ಯಾಮತಿ ಪದವಿ ಕಾಲೇಜುಗಳಿಗೆ ಅವಶ್ಯವಿರುವ ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ. ಹೊನ್ನಾಳಿ ಪಟ್ಟಣದ ಪದವಿ ಕಾಲೇಜಿಗೆ 5.95 ಕೋಟಿ ರೂ. ಹಾಗೂ ನ್ಯಾಮತಿ ಪಟ್ಟಣದ ಪದವಿ ಕಾಲೇಜಿಗೆ 4.25 ಕೋಟಿ ರೂ. ಅನುದಾನ ಬಿಡುಗಡೆಯಾಗಿ ಕಾಮಗಾರಿ ಪ್ರಾರಂಭವಾಗಿದೆ. ನ್ಯಾಮತಿ ತಾಲೂಕಿನ ಪದವಿ ಕಾಲೇಜಿಗೆ 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದರು.

ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ, ಚಿಕ್ಕಗೋಣಿಗೆರೆ ಹಾಗೂ ನ್ಯಾಮತಿ ತಾಲೂಕಿನ ಗಂಗನಕೋಟೆ ಗ್ರಾಮದ ಬಳಿ 66 ಕೆವಿ ಪವರ್‌ ಸ್ಟೇಷನ್‌ ಸ್ಥಾಪನೆ ಮಾಡಲಾಗಿದೆ. ಬೆಸ್ಕಾಂನಲ್ಲಿ ಬೆಳಕು ಯೋಜನೆಯಡಿ 270 ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ 1500 ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿ ಬೆಳಕು ನೀಡುವ ಗುರಿ ಹೊಂದಲಾಗಿದೆ. ನೇರಲಗುಂಡಿ, ಗಡ್ಡೇಹಳ್ಳಿ ಸೇರಿದಂತೆ 8 ಹಳ್ಳಿಗಳ ಕೆರೆ ಹೂಳೆತ್ತುವ ಕಾಮಗಾರಿಗೆ 4 ಕೋಟಿ ರೂ. ಬಿಡುಗಡೆಯಾಗಿದೆ. ಕೆಲವು ಹಳ್ಳಿಗಳ ಕೆರೆ ಹೂಳೆತ್ತುವ ಕೆಲಸ ಮುಗಿದಿದ್ದು, ಹಲವು ಹಳ್ಳಿಗಳ ಕೆರೆ ಹೂಳೆತ್ತುವ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಉಪವಿಭಾಗಾಧಿಕಾರಿ ತಿಮ್ಮಣ್ಣ ಹುಲ್ಲುಮನಿ, ಹೊನ್ನಾಳಿ ತಹಶೀಲ್ದಾರ್‌ ರಶ್ಮಿ, ನ್ಯಾಮತಿ ತಹಶೀಲ್ದಾರ್‌ ರೇಣುಕಾ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್‌ ಚಿಂತಾಳ್‌, ನ್ಯಾಮತಿ ತಾಪಂ ಆಡಳಿತಾಧಿಕಾರಿ ಅನ್ನಪೂರ್ಣಮ್ಮ, ತಾಪಂ ಇಒ ರಾಮ ಭೋವಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.