ಅರ್ಹರಿಗೆ ಯೋಜನೆ ಫಲ ದೊರೆಯಲಿ


Team Udayavani, Mar 6, 2019, 10:02 AM IST

dvg-2.jpg

ದಾವಣಗೆರೆ: ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆಯ ಕಾರ್ಡ್‌ಗಳನ್ನು ಅರ್ಹ ಪಲಾನುಭವಿಗಳಿಗೆ ನೀಡಿಲ್ಲ. ಯೋಜನೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷವಾಗದಂತೆ ಎಚ್ಚರಿಸಬೇಕು ಎಂದು ಸಂಸದ ಜಿ.ಎಂ.ಸಿದ್ದೇಶ್ವರ್‌ ಹೇಳಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಂಗಳವಾರ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಂಚಣಿ ಯೋಜನೆ ಕಾರ್ಡ್‌ಗಳು ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ. ಆ ಬಗ್ಗೆ ಪರಿಶೀಲಿಸಿ, ಜಿಲ್ಲೆಯಲ್ಲಿರುವ ಎಲ್ಲ ಅಸಂಘಟಿತ ಕಾರ್ಮಿಕರಿಗೂ ಈ ಯೋಜನೆ ತಲುಪಬೇಕು ಎಂದರು.

ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆ ಘೋಷಿಸಿದ್ದು, ಪ್ರಧಾನ ಮಂತ್ರಿಯವರು 15 ಸಾವಿರಕ್ಕಿಂತ ಕಡಿಮೆ ಮಾಸಿಕ ವರಮಾನವಿರುವ ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತಂದಿದ್ದಾರೆ.
ಅಸಂಘಟಿತ ಕಾರ್ಮಿಕರು ಈ ಯೋಜನೆ ಸದ್ಬಳಕೆ ಮಾಡಿಳ್ಳಬೇಕು ಎಂದು ಮನವಿ ಮಾಡಿದರು.

ಜಿಪಂ ಅಧ್ಯಕ್ಷೆ ಶೈಲಜಾ ಬಸವರಾಜ್‌ ಮಾತನಾಡಿ, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆ ತರಾತುರಿಯಲ್ಲಿ ಜಾರಿಗೆ ತಂದಿರುವುದರಿಂದ ಕಾರ್ಡಗಳ ವಿತರಣೆಯಲ್ಲಿ ಲೋಪದೋಷಗಳಾಗಿವೆ. ಅಧಿಕಾರಿಗಳು ಆ ಲೋಪ ಸರಿಪಡಿಸಬೇಕು. ಈ ಯೋಜನೆಯನ್ನು ಸಮರ್ಪಕ ರೀತಿ ಪ್ರಚುರ ಪಡಿಸಿ ಅಸಂಘಟಿತ ಕಾರ್ಮಿಕರಿಗೆ ತಲುಪಿಸಬೇಕು ಎಂದು ತಿಳಿಸಿದರು.

ಯೋಜನೆ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಮೊದಲೇ ತಿಳಿಸಿದ್ದರೆ, ನಾವು ಭಾಗವಹಿಸುವ ಕಾರ್ಯಕ್ರಮದಲ್ಲಿ ಈ ಯೋಜನೆ ಕುರಿತು ಪ್ರಚಾರ ಮಾಡುತ್ತಿದ್ದೆವು, ಅಧಿಕಾರಿಗಳ ಗಮನಕ್ಕೆ ತರದ ಹಿನ್ನೆಲೆಯಲ್ಲಿ ಯೋಜನೆ ಬಗ್ಗೆ ಬಹುತೇಕ ಮಂದಿಗೆ ಮಾಹಿತಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
 
ಮುಖ್ಯ ಅತಿಥಿಯಾಗಿದ್ದ ಕಾರ್ಮಿಕ ಮುಖಂಡ ಎಚ್‌.ಕೆ.ರಾಮಚಂದ್ರಪ್ಪ ಮಾತನಾಡಿ, ದೇಶದಲ್ಲಿ ಶೇ. 93ರಷ್ಟಿರುವ ಅಸಂಘಟಿತ ಕಾರ್ಮಿಕರು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆಯ ಫಲಾನುಭವಿಗಳಾಗಬೇಕಿದೆ. ಇಂದು ಕಾರ್ಮಿಕರಿಗಾಗಿ ಜಾರಿಯಾಗಿರುವ ಇಂತಹ ಅನೇಕ ಯೋಜನೆಗಳು ದುಡಿಯುವ ವರ್ಗ ತಲುಪುತ್ತಿಲ್ಲ. ಅಧಿಕಾರಿಗಳು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿಗೆ ತರಬೇಕು ಎಂದು ಕೋರಿದರು. ಈ ಯೋಜನೆಯಡಿ ಅಸಂಘಟಿತ ಕಾರ್ಮಿಕರಾದಂತಹ ರಿಕ್ಷಾ ಎಳೆಯುವವರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ತಯಾರಕರು, ಇಟ್ಟಿಗೆ ಗೂಡು ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆಗೆಸಲಸದವರು, ದೋಬಿಗಳು, ಕೈಮಗ್ಗ ಕಾರ್ಮಿಕರು, ಗಾರೆ ಕೆಲಸದವರು, ಕೃಷಿ ಕಾರ್ಮಿಕರು, ಇತರೆ ಅನ್ಯ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ಫಲಾನುಭವಿಗಳಾಗಬೇಕಿದೆ ಎಂದರು.

ಹಲವಾರು ವಲಯಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರನ್ನು ಯೋಜನೆಯ ಅಡಿಯಲ್ಲಿ ಸೇರಿಸುವಂತೆ ಮನವಿ ಮಾಡಿದ ಅವರು, ಎನ್‌ಪಿಎಸ್‌ ಯೋಜನೆಯಂತೆ ಈ ಯೋಜನೆ ನೆನೆಗುದಿಗೆ ಬೀಳದೇ ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಬೇಕೆಂದರು. ಇಎಸ್‌ಐ ಅಧಿಕಾರಿ ಕುಮಾರಿ ಸುನೀತಾ, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆ ಫಲಾನುಭವಿ ಅಸಂಘಟಿತ ಕಾರ್ಮಿಕನಾಗಿದ್ದು, 18 ರಿಂದ 40 ವರ್ಷದೊಳಗಿರಬೇಕು. 15 ಸಾವಿರಕ್ಕಿಂತ ಕಡಿಮೆ ಮಾಸಿಕ ವರಮಾನ ಹೊಂದಿರಬೇಕು. ಅರ್ಹರು ತಮ್ಮ ವಯೋಮಿತಿಗೆ ಅನುಗುಣವಾಗಿ ವಿಮೆ ಕಂತು ಪಾವತಿಸಬೇಕು. 

ಚಂದಾದರರಿಗೆ ಅವರ 60 ವರ್ಷದ ನಂತರ ಮಾಸಿಕ 3 ಸಾವಿರ ರೂ. ಪಿಂಚಣಿ ಮತ್ತು ಅವರ ಮರಣದ ನಂತರ ಚಂದಾದಾರರ ಸಂಗಾತಿ ಶೇ. 50ರಷ್ಟು ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.

ಜಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್‌.ವಿ. ರಾಮಚಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ಬಳ್ಳಾರಿ ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ಮಹಮದ್‌ ಜಾಕಿರ್‌ ಇಬ್ರಾಹಿಂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಗೊಂದಲ ಗೂಡಾದ ಕಾರ್ಯಕ್ರಮ 
ದಾವಣಗೆರೆ: ಅರ್ಹರು ಯೋಜನೆ ಫಲಾನುಭವಿಗಳಾಗುತ್ತಿಲ್ಲ ಎಂಬ ವಿಷಯ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಒಂದು ರೀತಿ ಗೊಂದಲ ಗೂಡಾಯಿತು. ವಿದ್ಯಾರ್ಥಿಗಳು, ರೈತರಿಗೆ ಯೋಜನೆ ಕಾರ್ಡ್‌ ವಿತರಿಸಿರುವ ಬಗ್ಗೆ ಸಂಬಂಧಪಟ್ಟ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡ ಸಂಸದ ಜಿ.ಎಂ.ಸಿದ್ದೇಶ್ವರ್‌, ಅರ್ಹರಿಗೆ ಯೋಜನೆ ಕಾರ್ಡ್‌ ಕೊಡಿ, ಯಾರ್ಯಾರಿಗೋ ಕಾರ್ಡ್‌ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಸೇವಾ ಕೇಂದ್ರದ ಪ್ರತಿನಿಧಿಗಳು, ಅರ್ಹ ರಜೆ ಇದ್ದರೂ ಕೆಲಸ ಮಾಡಲಾಗಿದೆ. ನಮಗೆ ತರಾತುರಿಯಲ್ಲಿ ನೀಡಿದ್ದರಿಂದ ಲೋಪವಾಗಿದೆ ಎಂದು ಸಮಸ್ಯೆ ಬಗ್ಗೆ ಸಂಸದರ ಗಮನ ಸೆಳೆದರು. ಜಿಪಂ ಅಧ್ಯಕ್ಷೆ ಶೈಲಜಾ ಬಸವರಾಜ್‌ ಸಹ ಕಾರ್ಡ್‌ ವಿತರಣೆ ಸಂಬಂಧ ಬೇಸರ ವ್ಯಕ್ತಪಡಿಸಿ, ಈ ಕಾರ್ಯಕ್ರಮ ಆಯೋಜಿಸಿರುವವರು ಯಾರು? ಫಲಾನುಭವಿಗಳ ಆಯ್ಕೆ ಹೇಗೆ? ಎಂದು ಪ್ರಶ್ನಿಸುತ್ತಿದ್ದಾಗ ಸೇವಾ ಕೇಂದ್ರದ ಪ್ರತಿನಿಧಿಗಳು ಕಾರ್ಯಕ್ರಮದಿಂದ ಹೊರನಡೆದರು. ಈ ಮಧ್ಯೆ ಫಲಾನುಭವಿಯೊಬ್ಬರು ಕಾರ್ಡ್‌ ನೀಡಲು 2-3 ಸಾವಿರ ರೂ. ಪಡೆಯಲಾಗುತ್ತಿದೆ ಎಂದು ದೂರಿದರು.
 
ನಂತರ ಶೈಲಜಾ ಬಸವರಾಜ್‌ ಮಾತನಾಡಿ, ತುರ್ತಾಗಿ ಕಾರ್ಯಕ್ರಮಕ ಆಯೋಜಿಸಿದ್ದರಿಂದ ಕೆಲ ಲೋಪಗಳಾಗಿವೆ. ಇದನ್ನ ಸರಿಪಡಿಸಲು ಅವಕಾಶ ಇದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಲಿ. ಲೋಪದೋಷ ಸರಿಪಡಿಸಲು ಜನಪ್ರತಿನಿಧಿಗಳ ನೆರವು ಪಡೆಯಲಿ ಎಂದು ಹೇಳಿದರು. ಕೊನೆಗೆ ಇಎಸ್‌ಐ ಅಧಿಕಾರಿ ಬಿ.ಎಂ. ಮಂಡಲ್‌, ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದಾಗ ಕೆಲ ಗೊಂದಲಗಳಿಗೆ ತೆರೆಬಿತ್ತು. ಅಷ್ಟರಲ್ಲಿ ಸಾರ್ವಜನಿಕರು, ಕಾರ್ಮಿಕರು ಸಭಾಂಗಣದಿಂದ ತೆರಳಿದ್ದರು.

ಅರ್ಹರಿಗೆ ತಲುಪದ ಯೋಜನೆ ಶೇ.7ರಷ್ಟು ಮಾತ್ರ ದೇಶದಲ್ಲಿ ಸಂಘಟಿತ ಕಾರ್ಮಿಕ ವರ್ಗವಿದೆ. ಇನ್ನುಳಿದ ಶೇ. 93ರಷ್ಟು ಅಸಂಘಟಿತ ಕಾರ್ಮಿಕವರ್ಗದವರಾದ ಕಟ್ಟಡ, ಕೃಷಿ ಕಾರ್ಮಿಕರು, ಕ್ಷೌರಿಕರು, ದೋಬಿಗಳು ಇಂತಹ ಅನೇಕ ಕಾರ್ಮಿಕರು ಈ ಯೋಜನೆಯ ಫಲ ಪಡೆಯಬೇಕಿದೆ. ಸರ್ಕಾರದ ಹಲವಾರು ಯೋಜನೆಗಳಲ್ಲಿ ಲೋಪವಿದ್ದು, ಅರ್ಹ ಫಲಾನುಭವಿಗಳಿಗೆ ಯೊಜನೆ ತಲುಪುತ್ತಿಲ್ಲ. ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆಯಲ್ಲಿ ಕೂಡ ಕೆಲ ಲೋಪಗಳು ನಡೆದಿದ್ದು, ಕಾರ್ಡುಗಳು ವಿದ್ಯಾರ್ಥಿಗಳಿಗೆ, ಸ್ವಯಂ ಉದ್ಯೋಗಿಗಳಿಗೆ, ರೈತರಿಗೆ ವಿತರಣೆಯಾಗುತ್ತಿವೆ.
 ಎಚ್‌.ಕೆ. ರಾಮಚಂದ್ರಪ್ಪ, ಕಾರ್ಮಿಕ ಮುಖಂಡರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.