ಮನೆಯಿಂದಲೇ ಯೋಗ ದಿನ ಯಶಸ್ವಿಗೊಳಿಸೋಣ


Team Udayavani, Jun 20, 2020, 8:32 AM IST

ಮನೆಯಿಂದಲೇ ಯೋಗ ದಿನ ಯಶಸ್ವಿಗೊಳಿಸೋಣ

ದಾವಣಗೆರೆ: ಮನೆ ಮತ್ತು ಮನದಿಂದಲೇ ಯೋಗ ಪ್ರಾರಂಭ ಮಾಡುವ ಮುಖೇನ ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನವನ್ನು ಯಶಸ್ವಿಗೊಳಿಸೋಣ ಎಂದು ದಾವಣಗೆರೆಯ ಶ್ರೀಮತಿ ತುಳಸಿ ರಾಮರಾಜು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮೆಡಿಕಲ್‌ ಡೈರಕ್ಟರ್‌ ಡಾ| ವಿಂಧ್ಯ ಗಂಗಾಧರ ವರ್ಮ ಮನವಿ ಮಾಡಿದ್ದಾರೆ.

ಯೋಗ ನಮ್ಮ ಪುರಾತನ ತತ್ವಶಾಸ್ತ್ರ. ಒಂದು ಜೀವನ ಶೈಲಿ ಹಾಗೂ ಕಲೆ. ಒಬ್ಬ ಮನುಷ್ಯನ ಸರ್ವೋನ್ನತ ಏಳಿಗೆಗೆ ತುಂಬಾ ಸಹಕಾರಿ. ಯೋಗ ಇಂದು ವಿಶ್ವಮಾನ್ಯವಾಗಿ ಜಾತಿ, ಮತ, ಧರ್ಮಗಳನ್ನು ಮೀರಿ ಬೆಳೆಯುತ್ತಿದೆ. ಎಲ್ಲಾ ಪಂಥದ ಜನರೂ ಒಂದಲ್ಲ ಒಂದು ಕಾರಣಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಯೋಗ ವಿಶ್ವದಾದ್ಯಂತ ಜನಪ್ರಿಯವಾಗುತ್ತಿರುವುದೇನೋ ನಿಜ. ಆದರೆ ಮೂಲ ಉದ್ದೇಶವೂ ಮರೆಯಾಗುವಂತಿದೆ. ಯೋಗದಿಂದ ಆಕರ್ಷಕ ಮೈಕಟ್ಟನ್ನು ಪಡೆಯುವ ಹಂಬಲ ಕೆಲವರಿಗಾದರೆ, ಕೆಲವರಿಗೆ ಮುಪ್ಪಿನಲ್ಲೂ ಯುವಕರಂತೆ ಕಾಣಿಸಿಕೊಳ್ಳುವ ಬಯಕೆ. ಇದೆಲ್ಲವೂ ಯೋಗದಿಂದ ಸಾಧ್ಯ. ಭಾರತೀಯ ಪುರಾತನ ವೈದ್ಯಪದ್ಧತಿಗಳ ಪ್ರಕಾರ ಯೋಗದ ಅಭ್ಯಾಸ ಮನುಷ್ಯನ ಆತ್ಮವನ್ನು ಪರಮಾತ್ಮನೊಂದಿಗೆ ಸೇರಿಸುವ ಪ್ರಕ್ರಿಯೆ ಎಂದು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಯೋಗದ ಎಲ್ಲ ಎಂಟು ಅಂಗಗಳು (ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರಥ್ಯಾಹಾರ, ಧಾರಣ, ಧ್ಯಾನ ಮತ್ತು ಸಮಾ ) ಮನುಷ್ಯನ ಆರೋಗ್ಯ ಮತ್ತು ಜೀವನಕ್ರಮದ ಮೇಲೆ ಮಹತ್ತರವಾದ ಪರಿಣಾಮ ಬೀರುತ್ತದೆ. ಈ ಅಭ್ಯಾಸಗಳು ಕೇವಲ ದೇಹವನ್ನು ಮಾತ್ರವಲ್ಲದೆ ಮನಸ್ಸನ್ನೂ ನಿಯಂತ್ರಣಕ್ಕೆ ತಂದುಕೊಳ್ಳುತ್ತದೆ. ಎಲ್ಲರಿಗೂ ತಿಳಿದಂತೆ ಯೋಗವು ದೈಹಿಕವಾಗಿ, ಮಾನಸಿಕವಾಗಿ, ಭಾವನಾತ್ಮಕವಾಗಿ, ಸಾಮಾಜಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಸಮತೋಲನದ ಸ್ಥಿತಿಗೆ ತರುವಂತದ್ದಾಗಿದೆ. ಹಾಗಾಗಿ ಇಂದು ವಿಶ್ವಮಾನ್ಯವಾಗಿ ಪ್ರತಿಯೊಬ್ಬರೂ ಇದನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಯೋಗದ ಅಭ್ಯಾಸಗಳಾದ ಆಸನ, ಕ್ರಿಯೆ, ಪ್ರಾಣಾಯಾಮ, ಧಾರಣ, ಧ್ಯಾನವು ವೈಜ್ಞಾನಿಕವಾಗಿ ಹೆಚ್ಚು ಪ್ರಚಲಿತದಲ್ಲಿದ್ದು ದೈಹಿಕ, ಉಸಿರಾಟ, ಮನೋದೈಹಿಕ ತೊಂದರೆ ತಡೆಯುವಲ್ಲಿ ಮತ್ತು ನಿವಾರಿಸುವಲ್ಲಿ, ಜೀವನಕ್ರಮದ ಬದಲಾವಣೆಯಿಂದ ಕಾಣಿಸುವ ತೊಂದರೆ, ಮೆಟಬಾಲಿಕ್‌, ನರಗಳು, ದೀರ್ಘ‌ಕಾಲಿಕ ತೊಂದರೆ ಯಶಸ್ವಿಯಾಗಿ ಸರಿಪಡಿಸುವುದರಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ ಎಂದು ಸಂಶೋಧನೆಗಳಿಂದ ದೃಢಪಡಿಸಲಾಗಿದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಯೋಗದ ಅಳವಡಿಕ ನಮ್ಮನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸಿ ಯಾವಾಗಲೂ ಸಂತೋಷದಿಂದಿರಲು ಮತ್ತು ಆರೋಗ್ಯವಂತರಾಗಿರಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ಜೂ. 21 ರಂದು ಬೆಳಗ್ಗೆ ಸಾರ್ವಜನಿಕರು, ಯೋಗಬಂಧುಗಳು ತಮ್ಮ ಕುಟುಂಬ ದೊಂದಿಗೆ ಆಚರಿಸಿ ಮನೆಯಲ್ಲಿ ಯೋಗ – ಕುಟುಂಬದೊಂದಿಗೆ ಯೋಗ… ಧ್ಯೇಯ ವಾಕ್ಯದೊಂದಿಗೆ ಯಶಸ್ವಿಗೊಳಿಸ ಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.