ನ್ಯಾಯಾಲಯ ಆದೇಶ ಪುನರ್‌ ಪರಿಶೀಲಿಸಲಿ


Team Udayavani, Nov 23, 2018, 1:13 PM IST

dvg-1.jpg

ದಾವಣಗೆರೆ: ಶಬರಿಮಲೈ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ತ್ವರಿತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಗುರುವಾರ ಅಯ್ಯಪ್ಪಸ್ವಾಮಿ ಕ್ಷೇತ್ರ ರಕ್ಷಣಾ ಸಮಿತಿ ಕಾರ್ಯಕರ್ತರು
ಪ್ರತಿಭಟಿಸಿದ್ದಾರೆ.

ಜಯದೇವ ವೃತ್ತದಲ್ಲಿ ಜಮಾಯಿಸಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಪಿ.ಬಿ. ರಸ್ತೆ ಮಾರ್ಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಶಬರಿಮಲೈ ಶ್ರೀ ಕ್ಷೇತ್ರಕ್ಕೆ ಈವರೆಗೆ ನಿರ್ಬಂಧವಿದ್ದ ಮಹಿಳಾ ಪ್ರವೇಶವನ್ನು ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ
ತೆರವು ಮಾಡಲಾಗಿದೆ. ಈ ಕ್ರಮ ಸ್ವಾಗತಾರ್ಹ. ಈ ಕ್ಷೇತ್ರದಲ್ಲಿ ಮಹಿಳೆಯರಿಗೆ ಪ್ರವೇಶ ವಿಚಾರವನ್ನು ಧಾರ್ಮಿಕ ನಂಬಿಕೆ ಇಲ್ಲದವರು ಅನಾವಶ್ಯಕವಾಗಿ ವಿವಾದಕ್ಕೆ ಎಡೆ ಮಾಡಿಕೊಡುತ್ತಿದ್ದಾರೆ.

ಕೂಡಲೇ ನ್ಯಾಯಾಲಯ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಕೋರಿದರು. ಶಬರಮಲೈನ ಧಾರ್ಮಿಕ ನಂಬಿಕೆಗಳ ಉಳಿವಿಗಾಗಿ ಶಾಂತಿಯುತ ಹೋರಾಟ ಮಾಡುತ್ತಿರುವ ಅಯ್ಯಪ್ಪ ಮಾಲಾಧಾರಿಗಳು ಹಾಗೂ ಭಕ್ತರು, ಬಿಜೆಪಿ ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ಪೊಲೀಸ್‌ ದೌರ್ಜನ್ಯ ತಡೆಯುವಂತೆ ಕೇರಳ ಸರ್ಕಾರಕ್ಕೆ ಸೂಚನೆ ನೀಡಬೇಕು. ಬಂಧಿತರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಶಬರಿಮಲೈಯ ಈ ವಿವಾದ ಸಂಬಂಧ ಕೇರಳ ಸರ್ಕಾರ ತನ್ನ ಹಿಂದೂ ವಿರೋಧಿ ಧೋರಣೆ ಕೈಬಿಡಬೇಕು, ಸುಪ್ರೀಂಕೋರ್ಟ್‌ ನಲ್ಲಿ ಭಕ್ತರ ನಂಬಿಕೆಗೆ ಪೂರಕವಾಗುವಂತೆ ಮೇಲ್ಮನವಿ ಸಲ್ಲಿಸಬೇಕು. ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಈ ಸಮಸ್ಯೆಗೆ ಸೂಕ್ತ ಪರಿಹಾರ ಸೂಚಿಸಬೇಕು. ಮರುಪರಿಶೀಲನೆ ಅರ್ಜಿ ವಿಚಾರಣಾ ಹಂತದಲ್ಲಿರುವಾಗ ಆದೇಶವನ್ನೇ ನೆಪವಾಗಿಟ್ಟುಕೊಂಡು 10 ರಿಂದ 50
ವರ್ಷದೊಳಗಿನ ಮಹಿಳೆಯರು ಶಬರಿಮಲೈ ಪ್ರವೇಶಿಸುವ ಯತ್ನ ಮಾಡಬಾರದು. 

ಸರ್ವೋಚ್ಚ ನ್ಯಾಯಾಲಯ ತನ್ನ ಮುಂದಿರುವ ಮರುಪರಿಶೀಲನಾ ಅರ್ಜಿಯನ್ನು ಅತೀ ಶೀಘ್ರದಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು. ಮಹಾನಗರ ಪಾಲಿಕೆ ಸದಸ್ಯ ಡಿ.ಕೆ. ಕುಮಾರ್‌, ವಿಧಾನ ಪರಿಷತ್‌ ಮಾಜಿ ಮುಖ್ಯ ಸಚೇತಕ ಡಾ| ಎ.ಎಚ್‌. ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಮುಖಂಡರಾದ ಕೆ.ಬಿ. ಶಂಕರನಾರಾಯಣ, ಎಚ್‌.ಎಸ್‌. ನಾಗರಾಜ್‌, ಸಮಿತಿ ಸಂಚಾಲಕ ಉಮಾಪತಿ, ರಾಜನಹಳ್ಳಿ ಶಿವಕುಮಾರ್‌, ಆಣಬೇರು ಜೀವನಮೂರ್ತಿ, ಪಿ.ಸಿ. ಶ್ರೀನಿವಾಸ್‌, ರಾಜಶೇಖರ್‌, ಜೊಳ್ಳಿ ಗುರು, ಸತೀಶ್‌ ಪೂಜಾರಿ, ವೀರೇಶ್‌ ಪೈಲ್ವಾನ್‌, ಗುಮ್ಮನೂರು ಶ್ರೀನಿವಾಸ್‌, ಎಲ್‌.ಡಿ. ಗೋಣೆಪ್ಪ, ಮಾಲಾಧಾರಿಗಳಾದ ಹಾಲೇಶ್‌ ಸ್ವಾಮಿ, ಚೌವ್ಹಾಣ್‌ ಸ್ವಾಮಿ,ಜಗದೀಶ್‌ ಸ್ವಾಮಿ ಸೇರಿದಂತೆ ಸಮಿತಿಯ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.